ಶಿಕ್ಷಕಿಯರು -ಮಹಿಳಾ ಸಿಬ್ಬಂದಿ ಆರೋಗ್ಯ ತಪಾಸಣೆ

ಚಿಟಗುಪ್ಪಿ ಆಸ್ಪತ್ರೆಯಲ್ಲಿ ಒಂದು ತಿಂಗಳವರೆಗೆ ಕಾರ್ಯಕ್ರಮ

Team Udayavani, Jun 7, 2022, 2:34 PM IST

16

ಹುಬ್ಬಳ್ಳಿ: ವಿವಿಧ ಕಾಯಿಲೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರಿ ಶಾಲೆಗಳ ಶಿಕ್ಷಕಿಯರು ಹಾಗೂ ಮಹಿಳಾ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣೆ ಸೋಮವಾರ ಚಿಟಗುಪ್ಪಿ ಆಸ್ಪತ್ರೆ ಆರಂಭವಾಯಿತು.

ಕ್ಯಾನ್ಸರ್‌ (ಬಾಯಿ, ಗರ್ಭಕೊರಳು ಹಾಗೂ ಸ್ತನ ಕ್ಯಾನ್ಸರ್‌), ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ಪಾರ್ಶ್ವವಾಯು, ರಕ್ತದೊತ್ತಡ ಕಾಯಿಲೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರಿ ಶಾಲೆಗಳ ಶಿಕ್ಷಕಿಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ಬ್ಲಾಕ್‌ನ ಶಿಕ್ಷಕಿಯರ ಆರೋಗ್ಯ ತಪಾಸಣೆಗಾಗಿ ಚಿಟಗುಪ್ಪಿ ಆಸ್ಪತ್ರೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು ಒಂದು ತಿಂಗಳವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸರಕಾರಿ ಶಾಲೆಯ ಶಿಕ್ಷಕಿಯರು, ಮಹಿಳಾ ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಎರಡು ಶಿಕ್ಷಣ ಬ್ಲಾಕ್‌ನ ಸುಮಾರು 2200 ಶಿಕ್ಷಕಿಯರು, ಮಹಿಳಾ ಸಿಬ್ಬಂದಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ. 30 ವರ್ಷ ದಾಟಿ ಪ್ರತಿಯೊಬ್ಬ ಶಿಕ್ಷಕಿಯೂ ಕೂಡ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಒಳಗಾಗಬೇಕು. ಸಕ್ಕರೆ ಕಾಯಿಲೆ, ರಕ್ತದೊತ್ತಡಂತಹ ತಪಾಸಣೆ ಕಾಲ ಕಾಲಕ್ಕೆ ಮಾಡಿಸಿಕೊಳ್ಳುತ್ತಾರೆ. ಆದರೆ ಹೃದಯ ಸಂಬಂಧಿತ, ಕ್ಯಾನ್ಸರ್‌ ತಪಾಸಣೆ ಮಾಡಿಸಿಕೊಳ್ಳುವುದಿಲ್ಲ. ಕಾಯಿಲೆ ಉಲ್ಬಣಗೊಂಡ ನಂತರ ತಪಾಸಣೆ ಚಿಕಿತ್ಸೆಗೆ ಒಳಗಾಗುತ್ತಾರೆ. ಇದರಿಂದ ಚಿಕಿತ್ಸೆಗೆ ಹೆಚ್ಚು ಕಾಲ ಹಿಡಿಯುತ್ತದೆ. ಕೆಲವೊಮ್ಮೆ ಪರಿಸ್ಥಿತಿ ಚಿಂತಾಜನಕವಾದಾಗ ಆಸ್ಪತ್ರೆಗೆ ಹೋಗುವವರಿದ್ದು, ಇದು ಆಗಬಾರದು. ಕಾಯಿಲೆ ಆರಂಭ ಹಂತದಲ್ಲಿದ್ದರೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಸರಕಾರ ಈ ನಿರ್ಧಾರ ಕೈಗೊಂಡಿದೆ ಎನ್ನುತ್ತಾರೆ ಶಿಕ್ಷಣ ಇಲಾಖೆ ಉಪನಿರ್ದೇಶಕ.

ಪಾಲಿಕೆ ಮುಖ್ಯ ವೈದ್ಯಕೀಯ ಮುಖ್ಯಾಧಿಕಾರಿ ಡಾ| ಶ್ರೀಧರ ದಂಡಪ್ಪನವರ ಮಾತನಾಡಿ, ನಿತ್ಯ 50 ಶಿಕ್ಷಕಿಯರ ತಪಾಸಣೆ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಮುನ್ನೆಚ್ಚರಿಕೆಯು ಚಿಕಿತ್ಸೆಗಿಂತ ಅತೀ ಮುಖ್ಯ ಎನ್ನುವ ಕಾರಣಕ್ಕೆ ಸರಕಾರ ಈ ಯೋಜನೆ ರೂಪಿಸಿದೆ. ಸರಕಾರದ ಈ ಸೌಲಭ್ಯಗಳನ್ನು ಶಿಕ್ಷಕಿಯರು ಸದ್ಬಳಕೆ ಮಾಡಿಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಬೇಡ ಎಂದರು.

ಸುಮಾರು ಏಳೆಂಟು ವರ್ಷಗಳ ಹಿಂದೆ ಈ ರೀತಿ ಶಿಕ್ಷಕಿಯರ ಆರೋಗ್ಯ ತಪಾಸಣೆ ಮಾಡಿಸಿದ್ದರು. ಇದೀಗ ಗ್ರಾಮೀಣ ಭಾಗದ ಶಿಕ್ಷಕಿಯರಿಗೂ ಈ ಸೌಲಭ್ಯ ದೊರೆಯುತ್ತಿದೆ. ಇದೊಂದು ಒಳ್ಳೆಯ ಯೋಜನೆಯಾಗಿದ್ದು, ಕೆಲವರು ಕಾಯಿಲೆಯ ಹೆದರಿಕೆಯಿಂದಾಗಿ ತಪಾಸಣೆಯಿಂದ ದೂರ ಉಳಿಯುತ್ತಿದ್ದವರು ಅನಿವಾರ್ಯವಾಗಿ ತಪಾಸಣೆಗೆ ಒಳಗಾಗಬೇಕು.

ಈ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿದ್ದರೆ ಆದಷ್ಟು ಬೇಗ ಚಿಕಿತ್ಸೆ ಪಡೆಯಲು ಸಹಕಾರಿಯಾಗಿದೆ ಎಂದು ಶಿಕ್ಷಕಿ ಸ್ಮಿತಾ ರಾಯಲಕೇರಿ ಎನ್ನುವವರು ಅಭಿಪ್ರಾಯಪಟ್ಟರು. ಜಿಲ್ಲಾ ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕದ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.