ಗ್ರಾಹಕರ ಮನಗೆಲ್ಲಲು ಗುಣಮಟ್ಟ-ವಿಭಿನ್ನತೆ ಮುಖ್ಯ

ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ಪನ್ನಗಳ ಪ್ರಚಾರ ಮಾಡುವುದು ಅವಶ್ಯಕ

Team Udayavani, Mar 13, 2022, 11:58 AM IST

6

ಹುಬ್ಬಳ್ಳಿ: ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಉತ್ಪನ್ನಗಳು ಗ್ರಾಹಕರ ಮನ ಗೆಲ್ಲಬೇಕಾದರೆ ಗುಣಮಟ್ಟ, ಮಾರ್ಕೆಟಿಂಗ್‌, ವಿಭಿನ್ನತೆ, ಹೊಸತನ ಹೊಂದಿರುವುದು ಬಹಳ ಮುಖ್ಯವೆಂದು ನಬಾರ್ಡ್‌ನ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಮಯೂರ ಕಾಂಬಳೆ ಹೇಳಿದರು.

ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನದಲ್ಲಿ ದೇಶಪಾಂಡೆ ಫೌಂಡೇಶನ್‌ನಿಂದ ಆಯೋಜಿಸಿರುವ ಉದ್ಯಮಿ ಮೆಗಾ ಉತ್ಸವ ಹಾಗೂ ಸ್ವಾವಲಂಬಿ ಸಖೀ ಉತ್ಪಾದಕರ ಕಂಪನಿ(ಎಸ್‌ಎಸ್‌ಪಿಸಿಎಲ್‌) 2ನೇ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿದರು.

ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಉತ್ಪಾದಕರು ಉತ್ಪನ್ನಗಳನ್ನು ಗುಣಮಟ್ಟದೊಂದಿಗೆ ಯಾವ ರೀತಿ ವಿಭಿನ್ನವಾಗಿ ಸಿದ್ಧಪಡಿಸಿಕೊಳ್ಳಬೇಕೆಂಬುದು ಮುಖ್ಯ. ಗುಣಮಟ್ಟದಲ್ಲಿ ಯಾವುದೇ ರೀತಿ ಹೊಂದಾಣಿಕೆ ಮಾಡಿಕೊಳ್ಳದೆ ಹೊಸತನ ಅಳವಡಿಸಿಕೊಂಡು ತಯಾರಿಸಬೇಕು. ಅಂದಾಗ ಕೊಳ್ಳುವವರನ್ನು ಸೆಳೆಯಲು ಸಾಧ್ಯ. ಉತ್ಪನ್ನಗಳಲ್ಲಿನ ಸುಧಾರಣೆ ನಿರಂತರವಾಗಿರಬೇಕು. ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ಪನ್ನಗಳ ಪ್ರಚಾರ ಮಾಡುವುದು ಅತೀ ಅವಶ್ಯ. ಶೀಘ್ರವೇ ಎಸ್‌ಎಸ್‌ಪಿಸಿಎಲ್‌ನ ಆನ್‌ಲೈನ್‌ ಪೋರ್ಟಲ್‌ ಬಿಡುಗಡೆ ಮಾಡಲಾಗುವುದು ಎಂದರು.

ದೇಶಪಾಂಡೆ ಫೌಂಡೇಶನ್‌ ಸಿಇಒ ಕಚೇರಿ ಕಾರ್ಯನಿರ್ವಾಹಕ ಸಂದೀಪ ಸಬರವಾಲ ಮಾತನಾಡಿ, ಉತ್ಪನ್ನಗಳನ್ನು ತಯಾರಿಸುವ ಮಹಿಳಾ ಗುಂಪುಗಳು ತೆಗೆದುಕೊಳ್ಳುವ ಸಾಲಕ್ಕೆ ಕೇಂದ್ರ ಸರಕಾರ ಶೇ.50 ಸಬ್ಸಿಡಿ ನೀಡುತ್ತಿದೆ. ಬಡ್ಡಿದರ ಶೇ.8.5ರಷ್ಟಾಗಿದೆ. ಮಹಿಳಾ ಉದ್ಯಮದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಎಸ್‌ಎಸ್‌ಪಿಸಿಎಲ್‌ 254 ಸದಸ್ಯರನ್ನು ಹೊಂದಿದ್ದು, ಈ ಸಂಸ್ಥೆಯು ಸಹಿತ ಲಿಜ್ಜತ್‌ ಪಾಪಡ್‌ ಕಂಪನಿ ಮಾದರಿಯಲ್ಲಿ ಅಭಿವೃದ್ಧಿ ಹೊಂದಬೇಕು. ಇನ್ನೈದು ವರ್ಷಗಳಲ್ಲಿ ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಹೆಸರು ಮಾಡಬೇಕು ಎಂದರು.

ದೇಶಪಾಂಡೆ ಫೌಂಡೇಶನ್‌ ಸಣ್ಣ ಉದ್ದಿಮೆದಾರರ ಅಭಿವೃದ್ಧಿ ಕಾರ್ಯಕ್ರಮದ ಸಹಾಯಕ ವ್ಯವಸ್ಥಾಪಕಿ ರಾಜೇಶ್ವರಿ ಲದ್ದಿ ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಎಸ್‌ಎಸ್‌ಪಿಸಿಎಲ್‌ಗೆ ಹೊಸ ನಿರ್ದೇಶಕರನ್ನು ನೇಮಿಸಲಾಯಿತು. ಮಹಿಳಾ ಉದ್ಯಮದಾರರಿಗೆ ಬಿಸಿನೆಸ್‌ ಸಖೀ (ಬಿ-ಸಖೀ) ಗೌರವ ನೀಡಲಾಯಿತು. ಈರಣ್ಣ ರೊಟ್ಟಿ, ಪುಷ್ಪಾಂಜಲಿ, ಸುನಿತಾ ಪಾಟೀಲ, ಸಂಜನಾ ಪಾಯದೆ, ಚಿನ್ಮಯಿ ಪಾಟೀಲ, ಶಾರದಾ, ರುದ್ರಮ್ಮ, ಸುನಂದಾ ಮೊದಲಾದವರಿದ್ದರು. ಪ್ರವೀಣಕುಮಾರ ನಿಶಾನಿಮಠ ನಿರೂಪಿಸಿದರು. ಉತ್ಸವದಲ್ಲಿ70ಕ್ಕೂ ಹೆಚ್ಚು ಮಳಿಗೆಗಳು ಇವೆ. ಮಾ. 15ರ ವರೆಗೆ ನಡೆಯಲಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.