ಆಯುಷ್‌ ವೈದ್ಯರ ಬಗ್ಗೆ ರಾಜ್ಯ ಸರ್ಕಾರದ ಅನಾದರ..

ಸಮರ್ಪಕ ವೇತನ, ಸೇವಾಭದ್ರತೆ ನೀಡದೆ ಅನಾಥರನ್ನಾಗಿಸುವ ಯತ್ನ ಎಂದು ವೈದ್ಯರ ಅಳಲು

Team Udayavani, Oct 23, 2022, 3:43 PM IST

16

ಹುಬ್ಬಳ್ಳಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದ್ದ ಕಡೆ ಹಾಗೂ ಹೆಚ್ಚುವರಿಯಾಗಿ 686 ಆಯಷ್‌ ವೈದ್ಯರನ್ನು ಗುತ್ತಿಗೆಯಾಧಾರದಲ್ಲಿ ನೇಮಿಸಿದ್ದ ಸರ್ಕಾರ, ಸುಮಾರು 15 ವರ್ಷ ಅವರ ಸೇವೆ ಪಡೆಯುವುದಲ್ಲದೇ ಅವರಿಗೆ ಸಮರ್ಪಕ ವೇತನ, ಸೇವಾಭದ್ರತೆ ನೀಡದೆ ಅನಾಥರನ್ನಾಗಿಸುವ ಯತ್ನಕ್ಕೆ ಮುಂದಾಗಿದೆ.

ಒಂದು ಕಡೆ ಕೇಂದ್ರ ಸರ್ಕಾರ ಭಾರತೀಯ ವೈದ್ಯ ಪದ್ಧತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ಸರ್ಕಾರ ಸರಿಸುಮಾರು ಒಂದೂವರೆ ದಶಕಗಳಿಂದ ವಿವಿಧ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳಿಂದ ಆಯುಷ್‌ ವೈದ್ಯರ ಸೇವೆ ಪಡೆಯುತ್ತಿದ್ದರೂ, ನಮಗೆ ಸೇವಾ ಭದ್ರತೆ ಯಾಗಲಿ, ಸಮರ್ಪಕ ವೇತನವಾಗಲಿ, ವಿವಿಧ ಸೌಲಭ್ಯಗಳನ್ನಾಗಲಿ ನೀಡುತ್ತಿಲ್ಲ ಎಂಬ ಅಳಲು ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಲುತ್ತಿರುವ ಆಯುಷ್‌ ವೈದ್ಯರದ್ದಾಗಿದೆ.

ಕೆಲಸಕ್ಕಿರಲಿ ಸೌಲಭ್ಯ ಬೇಡ: ಕೇಂದ್ರ ಸರ್ಕಾರ ಪ್ರಾಯೋಜಿತ ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿ ರಾಜ್ಯದಲ್ಲಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಇಲ್ಲದ ಕಡೆ ಹಾಗೂ ವೈದ್ಯರು ಇದ್ದ ಕಡೆಗಳಲ್ಲಿ ಹೆಚ್ಚುವರಿ ವೈದ್ಯರು ಎಂದು ಬಿಎಎಂಎಸ್‌, ಬಿಎಚ್‌ಎಂಎಸ್‌ ಪದವಿ ಪಡೆದ ಆಯುಷ್‌ ವೈದ್ಯರನ್ನು ಅವರ ಅರ್ಹತೆ ಹಾಗೂ ಮೀಸಲಾತಿ ಅಡಿಯಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು 2008ರಲ್ಲಿ ಎನ್‌ಆರ್‌ ಎಚ್‌ಎಂ(ಇದೀಗ ಎನ್‌ಎಚ್‌ಎಂ ಆಗಿದೆ) ಅಡಿಯಲ್ಲಿ ನೇಮಕ ಮಾಡಿದ್ದರು.

