ರಸ್ತೆಗಳಿಗೆ ರಂಗೋಲಿ; ಕಾಂಗ್ರೆಸ್ ಪ್ರತಿಭಟನೆ
ಮೂಲ ಸೌಲಭ್ಯ ಕಲಿಸುವಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟರ ವಿಫಲ-ಆರೋಪ
Team Udayavani, Apr 28, 2022, 10:36 AM IST
ಹುಬ್ಬಳ್ಳಿ: ಮೂಲ ಸೌಲಭ್ಯ ಕಲ್ಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ರಸ್ತೆಗಳಿಗೆ ರಂಗೋಲಿಯಿಂದ ಅಲಂಕಾರ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.
ಹಲವು ಸಮಸ್ಯೆಗಳ ಕುರಿತು ಸ್ಥಳೀಯರು ಶಾಸಕರು ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದೆ. ಹೋರಾಟಗಳನ್ನು ಕೂಡ ಮಾಡಲಾಲಾಗಿದೆ. ಆದರೆ ಜನರ ಸಮಸ್ಯೆಗಳಿಗೆ ಕಿವಿಗೊಡುವ ಕಾಳಜಿಯಿಲ್ಲದಂತಾಗಿದೆ. ಹೀಗಾಗಿ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ಗಮನ ಸೆಳೆಯುವ ನಿಟ್ಟಿನಲ್ಲಿ ರಂಗೋಲಿ ಬಿಡಿಸಿ ಪ್ರತಿಭಟಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಮಾತನಾಡಿ, ಅವರು ವಾರ್ಡ್ 58ರ ಪ್ರತಿಷ್ಠಿತ ಓಂ ಹೋಟೆಲ್ ಎದುರಿನ ಕೇಕ್ ಕಾರ್ನ್ ದಿಂದ ಸೈಂಟ್ ಮೈಕಲ್ ಸ್ಕೂಲ್ ಹತ್ತಿರದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಅದನ್ನು ಸರಿಪಡಿಸಬೇಕಾದ ಅಧಿಕಾರಿಗಳು ಇತ್ತ ಕಣ್ತೆರೆದು ನೋಡುತ್ತಿಲ್ಲ. ಜತೆಗೆ ಈ ಭಾಗದ ಶಾಸಕರು ಕಣ್ತೆರೆದು ನೋಡುತ್ತಿಲ್ಲ. ತಾವು ಓಡಾಡುವ ರಸ್ತೆಗಳನ್ನು ಹೈಟೆಕ್ ಮಾದರಿಯಲ್ಲಿ ಮಾಡಿಕೊಂಡಿದ್ದಾರೆ. ಜನರ ಸಾಮಾನ್ಯ ರಸ್ತೆಗಳ ದುಸ್ಥಿತಿ ಅವರಿಗೆ ಕಾಣುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ಸಂತೋಷ ಚಲವಾದಿ, ಹೂವಪ್ಪ ದಾಯಗೋಡಿ, ತೇಜರಾಜ್ ಜೈನ್, ಪ್ರೀತೇಶ ಪಾಲ್ಗೊಟ, ಸುರೇಶ, ಅಶೋಕ ನರಗುಂದ ಸೇರಿದಂತೆ ಸ್ಥಳೀಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!