ಸತತ ಏಳು ಬಾರಿ ಗೆಲುವಿಗೆ ಶಿಕ್ಷಕರ ಆಶೀರ್ವಾದವೇ ಕಾರಣ

ಶಿಕ್ಷಕರಿಗೆ ಎಷ್ಟೊಂದು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ

Team Udayavani, Mar 15, 2022, 11:29 AM IST

3

ಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಸತತ ಏಳು ಬಾರಿ ವಿಧಾನ ಪರಿಷತ್ತುಗೆ ಆಯ್ಕೆ ಮಾಡಿದ ಸಮಸ್ತ ಶಿಕ್ಷಕರಿಗೆ ಎಷ್ಟೊಂದು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ. ದೇಶದಲ್ಲಿಯೇ ದಾಖಲೆ ರೂಪದಲ್ಲಿ ಸುದೀರ್ಘ‌ ಕಾಲಾವಧಿಯ ವಿಧಾನ ಪರಿಷತ್ತು ಸದಸ್ಯ ಎಂಬ ದಾಖಲೆಗೆ ಶಿಕ್ಷಕರ ಆಶೀರ್ವಾದವೇ ಕಾರಣವಾಗಿದೆ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಇಲ್ಲಿನ ಲ್ಯಾಮಿಂಗ್ಟನ್‌ ಪ್ರೌಢಶಾಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಕೇಂದ್ರ ಸಮಿತಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, 1980ರಿಂದ ಇಲ್ಲಿವರೆಗೆ ಶಿಕ್ಷಕರ ಪ್ರತಿನಿಧಿಯಾಗಿ ಸತತ ಆಯ್ಕೆ ಮಾಡಿದ್ದೀರಿ, ಇದೀಗ ಎಂಟನೇ ಬಾರಿಗೆ ಆಯ್ಕೆಗೆ ನಿಮ್ಮೆಲ್ಲರ ಆಶೀರ್ವಾದ, ಬೆಂಬಲ ಅಗತ್ಯವಾಗಿದೆ. ಸುಮಾರು 42 ವರ್ಷಗಳಿಂದ ವಿಧಾನ ಪರಿಷತ್ತುನಲ್ಲಿ ನಿಮ್ಮ ಪ್ರತಿನಿಧಿಯಾಗಿ ಸಮಸ್ತ ಶಿಕ್ಷಕ ಸಮುದಾಯದ ಸಮಸ್ಯೆ-ನೋವುಗಳಿಗೆ ಧ್ವನಿ ಎತ್ತಿದ್ದೇನೆ.ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಶಿಕ್ಷಕರ ಇನ್ನಷ್ಟು ಬೇಡಿಕೆ, ಸಮಸ್ಯೆಗಳ ಬಗ್ಗೆ ಸದನದಲ್ಲಿ ಹೋರಾಟ ನಡೆಸಲು, ಸರಕಾರದ ಗಮನ ಸೆಳೆಯುವ ಕೆಲಸ ಮಾಡುವೆ ಎಂದರು.

ಮುಂಬರುವ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಟೀಕೆ-ಟಿಪ್ಪಣಿಗಳಿಗೆ ಒತ್ತು ನೀಡದೆ ಕಳೆದ 42 ವರ್ಷಗಳಲ್ಲಿ ಸಲ್ಲಿಸಿದ ಶಿಕ್ಷಕರ ಸೇವೆಯ ಶ್ರೀರಕ್ಷೆ ನನಗಿದೆ. ಶಿಕ್ಷಕರ ಪರ ಎತ್ತಿದ ಧ್ವನಿ, ಹೋರಾಟ, ಪ್ರಾಮಾಣಿಕ ಸೇವೆಯನ್ನು ಮುಂದಿಟ್ಟುಕೊಂಡು ಮತಯಾಚನೆಗೆ ಮುಂದಾಗೋಣ. ಚುನಾವಣೆ ವಿಚಾರದಲ್ಲಿ ಯಾರೂ ಧೃತಿಗೆಡುವುದು ಬೇಡ. ಶಿಕ್ಷಕರ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡಿದ ಆತ್ಮ ತೃಪ್ತಿ ತಮಗಿದೆ ಎಂದರು.