2008ರಲ್ಲಿ ಇವರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡಿದ್ದಾಗ ವೈದ್ಯರಿಗೆ ಕೇವಲ 6 ಸಾವಿರ ರೂ. ಮಾಸಿಕ ವೇತನ ನೀಡಲಾಗುತ್ತಿತ್ತು. 2016-17ರಲ್ಲಿ ಕೇಂದ್ರ ಸರ್ಕಾರ ಆಯುಷ್‌ ವೈದ್ಯರಿಗೆ ಕನಿಷ್ಠ 25 ಸಾವಿರ ರೂ. ವೇತನ ನೀಡ ಬೇಕೆಂದು ಸೂಚಿಸಿದ್ದರೂ ಇಂದಿಗೂ ಆಯುಷ್‌ ವೈದ್ಯರಿಗೆ ಕನಿಷ್ಠ ವೇತನ ದೊರೆಯುತ್ತಿಲ್ಲ. ಪ್ರಸ್ತುತ ಮಾಸಿಕ 23 ಸಾವಿರ ರೂ. ವೇತನ ಪಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಸಮಾನ ಕೆಲಸಕ್ಕೆ ಸಮಾನ ವೇತನ ಎಂದು ಹೇಳುತ್ತಿದೆಯಾದರೂ ಎನ್‌ಎಚ್‌ಎಂ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು 14-15 ವರ್ಷ ಸೇವೆ ಸಲ್ಲಿಸಿದರೂ ಆಯುಷ್‌ ವೈದ್ಯರಿಗೆ ಸಮಾನ ವೇತನವಿರಲಿ, ಕನಿಷ್ಠ ವೇತನ-ಸೌಲಭ್ಯಗಳು ಇಲ್ಲದಂತಾಗಿದೆ.

ರಾಜ್ಯ ಸರ್ಕಾರ 2020ರಲ್ಲಿ ವೈದ್ಯರ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿತ್ತು. ಎಂಬಿಬಿಎಸ್‌ ವೈದ್ಯರಿಗೆ ಮಾಸಿಕ 60 ಸಾವಿರ ರೂ.ವರೆಗೆ ಹಾಗೂ ಎನ್‌ ಎಚ್‌ಎಂ ಹೊರತುಪಡಿಸಿ ಆಯುಷ್‌ ವೈದ್ಯ ರಿಗೆ ಮಾಸಿಕ 45 ಸಾವಿರ ರೂ.ಗಳ ವೇತನ ಪರಿಷ್ಕರಿಸಲಾಗಿದೆ. ಪರಿಷ್ಕೃತ ಭಾಗ್ಯ ಮಾತ್ರ 15 ವರ್ಷಗಳಿಂದ ಎನ್‌ಎಚ್‌ಎಂ ಅಡಿ ಸೇವೆ ಸಲ್ಲಿಸುತ್ತಿರುವ ಆಯುಷ್‌ ವೈದ್ಯರಿಗೆ ದೊರೆತಿಲ್ಲ.

ಎಂಬಿಬಿಎಸ್‌ ಹಾಗೂ ಸರ್ಕಾರದಿಂದ ನೇಮಕಗೊಂಡ ಆಯುಷ್‌ ವೈದ್ಯರೊಂದಿಗೆ ಸರಿಸಮಾನ ವಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ವೇತನ ಮತ್ತು ಸೌಲಭ್ಯ, ಸೇವಾ ಸೌಲಭ್ಯಗಳಲ್ಲಿ ವ್ಯತ್ಯಾಸವಿದೆ. ಜತೆಯಲ್ಲಿದ್ದುಕೊಂಡೇ ಅವರಷ್ಟೇ ಸೇವೆ ನೀಡಿದರೂ, ಹೇಳಿಕೊಳ್ಳುವುದಕ್ಕೆ ವೈದ್ಯರು ಆದರೆ, ಅದೇ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಿಗೆ ಇರು ವಷ್ಟು ವೇತನ ಪಡೆದು ಬದುಕಬೇಕಾದ ಸ್ಥಿತಿ ಆಯುಷ್ಯ ವೈದ್ಯರದ್ದಾಗಿದೆ.

