ದಶಕದಲ್ಲಿ ವಿಶ್ವ ನಿಬ್ಬೆರಗಾಗುವಂತೆ ದೇಶದ ಬೆಳವಣಿಗೆ-ಪಿ.ರಾಜೀವ


Team Udayavani, Mar 5, 2024, 1:50 PM IST

Udayavani Kannada Newspaper

ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪಾರದರ್ಶಕ ಆಡಳಿತದಿಂದಾಗಿ ದಿವಾಳಿಯಾಗಿದ್ದ ಭಾರತ ಜಗತ್ತಿಗೆ ಕೊಡುಗೆ ಕೊಡುವಷ್ಟರ ಮಟ್ಟಿಗೆ ಬೆಳೆದಿದೆ. ಕೇವಲ 10 ವರ್ಷದಲ್ಲಿ ಜಗತ್ತು ನಿಬ್ಬೆರಗಾಗಿ ನೋಡುವಷ್ಟರ ಮಟ್ಟಿಗೆ ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಹೇಳಿದರು.

ಸೋಮವಾರ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸ್ಥಳೀಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಮುಖರ
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಎರಡು ಮಾತಿಲ್ಲ. ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಗೆಲುವು ಖಚಿತವಾಗಿದೆ ಎಂದರು.

ಹಿಂದೆ ಪ್ರಧಾನಿಯಾಗಿದ್ದ ದಿ| ರಾಜೀವ ಗಾಂಧಿ ಅವರೇ ದೇಶದಲ್ಲಿ ಶೇ.85 ಭ್ರಷ್ಟಾಚಾರ ನಡೆಯುತ್ತಿದೆ ಎಂದು ನೇರವಾಗಿ
ಒಪ್ಪಿಕೊಂಡಿದ್ದರು. ಆದರೆ ಇದಕ್ಕೆಲ್ಲಾ ಕಡಿವಾಣ ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ. ಕೇಂದ್ರದಿಂದ ಬಿಡುಗಡೆ ಮಾಡುವ
ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಮೂಲಕ ಯಾವುದೇ  ಮಧ್ಯವರ್ತಿಗೆ ನಯಾಪೈಸೆಯೂ ಹೋಗುವುದಿಲ್ಲ. ಈ ವ್ಯವಸ್ಥೆಯು ದೇಶದಲ್ಲಿನ ಭ್ರಷ್ಟಾಚಾರ ಹಾಗೂ ಅವ್ಯವಹಾರಕ್ಕೆ ದೊಡ್ಡ ಕಡಿವಾಣ ಹಾಕಿದೆ ಎಂದು ಹೇಳಿದರು.

ಕಾಂಗ್ರೆಸ್‌ ತುಷ್ಟೀಕರಣ: ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ನಡೆದ ಬಾಂಬ್‌ ಬ್ಲಾಸ್ಟ್‌ ಕುರಿತು ಮಾತನಾಡುವಾಗ ಹಿಂದೆಯೂ
ಘಟನೆಗಳು ನಡೆದಿದ್ದವು ಎಂದು ಹೇಳುವ ಮೂಲಕ ಘಟನೆಯನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದಾಗಲೂ ಇದನ್ನು ಪ್ರಶ್ನೆ ಮಾಡಿದ ಮಾಧ್ಯಮದವರ ಮೇಲೆಯೇ ಗೂಬೆ ಕೂರಿಸುವ ಕೆಲಸ ಮಾಡಿದರು. ನಾವು ಖಾಸಗಿ ಪ್ರಯೋಗಾಲಯದಿಂದ ವರದಿ ತರಿಸಿದ್ದು, ಅವನು ಪಾಕಿಸ್ತಾನ ಜಿಂದಾಬಾದ್‌
ಕೂಗಿರುವುದು ಸತ್ಯ ಎಂಬುದು ಸಾಬೀತಾಗಿದೆ
ಎಂದರು.

ಈ ಸರಕಾರ ಬಂದ ಮೇಲೆ ಸಾಲ ಮಾಡಿ ವೇತನ, ಪೆನ್ಶನ್‌ ಕೊಡುತ್ತಿದೆ. ಕೆಲ ಇಲಾಖೆಯ ನೌಕರರಿಗೆ ಇನ್ನೂ ವೇತನ ಆಗುತ್ತಿಲ್ಲ.
ಸಮಾಜದ ಕಟ್ಟಕಡೆಯ ಬಡವನ ಮೇಲೂ ಸಾಲ ಹೊರಿಸಿದ್ದಾರೆ. ಕೈಗಾರಿಕಾ ಅಭಿವೃದ್ಧಿ ಕುಸಿದಿದೆ. ಪ್ರತಿಯೊಂದಕ್ಕೂ ಕೇಂದ್ರದತ್ತ ಬೊಟ್ಟು ಮಾಡುವುದ್ಯಾಕೆ? ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ವಿಧಾನಪರಿಷತ್ತು ಸದಸ್ಯ ಹಾಗೂ ಕ್ಲಸ್ಟರ್‌ ಸಂಚಾಲಕ ನವೀನ, ವಿಭಾಗೀಯ ಪ್ರಭಾರಿ ಲಿಂಗರಾಜ ಪಾಟೀಲ, ಮಹಾನಗರ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕಿ ಸೀಮಾ ಮಸೂತಿ, ಶಶಿಮೌಳಿ ಕುಲಕರ್ಣಿ, ಮಾಜಿ ಅಧ್ಯಕ್ಷರಾದ ಸಂಜಯ ಕಪಟಕರ, ಬಸವರಾಜ ಕುಂದಗೋಳಮಠ, ವಿಜಯಾನಂದ ಶೆಟ್ಟಿ ಇನ್ನಿತರರಿದ್ದರು.

ಚುನಾವಣೆಗೆ ಬಿಜೆಪಿ ಸಂಪೂರ್ಣ ಸಿದ್ಧವಾಗಿದೆ. ಅಭಿವೃದ್ಧಿ ಚುನಾವಣೆಯ ವಿಷಯ ವಸ್ತು. ಪ್ರಧಾನಿ ನರೇಂದ್ರ ಮೋದಿ
ಚುನಾವಣೆಯ ಕೇಂದ್ರಬಿಂದು. ಈ ಎರಡು ವಿಷಯಗಳ ಮೇಲೆ ಸಂಘಟಿತ ಕಾರ್ಯಕರ್ತರ ಪಡೆಯಿನ್ನಿಟ್ಟುಕೊಂಡು ಚುನಾವಣೆ
ಎದುರಿಸುತ್ತೇವೆ.
ಪಿ.ರಾಜೀವ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.