ಮಕ್ಕಳ ಚಿಂತನೆ ಅಭಿವ್ಯಕ್ತಗೊಳಿಸಿದ ಸೂತ್ರ

ಭೂಮಿ ಕಂಪನ ಬರುವ ಸಮಯದಲ್ಲಿ ಗಂಟೆ ಬಾರಿಸುವ ಮೂಲಕ ಎಚ್ಚರಿಸುವ ಕೆಲಸವನ್ನು ಇದು ಮಾಡುತ್ತದೆ

Team Udayavani, Mar 4, 2022, 6:01 PM IST

ಮಕ್ಕಳ ಚಿಂತನೆ ಅಭಿವ್ಯಕ್ತಗೊಳಿಸಿದ ಸೂತ್ರ

ಹುಬ್ಬಳ್ಳಿ: ವಾಹನ ಅಪಘಾತ ಕುಳಿತಲ್ಲಿಯೇ ಮಾಹಿತಿ, ಭೂಕಂಪನ ಕುರಿತು ಎಚ್ಚರಿಕೆ ಗಂಟೆ, ಜ್ವಾಲಾಮುಖೀಯಿಂದ ವಿದ್ಯುತ್‌ ಉತ್ಪಾದನೆ ಹೀಗೆ ವಿದ್ಯಾರ್ಥಿಗಳ ಚಿಂತನೆಗಳಿಂದ ರೂಪ ಪಡೆದ ವಿವಿಧ ಮಾದರಿಗಳು ಇಲ್ಲಿನ ಕೆಎಲ್‌ಇ ಸಂಸ್ಥೆಯ ಸಿ.ಐ.ಮುನವಳ್ಳಿ ಪಾಲಿಟೆಕ್ನಿಕ್‌ ಮಹಾವಿದ್ಯಾಲಯದಲ್ಲಿ ನಡೆದ “ಸೂತ್ರ 2022′ ವಿಜ್ಞಾನ-ತಂತ್ರಜ್ಞಾನ ವಸ್ತು ಪ್ರದರ್ಶನದಲ್ಲಿ ಕಂಡು ಬಂದವು. ಮಕ್ಕಳಲ್ಲಿನ ಚಿಂತನೆಯನ್ನು ಅಭಿವ್ಯಕ್ತಗೊಳಿಸಿದವು.

ಕುಳಿತಲ್ಲಿಯೇ ತಮ್ಮ ಮೊಬೈಲ್‌ ಮೂಲಕ ವಾಹನವನ್ನು ಹೇಗೆಲ್ಲ ನಿಯಂತ್ರಿಸಬಹುದು, ವಾಹನ ಸುರಕ್ಷೆ ಹಾಗೂ ಟ್ರಾಕಿಂಗ್‌ ಡಿವೈಸ್‌ ಮಾದರಿಯನ್ನು ಮಾಡಿ ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಒಂದು ವೇಳೆ ವಾಹನ ಅಪಘಾತಕ್ಕೀಡಾದರೆ ಸಂಬಂಧಿಸಿದ ಮೊಬೈಲ್‌ಗೆ ಕೂಡಲೇ ಸಂದೇಶ ರವಾನೆಯಾಗುತ್ತದೆ. ಸಂದೇಶ ಬಂದ ಕೆಲವೇ ಸೆಕೆಂಡ್‌ಗಳಲ್ಲಿ ಎಮರ್ಜೆನ್ಸಿ ದೂರವಾಣಿ ಕರೆ ಸಹ ಬರಲಿದೆ. ಇದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಎಂ.ಆರ್‌.ಸಾಖರೆ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಅಮೂಲ್ಯಾ ಹಾಗೂ ಶಾರಬಿ ಇಂತಹ ಮಾದರಿಯನ್ನು ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇಂಧನ ಬೆಲೆಗಳ ಹೆಚ್ಚಳ ಗಮನದಲ್ಲಿಟ್ಟುಕೊಂಡು ಸದ್ಯ ಬ್ಯಾಟರಿ ಚಾಲಿತ ವಾಹನಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಇದಕ್ಕೂ ಮೀರಿ ಸೋಲಾರ್‌ ಪ್ಯಾನೆಲ್‌ ಇರುವ ವಾಹನಗಳ ಮಾದರಿಯನ್ನು ಇಲ್ಲಿನ ಸೇಂಟ್‌ ಆಂಥೋನಿ ಪಬ್ಲಿಕ್‌ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಸಿದ್ದಿ-ಸುನಿಧಿ ಸಿದ್ಧಪಡಿಸಿದ್ದು, ಮುಂದೊಂದು ದಿನ ಇಂತಹ ವಾಹನಗಳು ಮಾರುಕಟ್ಟೆಗೆ ಬಂದಲ್ಲಿ ಅಚ್ಚರಿ ಪಡಬೇಕಿಲ್ಲ.