ಕಾರ್ಮಿಕ ಇಲಾಖೆ ಅಧಿಸೂಚನೆಯಂತೆ ಆಯುಷ್‌ ವೈದ್ಯರಿಗೆ ಕನಿಷ್ಠ 40 ಸಾವಿರ ರೂ. ವೇತನ ನೀಡಬೇಕೆಂದು 2017ರಲ್ಲಿಯೇ ಸೂಚಿಸಿ ದ್ದರೂ ಇದುವರೆಗೂ ಅದು ಅನುಷ್ಠಾನಗೊಂಡಿಲ್ಲ. ರಾಜ್ಯ ಸರ್ಕಾರ 2020ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಆಯುಷ್‌ ವೈದ್ಯರ ವೇತನ ಮಾಸಿಕ 40 ಸಾವಿರ ರೂ.ಗಳಿಗೆ ಹೆಚ್ಚಿಸಲಿದ್ದು, ಅದಕ್ಕೆ ವಾರ್ಷಿಕ 16 ಕೋಟಿ ರೂ. ವ್ಯಯವಾಗಲಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಇದೇ ವರ್ಷ ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ನರ್ಸಿಂಗ್‌ ಹೋಂಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಆಧಾರಿತ ಆಯುಷ್‌ ವೈದ್ಯರಿಗೆ ಮಾಸಿಕ 40 ಸಾವಿರ ರೂ.ವೇತನ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿಕೆ ನೀಡಿದ್ದರೂ ಈ ದಿನದವರೆಗೂ ಆಯುಷ್‌ ವೈದ್ಯರು ಪಡೆಯುತ್ತಿರುವ ಮಾಸಿಕ 23 ಸಾವಿರ ರೂ. ವೇತನದಲ್ಲಿ ಒಂದು ರೂಪಾಯಿಯೂ ಹೆಚ್ಚಳವಾಗಿಲ್ಲ.

2008ರಿಂದಲೇ ಸೇವೆ ಸಲ್ಲಿಸುತ್ತಿರುವ ಸುಮಾರು 686 ಆಯುಷ್‌ ವೈದ್ಯರಿಗೆ ಇಂದಿಗೂ ಸೇವಾಭದ್ರತೆಯ ಯಾವ ಭರವಸೆಯೂ ಇಲ್ಲ.

ಎನ್‌ಎಚ್‌ಎಂ ಯೋಜನೆಯಡಿಯಲ್ಲಿಯೇ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ನೆರೆಯ ಗೋವಾ, ಆಂಧ್ರಪ್ರದೇಶ, ಮಧ್ಯಪ್ರದೇಶ ಇನ್ನಿತರೆ ಕಡೆಗಳಲ್ಲಿ 50-80 ಸಾವಿರ ರೂ.ಗಳವರೆಗೆ ವೇತನ ನೀಡಲಾಗುತ್ತದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಮಾಸಿಕ 23 ಸಾವಿರ ರೂ. ನೀಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಕರ್ನಾಟಕ ಆಯುಷ್‌ ವೈದ್ಯಾಧಿಕಾರಿಗಳ ಸಂಘದ ಡಾ|ಸುರೇ ಶಾಚಾರ್ಯ ಹಾಗೂ ಡಾ| ಮಹಾವೀರ ಹಾವೇರಿ ಅವರ ಪಶ್ನೆಯಾಗಿದೆ.

ವೈದ್ಯರು ಇಲ್ಲದ ಸಂದರ್ಭದಲ್ಲಿ ಸರ್ಕಾರ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಗುತ್ತಿಗೆಯಡಿ ನೇಮಿಸಿಕೊಂಡು ಕಳೆದ 15 ವರ್ಷಗಳಿಂದ ಸೇವೆ ಪಡೆದಿದೆ. ಆಡಳಿತಾತ್ಮಕ ವಿಷಯಗಳನ್ನು ಹೊರತು ಪಡಿಸಿ ಉಳಿದೆಲ್ಲ ಸೇವೆಗಳನ್ನು ಸಮಾನವಾಗಿ ನೀಡಿದ್ದೇವೆ. ಕೋವಿಡ್‌ ಸಂದರ್ಭದಲ್ಲೂ ಸೇವೆ ಸಲ್ಲಿಸಿದ್ದು, ಸೇವಾ ಭದ್ರತೆಯೂ ಇಲ್ಲ, ಸಮರ್ಪಕ ವೇತನವೂ ಇಲ್ಲವೆಂದರೆ ಹೇಗೆ. ಮಾಸಿಕ ವೇತನವನ್ನು 23 ಸಾವಿರ ರೂ.ನಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ●ಡಾ|ಸಿ.ದೇವಿಪ್ರಸಾದ, ಅಧ್ಯಕ್ಷರು, ಕರ್ನಾಟಕ ಆಯುಷ್‌ ವೈದ್ಯಾಧಿಕಾರಿಗಳ ಸಂಘ

-ಅಮರೇಗೌಡ ಗೋನವಾರ

 

 

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.