ನವಲೂರು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಶೆಟ್ಟರ ಸೂಚನೆ
Team Udayavani, Jun 26, 2020, 10:08 AM IST
ಧಾರವಾಡ: ಕಳೆದ ಒಂದೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ನವಲೂರು ಬಿಆರ್ಟಿಎಸ್ ರೋಡ್ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗ್ರಾಮಸ್ಥರಿಗೆ ಅನುಕೂಲ ಹಾಗೂ ತಾಂತ್ರಿಕವಾಗಿ ಕಾರ್ಯಗತವಾಗಬಹುದಾದ ರೀತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಹೊಸ ಸಂಸ್ಥೆಯ ಸಮಾಲೋಚಕರನ್ನು ಬಳಸಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ನಗರದ ಖನಿಜ ಭವನದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಕೆಆರ್ಡಿಎಸಿಎಲ್, ಹೆಚ್ಡಿಬಿಆರ್ಟಿಎಸ್ ಹಾಗೂ ನವಲೂರಿನ ಗ್ರಾಮಸ್ಥರೊಂದಿಗೆ ಸಭೆ ಕೈಗೊಂಡು ಅವರು ಮಾತನಾಡಿದರು. ನವಲೂರಿನ ಬಳಿ ರೋಡ್ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಅಲ್ಲಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಪೂರ್ಣಗೊಳಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ತಾಂತ್ರಿಕ ಸಮಿತಿ ಸಲಹೆ ಜತೆಯಲ್ಲೇ ಮೂರನೇ ಸಂಸ್ಥೆಯ ಸಹಾಯವನ್ನು ಪಡೆಯುವಂತೆ ಸೂಚನೆ ನೀಡಿದರು.
ಇದೇ ವೇಳೆ ನಗರ ಭೂ ಸಾರಿಗೆ ನಿರ್ದೇಶನಾಲಯದ ಹಿರಿಯ ಅಧಿಕಾರಿಯಾದ ಮಂಜುಳಾ ಅವರು ನೀಡಿದ ನಾಲ್ಕು ಆಯ್ಕೆಗಳನ್ನು ಪರಾಮರ್ಶಿಸಿದರು. ಅಲ್ಲದೆ, ಈ ಆಯ್ಕೆಗಳಿಗೆ ಗ್ರಾಮಸ್ಥರು ಮುಂದಿಟ್ಟ ಸಮಸ್ಯೆಗಳನ್ನು ಆಲಿಸಿದರು. ಶಾಸಕ ಅರವಿಂದ ಬೆಲ್ಲದ, ಕೆಆರ್ ಡಿಸಿಎಲ್ ಎಂಡಿ ಪ್ರಕಾಶ್ ಕುಮಾರ್, ತಾಂತ್ರಿಕ ನಿರ್ದೇಶಕ ಜಯಪ್ರಕಾಶ್ ಸೇರಿದಂತೆ ನವಲೂರಿನ ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…