ಜ್ವಾಲಾಮುಖೀಯಿಂದ ವಿದ್ಯುತ್‌ ಉತ್ಪಾದನೆ: ಜ್ವಾಲಾಮುಖೀಯಿಂದ ವಿದ್ಯುತ್‌ ಉತ್ಪಾದಿಸಬಹುದು, ಜತೆಗೆ ಅದರಿಂದ ರಕ್ಷಣೆ ಪಡೆಯಲು ಮುಂದಾಗಬಹುದು ಎಂಬುದನ್ನು ಬ್ರಹ್ಮಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಾದ ದರ್ಶನ ಪಿ., ಶಿವಪ್ರಸಾದ ದೇಸಾಯಿ ತೋರಿಸಿಕೊಟ್ಟಿದ್ದಾರೆ.

ಸೌರ ಆಧಾರಿತ ನೀರಾವರಿ: ಕೃಷಿ ಭೂಮಿಯಲ್ಲಿ ಸೂರ್ಯನಿಂದ ಬರುವ ಕಿರಣಗಳನ್ನು ಶೇಖರಿಸುವ ಮೂಲಕ ನೀರು ಹರಿಸಿ ಕೃಷಿಯಲ್ಲಿ ಲಾಭ ಮಾಡಬಹುದು ಎಂಬುದನ್ನು ಬಿವಿಕೆ ವಿಸಿಬಿ ಗರ್ಲ್ಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳಾದ ಸಹನಾ, ಪ್ರಿಯಾ ತೋರಿಸಿಕೊಟ್ಟಿದ್ದಾರೆ.

ಭೂಕಂಪದ ಎಚ್ಚರಿಕೆ ಘಂಟೆ: ಭೂಮಿಯ ಮೇಲೆ ನಡೆಯುವ ವಿದ್ಯಮಾನಗಳನ್ನು ಎಲ್ಲರೂ ಕಣ್ಣಿಂದ ನೋಡಬಹುದು, ಆದರೆ ಭೂಮಿಯ ಒಳಭಾಗದಲ್ಲಿ ನಡೆಯುವ ಕಂಪನ ತಿಳಿಯದಾಗಿದೆ. ಇದನ್ನರಿತ ಪ್ರಸೆಂಟೇಶನ್‌ ಶಾಲೆಯ ವಿದ್ಯಾರ್ಥಿಗಳಾದ ನಿರ್ಮಲಾ ಹೆಬ್ಬಳ್ಳಿ, ಐಶ್ವರ್ಯಾ ಹೆಬ್ಬಳ್ಳಿ ಮಾದರಿಯೊಂದನ್ನು ಸಿದ್ಧ ಪಡಿಸಿದ್ದು, ಭೂಮಿ ಕಂಪನ ಬರುವ ಸಮಯದಲ್ಲಿ ಗಂಟೆ ಬಾರಿಸುವ ಮೂಲಕ ಎಚ್ಚರಿಸುವ ಕೆಲಸವನ್ನು ಇದು ಮಾಡುತ್ತದೆ.

ಇಷ್ಟೇ ಅಲ್ಲ ಹುಬ್ಬಳ್ಳಿ-ಧಾರವಾಡದ ಸುಮಾರು 16 ಶಾಲೆಯ ವಿದ್ಯಾರ್ಥಿಗಳು ಸುಮಾರು 35ಕ್ಕೂ ಹೆಚ್ಚು ಮಾದರಿಗಳನ್ನು ಸಿದ್ಧಪಡಿಸಿದ್ದು, ವಿಜ್ಞಾನ-ತಂತ್ರಜ್ಞಾನ ಮೂಲಕ ಮುನ್ನಡೆಯಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಮುಂಬರುವ ದಿನಗಳಲ್ಲಿ ಸೂರ್ಯನ ಕಿರಣಗಳು ಸಹ ಅಮೂಲ್ಯವಾಗಲಿದೆ ಎಂಬುದನ್ನು ಸೂತ್ರ 2022 ವಿಜ್ಞಾನ-ತಂತ್ರಜ್ಞಾನ ವಸ್ತು ಪ್ರದರ್ಶನದಲ್ಲಿ ತೋರಿಸಿಕೊಡಲಾಗಿದೆ. ಮುನವಳ್ಳಿ ಪಾಲಿಟೆಕ್ನಿಕ್‌ ಮಹಾವಿದ್ಯಾಲಯದಿಂದ ಉತ್ತಮ ವೇದಿಕೆ ನಮಗೆ ಸಿಕ್ಕಿದೆ.
ಸಿದ್ದಿ ಹಾಗೂ ಸುನಿಧಿ, ವಿದ್ಯಾರ್ಥಿಗಳು

ಇಂದಿನ ತಂತ್ರಜ್ಞಾನದ ಯುಗದಲ್ಲಿ ಏನು ಬೇಕಾದರೂ ಮಾಡಬಹುದು. ನಮ್ಮಲ್ಲಿರುವ ವಾಹನಗಳನ್ನು ಇಲ್ಲವಾಗಿಸಬಹುದು. ಅದನ್ನರಿತು ಸುರಕ್ಷೆ- ಟ್ರಾಕಿಂಗ್‌ ಸಿಸ್ಟಮ್‌ ಸಿದ್ಧಪಡಿಸಿದ್ದು, ಉತ್ತಮವಾಗಿದೆ.
ಅಮೂಲ್ಯಾ ಹಾಗೂ ಶಾರಬಿ, ವಿದ್ಯಾರ್ಥಿಗಳು

ಬಸವರಾಜ ಹೂಗಾರ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.