ಕೇವಲ ಚುನಾವಣೆ ಬಂದಾಗಲಷ್ಟೇ ಶಿಕ್ಷಕರ ಬಗ್ಗೆ ಮಾತನಾಡುವ, ಅವರ ಬಗ್ಗೆ ಕಾಳಜಿ, ದಿಢೀರ್‌ ಪ್ರೀತಿ ತೋರುವ ಅಭ್ಯರ್ಥಿ ನಾನಲ್ಲ. ದಿನದ 24 ತಾಸು ಶಿಕ್ಷಕರ ಕೈಗೆ ಸಿಗುವ ಪ್ರತಿನಿಧಿ ನಾನೆಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ. ಕಳೆದ 42 ವರ್ಷಗಳಿಂದ ನನ್ನನ್ನು ಬಲ್ಲ ಎಲ್ಲ ಶಿಕ್ಷಕರಿಗೂ ಇದು ತಿಳಿದ ವಿಷಯ. ಶಿಕ್ಷಕರಿಗೆ ಇಲಿಯ್ಲವರೆಗೆ ಸಿಕ್ಕ ಸೌಲಭ್ಯಗಳೆಲ್ಲವೂ ನಾವೆಲ್ಲ ಸೇರಿ ಮಾಡಿದ ಹೋರಾಟದ ಫಲ ಎಂಬುದನ್ನು ಶಿಕ್ಷಕರು ಮರೆಯಬಾರದು. ಇತ್ತೀಚೆಗೆ ಹೋರಾಟಗಳು ಶಕ್ತಿ ಕಳೆದುಕೊಳ್ಳುತ್ತಿವೆ ಎಂಬಂತೆ ಭಾಸವಾಗುತ್ತಿದ್ದು, ಶಿಕ್ಷಕರು ಇದಕ್ಕೆ ಅವಕಾಶ ನೀಡಬಾರದು. ವಿಶೇಷವಾಗಿ ಹೊಸ ತಲೆಮಾರಿನ ಶಿಕ್ಷಕರು ಮುಂಬರುವ ಸವಾಲು-ಸಮಸ್ಯೆಗಳ ಬಗ್ಗೆ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು. ಸಂಘಟನೆಯಲ್ಲಿನ ಸಣ್ಣ-ಪುಟ್ಟ ಮನಸ್ತಾಪ, ವ್ಯತ್ಯಾಸಗಳನ್ನು ಮರೆತು ಸಂಘಟಿತರಾಗಿ ಹೋರಾಟಕ್ಕೆ ಮುಂದಾಗೋಣ ಎಂದರು.

ಸತತ ಎಂಟನೇ ಬಾರಿಗೆ ಶಿಕ್ಷಕರ ಪ್ರತಿನಿಧಿಯಾಗಿ ಸ್ಪರ್ಧಿಸಲು ಅವಕಾಶ ನೀಡಿದ ವಿವಿಧ ಶಿಕ್ಷಕ ಸಂಘಟನೆಗಳ ಎಲ್ಲ ಪದಾಧಿಕಾರಿಗಳು, ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುವೆ ಎಂದು ಹೊರಟ್ಟಿ ಹೇಳಿದರು. ಸಂಘಟನೆ ಅವಿಭಜಿತ ಧಾರವಾಡ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಖಂಡರಾದ ಸಹಜಾನಂದ ದಂದರಗಿ, ಅನ್ನಪೂರ್ಣ ಗುಡ್ಡದ, ಜ್ಯೋತಿ ಪಾಟೀಲ, ಶ್ಯಾಮ ಮಲ್ಲನಗೌಡ, ಎಸ್‌.ಎಂ.ಅಂಗಡಿ, ಎಸ್‌.ಎಸ್‌.ಹುದ್ದಾರ, ಎಂ.ಟಿ.ಗೌಡ, ಎಚ್‌.ಪಿ.ಬಣಕಾರ, ಪ್ರಭಾಕರ ಬಂಟ್‌, ದಿನೇಶ ನೇತ್ರೇಕರ, ಎಸ್‌.ಆರ್‌.ಕಲಾದಗಿ, ಎಸ್‌.ಡಿ.ಮೂಡೆಣ್ಣರ, ಸಂತೋಷ ಪಾಟೀಲ, ಸಿ.ಎ.ಸಾವಳಗಿ, ಚಂದ್ರಶೇಖರ ಲೋನಿ, ಎನ್‌.ಎಚ್‌.ನಾವಲಗಟ್ಟಿ, ಬಿ.ಪಿ.ಹನಮಣ್ಣವರ, ರಮೇಶ ದೊಡ್ಡಮನಿ, ಗಣೇಶ ವಡ್ಡರ, ಎಸ್‌.ಎಸ್‌.ಗಡ್ಡದ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.