ಎಸ್‌ಎಸ್‌ಕೆ ಸಮಾಜ ರಾಜ್ಯಮಟ್ಟದ ಚಿಂತನ-ಮಂಥನ ಸಭೆ


Team Udayavani, Jul 11, 2022, 6:12 PM IST

18

ಹುಬ್ಬಳ್ಳಿ: ಎಸ್‌ಎಸ್‌ಕೆ ಸಮಾಜ ಚಿಂತನ- ಮಂಥನ ಸಮಿತಿ ಕರ್ನಾಟಕ ವತಿಯಿಂದ ಕೇಶ್ವಾಪುರ ಕುಸುಗಲ್ಲ ರಸ್ತೆ ಶಬರಿ ನಗರದ ಎಸ್‌ ಎಸ್‌ಕೆ ಹಾಲ್‌ನಲ್ಲಿ ಸಮಾಜದ ಗೋತ್ರಾವಳಿ/ ವಂಶಾವಳಿಯ ಮಹತ್ವ ಹಾಗೂ ಸಮಾಜದ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಸರಕಾರಿ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ರಾಜ್ಯಮಟ್ಟದ ಚಿಂತನ-ಮಂಥನ ಸಭೆ ಶನಿವಾರ ನಡೆಯಿತು.

ಜ್ಯೋತಿಷ್ಯ ಶಾಸ್ತ್ರದಲ್ಲಿ ಡಾಕ್ಟರೇಟ್‌ ಪದವಿ ಪಡೆದ ಶ್ರೀ ಭಾರತೀಶಾಚಾರ್ಯ ಹಾಗೂ ಆಯುರ್ವೇದ ವೈದ್ಯ ರಾಜು ದಾವಿ ಮಾತನಾಡಿ, ಶಾಸ್ತ್ರದಲ್ಲಿ ಸ್ವಗೋತ್ರದಲ್ಲಿ ವಿವಾಹ ನಿಷಿದ್ಧ. ಆದರೂ ಸ್ವಗೋತ್ರದಲ್ಲಿ ಮದುವೆಯಾದರೆ ಹುಟ್ಟುವ ಮಕ್ಕಳು ವಿಕಲಾಂಗರಾಗಿ ಹುಟ್ಟುತ್ತಾರೆ. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಇದರಿಂದ ಹಲವಾರು ರೋಗಗಳು ಬರುವ ಸಾಧ್ಯತೆ ಬಹಳ. ಯಾರು ಸ್ವಗೋತ್ರದಲ್ಲಿ ವಿವಾಹವಾಗುವ ದುಸ್ಸಾಹಸ ಮಾಡಿ ತಮ್ಮ ಪೀಳಿಗೆ ಕಷ್ಟಕ್ಕೆ ನೂಕಬೇಡಿ ಎಂದರು.

ಸಮಿತಿ ಪ್ರಮುಖ ಹನುಮಂತಸಾ ನಿರಂಜನ, ಸರಕಾರದ ದಾಖಲಾತಿಯಲ್ಲಿ ನಮ್ಮ ಸಮಾಜ ಒಬಿಸಿ 2ಎ ವರ್ಗದಲ್ಲಿದೆ. ಈಗಾಗಲೇ ನಾವು ಈ ವರ್ಗದಲ್ಲಿ ಸುಮಾರು 26 ಸಮಾಜದವರಿದ್ದು, ಈಗ ಕರ್ನಾಟಕದ ಬಹುದೊಡ್ಡ ಸಮಾಜದವರು ಸಹ ಒಬಿಸಿ 2ಎ ವರ್ಗದಲ್ಲಿ ಬರಲು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ನಾವು ನಮ್ಮ ಸಮಾಜವನ್ನು ಎಸ್‌ಸಿ/ ಎಸ್‌ಟಿ ಅಥವಾ 1ಎ ಇವುಗಳಲ್ಲಿ ಯಾವ ವರ್ಗದಲ್ಲಿ ಸೇರಿಸಿದರೆ ಅನುಕೂಲವಾಗುವುದು ಎಂಬ ಅಧ್ಯಯನಕ್ಕಾಗಿ ರಾಜ್ಯಮಟ್ಟದ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ಬಾಲಯೋಗಿನಿ ಮಹಾತಪಸ್ವಿ ಜಯಶ್ರೀ ಮಾತಾಜೀ, ಅಖಂಡ ಬ್ರಹ್ಮಚಾರಿತಾರಾನಾಥ ಮಹಾರಾಜರು, ಡಿ.ಸಿ. ಬಾಕಳೆ ಸಾನ್ನಿಧ್ಯ ವಹಿಸಿದ್ದರು. ಟಿ.ಎಂ. ಮೆಹರವಾಡೆ ಅಧ್ಯಕ್ಷತೆ ವಹಿಸಿದ್ದರು.

ಪ್ರಕಾಶಸಾ ಚೌವ್ಹಾಣ ಹಾಗೂ ಚತುಭುìಜಸಾ ಚೌವ್ಹಾಣ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪ್ರಮುಖರಾದ ವಿಠ್ಠಲ ಲದವಾ, ಕೃಷ್ಣಮೂರ್ತಿ ರಂಗ್ರೇಜ, ಎ.ಟಿ. ಪವಾರ, ಸುನೀಲ ವಾಳ್ವೆàಕರ, ಶ್ರೀಕಾಂತ ಹಬೀಬ, ಮಂಜುನಾಥ ಮಿಸ್ಕಿನ, ಅಭಿಷೇಕ ನಿರಂಜನ, ಸಾಗರ ಪವಾರ, ಹರೀಶ ಜರತಾರಘರ, ವಿನಾಯಕ ಕಬಾಡೆ, ಶಂಕರ ಪೂಜಾರಿ ಇನ್ನಿತರರಿದ್ದರು.

ಸರಳಾ ಬಾಂಢಗೆ, ರಾಜಶ್ರೀ ಜಡಿ, ನೀತು ಮೇತ್ರಾಣಿ ನಿರೂಪಿಸಿದರು. ಹೀರಾ ಸೋಳಂಕಿ ವಂದಿಸಿದರು.

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.