ಮೊದಲ ಡೋಸ್‌ ಲಸಿಕೆ ಶೇ.94 ಪ್ರಗತಿ

ಈಗಾಗಲೇ 17120 ಜನರಿಗೆ ಎರಡನೇ ಡೋಸ್‌ ಲಸಿಕೆ ಕೂಡ ನೀಡಲಾಗಿದೆ

Team Udayavani, Dec 9, 2021, 5:39 PM IST

ಮೊದಲ ಡೋಸ್‌ ಲಸಿಕೆ ಶೇ.94 ಪ್ರಗತಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್‌ ನಿರೋಧಕ ಲಸಿಕಾಕರಣ ಕಾರ್ಯ ಪ್ರಗತಿಯಲ್ಲಿದ್ದು, ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಶೇ.100 ಮೊದಲ ಡೋಸ್‌ ಲಸಿಕೆ ಕಾರ್ಯ ಪೂರ್ಣಗೊಂಡಿದೆ. ಜಿಲ್ಲೆಯಾದ್ಯಂತ ಈವರೆಗೆ 13,58,894 ಜನರಿಗೆ ಲಸಿಕೆ ನೀಡಿದ್ದು, ಶೇ. 94 ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್‌ ವಿರುದ್ಧದ ಹೋರಾಟಕ್ಕೆ ಲಸಿಕಾಕರಣ ಪ್ರಮುಖ ಅಸ್ತ್ರವಾಗಿದ್ದು, ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಲಸಿಕೆ ಪೂರಕವಾಗಿದೆ. ಹುಬ್ಬಳ್ಳಿಯ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ, ಕಲಘಟಗಿ ತಾಲೂಕು ಮುಕ್ಕಲ್‌, ಅಣ್ಣಿಗೇರಿ ತಾಲೂಕು ಶಲವಡಿ ಹಾಗೂ ಧಾರವಾಡ ತಾಲೂಕಿನ ಗರಗ ಪ್ರಾಥಮಿಕ ಆರೋಗ್ಯ ಕೇಂದ್ರಗಳು ತಮ್ಮ ವ್ಯಾಪ್ತಿಯಲ್ಲಿ ಶೇ.100 ಮೊದಲ ಡೋಸ್‌ ಲಸಿಕೆ ನೀಡಿವೆ. ಜಿಲ್ಲೆಯಾದ್ಯಂತ ಒಟ್ಟು 14,44,000 ಅರ್ಹರಿಗೆ ಕೋವಿಡ್‌ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಕಳೆದ ಜನವರಿ 16ರಿಂದ ಡಿಸೆಂಬರ್‌ 7ರವರೆಗೆ 13,58,894 ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿ ಶೇ.94ರಷ್ಟು ಗುರಿ ಸಾಧಿಸಲಾಗಿದೆ. 9,05,943 ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಿ ಶೇ.74ರಷ್ಟು ಪ್ರಗತಿ ಸಾಧಿಸಲಾಗಿದೆ. ಹುಬ್ಬಳ್ಳಿ ನಗರದ ಕೇಶ್ವಾಪುರ, ರಾಮನಗರ, ಬದಾಮಿ ನಗರ, ಶಬರಿ ನಗರ, ಜೆ.ಸಿ. ನಗರ ಹಾಗೂ ದೇಶಪಾಂಡೆ ನಗರದ ಕೆಲವು ಭಾಗಗಳ ವ್ಯಾಪ್ತಿ ಹೊಂದಿರುವ ಚಿಟಗುಪ್ಪಿ ಆಸ್ಪತ್ರೆಯ ತಂಡಕ್ಕೆ 18 ವರ್ಷ ಮೇಲ್ಪಟ್ಟ ಅರ್ಹ 37,760 ಜನರಿಗೆ ಕೋವಿಡ್‌ ನಿರೋಧಕ ಲಸಿಕೆಯ ಗುರಿ ನೀಡಲಾಗಿತ್ತು. ಈವರೆಗೆ 39,427 ಜನರಿಗೆ ಮೊದಲ ಲಸಿಕೆ ನೀಡಿದ್ದು ಶೇ. 100ಕ್ಕಿಂತ ಅಧಿಕ ಸಾಧನೆ ಮಾಡಲಾಗಿದೆ. ಶೇ.85 ಎರಡನೇ ಡೋಸ್‌ ಲಸಿಕೆ ಕೂಡ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಲಸಿಕಾಕರಣದ ಮೊದಲ ದಿನದಿಂದಲೇ ತಂಡಗಳು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿವೆ. ಪ್ರತಿದಿನ ಹಂಚಿಕೆಯಾದ ಡೋಸ್‌ಗಳನ್ನು ಅದೇ ದಿನ ಅರ್ಹರಿಗೆ ನೀಡುವ ಕಾರ್ಯ ನಿರಂತರವಾಗಿ ನಡೆದ ಪರಿಣಾಮ ಈ ಸಾಧನೆ ಸಾಧ್ಯವಾಗಿದೆ. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳು ಕೂಡ ಈ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ| ಶ್ರೀಧರ ದಂಡಪ್ಪನವರ ತಿಳಿಸಿದ್ದಾರೆ.

