ಕಾಶಿ-ಅಯೋಧ್ಯೆಯ ಅಭಿವೃದ್ಧಿ ಸಂಸ್ಕೃತಿ ಪುನರುತ್ಥಾನದ ಸಂಕೇತ; ಜೋಶಿ
ಪ್ರಧಾನಿ ನರೇಂದ್ರ ಮೋದಿಯವರ ಇಚ್ಛಾಶಕ್ತಿ ಪರಿಣಾಮ ಕಾಶಿ ಅದ್ಬುತ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ.
Team Udayavani, Feb 16, 2022, 5:45 PM IST
ಹುಬ್ಬಳ್ಳಿ: ದೇಶದಲ್ಲಿ ಹಿಂದೂ ಸಂಸ್ಕೃತಿ, ಧಾರ್ಮಿಕತೆ ಪುನರುತ್ಥಾನ ಆಗುತ್ತಿದೆ. ಇದಕ್ಕೆ ಕಾಶಿ, ಅಯೋಧ್ಯೆ ಇನ್ನಿತರ ಸ್ಥಳಗಳ ಸರ್ವಾಗೀಂಣ ಅಭಿವೃದ್ಧಿ ಸಾಕ್ಷಿಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸದ್ಗುರು ಸಿದ್ಧಾರೂಢಸ್ವಾಮಿ ರೈಲು ನಿಲ್ದಾಣದಲ್ಲಿ ನವಕಾಶಿ ವೀಕ್ಷಣೆಗೆ ಹೊರಟ ಜಿಲ್ಲೆಯ ಸುಮಾರು 150 ಬಿಜೆಪಿ ಕಾರ್ಯಕರ್ತರಿಗೆ ಶುಭ ಕೋರಿ ಅವರು ಮಾತನಾಡಿದರು. ರಾಜ್ಯದಲ್ಲಿಯೂ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಧಾರ್ಮಿಕ ಸ್ಥಳಗಳ ಪುನರುತ್ಥಾನಕ್ಕೆ ಮುಂದಾದರೆ ಕೇಂದ್ರದಿಂದ ಅಗತ್ಯ ನೆರವು ದೊರಕಿಸಲು ಪ್ರಾಮಾಣಿಕ ಯತ್ನ ಮಾಡುವುದಾಗಿ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಇಚ್ಛಾಶಕ್ತಿ ಪರಿಣಾಮ ಕಾಶಿ ಅದ್ಬುತ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಅದೇ ರೀತಿ ಅಯೋಧ್ಯೆ, ಚಾರ್ ಧಾಮ್, ರಾಮಾನುಜಾಚಾರ್ಯ ಮೂರ್ತಿ ಸ್ಥಾಪನೆ ಇದೊಂದು ಹಿಂದೂ ಸಂಸ್ಕೃತಿ ಪುನರುತ್ಥಾನ ಸಂಕೇತವಾಗಿದೆ. ಕರ್ನಾಟಕದಲ್ಲಿಯೂ ಕಿಷ್ಕಿಂಧೆ, ಧರ್ಮಸ್ಥಳ ಸೇರಿದಂತೆ ಅನೇಕ ತಾಣಗಳು ಇದ್ದು, ಇವುಗಳ ಅಭಿವೃದ್ಧಿಗೆ ಅವಕಾಶಗಳಿವೆ.
ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಅಗತ್ಯ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರದಿಂದ ನೆರವು ಒದಗಿಸಲು ಪ್ರಾಮಾಣಿಕ ಯತ್ನ ಮಾಡುತ್ತೇನೆ ಎಂದರು. ಆಂಜನೇಯನ ಜನ್ಮಸ್ಥಳ ಬಗ್ಗೆ ಉಂಟಾದ ವಿವಾದ ಹಾಗೂ ಟಿಟಿಡಿಯವರು ತಮ್ಮದೇ ಹನುಮನ ಜನ್ಮಸ್ಥಳವೆಂದು ಅಭಿವೃದ್ಧಿಗೆ ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿನ ಕಿಷ್ಕಿಂಧೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡೋಣ. ಅವರು ಮಾಡುವುದು ಮಾಡಲಿ ಎಂದು ಹೇಳಿದರು. ಬಿಜೆಪಿ ವಿವಿಧ ಮುಖಂಡರು ಪಾಲ್ಗೊಂಡು ಯಾತ್ರಿಗಳಿಗೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