ಮುಕ್ಕಲ್‌ ಪಿಎಚ್‌ಸಿ ಶೇ. 101 ಸಾಧನೆ:ಕಲಘಟಗಿ ತಾಲೂಕ ಮುಕ್ಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 17 ಹಳ್ಳಿಗಳಿವೆ. 19,667 ಅರ್ಹರಿಗೆ ಲಸಿಕೆ ನೀಡುವ ಗುರಿ ಇತ್ತು. 19,980 ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿ ಶೇ. 101.57 ಸಾಧನೆ ಮಾಡಲಾಗಿದೆ. 11,680 ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದ್ದು, ಶೇ.58 ಪ್ರಗತಿ ಸಾಧಿಸಲಾಗಿದೆ.

ಲಸಿಕಾಕರಣದ ಯುವ ಉತ್ಸಾಹಿ ತಂಡವು ಲಸಿಕೆಯ ಮಾಹಿತಿ ನೀಡಿ, ಕೆಲವರಲ್ಲಿದ್ದ ತಪ್ಪು ಗ್ರಹಿಕೆಗಳನ್ನು ಹೋಗಲಾಡಿಸಲು ಹೆಚ್ಚು ಒತ್ತು ನೀಡಲಾಯಿತು. ಸ್ಥಳೀಯ ಗ್ರಾಪಂ ಮತ್ತು ಆರೋಗ್ಯ ಇಲಾಖೆ ಧ್ವನಿ ಸಂದೇಶಗಳನ್ನು ಮುದ್ರಿಸಿ ಪ್ರಚಾರ ಕೈಗೊಂಡ ಪರಿಣಾಮ ಈ ಕಾರ್ಯ ಸಾಧ್ಯವಾಗಿದೆ. ಬಹುತೇಕ ಹಳ್ಳಿಗಳಲ್ಲಿ ದುಡಿಯುವ ವರ್ಗ ಸಂಜೆ ಸಿಗುತ್ತಿದ್ದರಿಂದ ರಾತ್ರಿ 8:00-9:00 ಗಂಟೆವರೆಗೆ ಲಸಿಕೆ ನೀಡಲಾಗಿದೆ ಎಂದು ಮುಕ್ಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ರವಿ ಸೋಮಣ್ಣವರ ಹೇಳಿದ್ದಾರೆ.

ಧಾರವಾಡ ತಾಲೂಕು ಗರಗ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 27,672 ಜನರಿಗೆ ಕೋವಿಡ್‌ ಲಸಿಕೆ ನೀಡುವ ಗುರಿ ಹೊಂದಲಾಗಿದೆ. 27,691 ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿ ಶೇ. 100ಕ್ಕಿಂತ ಅಧಿಕ ಸಾಧನೆ ಮಾಡಲಾಗಿದೆ. ಈಗಾಗಲೇ 17120 ಜನರಿಗೆ ಎರಡನೇ ಡೋಸ್‌ ಲಸಿಕೆ ಕೂಡ ನೀಡಲಾಗಿದೆ ಎಂದು ಗರಗ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ರಾಜಶೇಖರ ಪತ್ತಾರ ಹೇಳಿದ್ದಾರೆ.

ಅಣ್ಣಿಗೇರಿ ತಾಲೂಕು ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 14 ಹಳ್ಳಿಗಳಿವೆ. 21,854 ಜನರಿಗೆ ಕೋವಿಡ್‌ ಲಸಿಕೆ ನೀಡುವ ಗುರಿ ಇದೆ. ಡಿ.7ರವರೆಗೆ 21,907 ಮೊದಲ ಡೋಸ್‌ ಲಸಿಕೆಗಳನ್ನು ನೀಡಿ ಶೇ.100ಕ್ಕೂ ಅಧಿಕ ಗುರಿ ಸಾಧಿಸಲಾಗಿದೆ. 11,213 ಜನರಿಗೆ ಎರಡನೇ ಡೋಸ್‌ ಲಸಿಕೆಗಳನ್ನು ನೀಡಿ ಶೇ.52 ಸಾಧನೆ ಮಾಡಲಾಗಿದೆ. 30 ಲಸಿಕಾ ತಂಡಗಳನ್ನು ರಚಿಸಿ ಪ್ರತಿ ಮನೆಗಳಿಗೂ ತೆರಳಿ ಸಮೀಕ್ಷೆ ಮಾಡಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ದೇಶಪಾಂಡೆ ಫೌಂಡೇಷನ್‌ ಬಹಳಷ್ಟು ಸಹಕಾರ ನೀಡಿವೆ ಎಂದು ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅಶೋಕ ಅಗರವಾಲ ಹೇಳಿದ್ದಾರೆ. ಕೋವಿಡ್‌ ನಿಯಂತ್ರಣದಲ್ಲಿ ಲಸಿಕಾಕರಣ ಮಹತ್ವದ್ದಾಗಿದ್ದು, ಜಿಲ್ಲೆಯ ಎಲ್ಲ ಜನತೆ ಲಸಿಕೆ ಹಾಕಿಸಿಕೊಳ್ಳಬೇಕು. ಪರಿಚಿತರಿಗೂ ತಿಳಿ ಹೇಳಿ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.