ವೃತ್ತಿ-ಪ್ರವೃತ್ತಿ ನಡುವೆ ಸಮತೋಲನ ಅವಶ್ಯ: ಕುಲಕರ್ಣಿ

ರಂಗಭೂಮಿ ಅದರಲ್ಲೂ ಬೀದಿನಾಟಕಗಳು ಕ್ಷೀಣಿಸುತ್ತಿವೆ. ಬೀದಿನಾಟಕಗಳು ಸರಕಾರದ, ಜನರ ಧ್ವನಿಯಾಗಿವೆ.

Team Udayavani, Apr 16, 2022, 5:00 PM IST

ವೃತ್ತಿ-ಪ್ರವೃತ್ತಿ ನಡುವೆ ಸಮತೋಲನ ಅವಶ್ಯ: ಕುಲಕರ್ಣಿ

ಹುಬ್ಬಳ್ಳಿ: ವೃತ್ತಿ ಮತ್ತು ಪ್ರವೃತ್ತಿ ನಡುವೆ ಸಮತೋಲನ ಅವಶ್ಯವಾಗಿದ್ದು, ಸುದ್ದಿ-ವಿದ್ಯಮಾನಗಳ ಧಾವಂತದಲ್ಲಿರುವ ಮಾಧ್ಯಮದವರಿಗೆ ಇದು ಹೆಚ್ಚು ಅನ್ವಯವಾಗುತ್ತದೆ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.

ಹಿರಿಯ ಪತ್ರಕರ್ತ ಡಾ| ಶಿವರಾಮ ಅಸುಂಡಿ ಅವರ “ಕೋಣನ ಮುಂದೆ ಕಿನ್ನರಿ ಮತ್ತೆರಡು ನಾಟಕ ಹಾಗೂ ಚಿತ್ರಂ ಭಾಳಾರೆ ವಿಚಿತ್ರಂ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮಾಧ್ಯದವರಿಗೆ ಅವರ ವೃತ್ತಿಯ ಜತೆಗೆ ಸಾಹಿತ್ಯ ರಚನೆ ಇನ್ನಿತರ ಪ್ರವೃತ್ತಿಗಳು ಇದ್ದರೆ ಅವುಗಳನ್ನು ಸರಿದೂಗಿಸಿಕೊಂಡು ಹೋಗಬೇಕಾಗಿದೆ ಎಂದರು.

ಪ್ರತಿಯೊಬ್ಬರಲ್ಲೂ ಸಂತ-ಸೈತಾನ ಇರುತ್ತಾನೆ. ಇದನ್ನು ಗುರುತಿಸುವ ಕೆಲಸ ಆಗಬೇಕು. ಇದಕ್ಕೆ ಸೃಜನಶೀಲ ಮನಸ್ಸು ಮುಖ್ಯ. ಇಂದಿನ ಸ್ಥಿತಿಯಲ್ಲಿ ಮಾತುಗಳೇ ಎಲ್ಲವನ್ನು ಆಳುತ್ತಿವೆ. ಅಂಕಣ ಬರಹ ಅವಸರದ ಬರಹ ಆಗುತ್ತಿವೆ. ಬರಹಗಾರರಿಗೆ ಭಾಷೆಯ ಸೊಗಡು ಅತ್ಯವಶ್ಯ. ಬರವಣಿಗೆಗೆ ಮುಂದಾಗುವವರು ಇದರ ಮೇಲೆ ಪ್ರಭುತ್ವ ಸಾಧಿಸಬೇಕಾಗುತ್ತದೆ. ಗಟ್ಟಿ ರೂಪದ ಅಂಕಣಗಳಿಗೆ ಇದು ಅವಶ್ಯ ಎಂದು ಹೇಳಿದರು.

ರಂಗಭೂಮಿ ಅದರಲ್ಲೂ ಬೀದಿನಾಟಕಗಳು ಕ್ಷೀಣಿಸುತ್ತಿವೆ. ಬೀದಿನಾಟಕಗಳು ಸರಕಾರದ, ಜನರ ಧ್ವನಿಯಾಗಿವೆ. ಅವುಗಳ ಮಹತ್ವ ಕುಗ್ಗುವಂತಾಗಬಾರದು. ರಂಗಭೂಮಿ ಕುರಿತಾಗಿ ಒಲವು ಹೆಚ್ಚಬೇಕು. ಶಿವರಾಮ ಅಸುಂಡಿ ಅವರನ್ನು ಹಲವು ವರ್ಷಗಳಿಂದಲೇ ಬಲ್ಲೆ. ಮಾಧ್ಯಮದಲ್ಲಿದ್ದುಕೊಂಡೇ ಸೃಜನಶೀಲ ಮನಸ್ಸಿನೊಂದಿಗೆ ಅನೇಕ ಕೃತಿಗಳನ್ನು ರಚಿಸಿದ್ದಾರೆ. ರಂಗಕರ್ಮಿಯಾದ ನನಗೆ ಅವರು ಬರೆದ ನಾಟಕಗಳು ಖುಷಿ ತರಿಸಿದೆ.ಕಲ್ಯಾಣ ಕರ್ನಾಟಕದ ಹಲವು ವಿಷಯಗಳನ್ನು ನಾಟಕದಲ್ಲಿ ತಂದಿದ್ದಾರೆ. ಅಲ್ಲಿನ ಭಾಷೆಯ ಸೊಗಡು ಮೂಡಿಸಿದ್ದಾರೆ ಎಂದರು.

ಕೋಣನ ಮುಂದೆ ಕಿನ್ನರಿ ಮತ್ತೆರಡು ನಾಟಕ ಕೃತಿ ಪರಿಚಯಿಸಿದ ಸಾಹಿತಿ ಮಹಾಂತಪ್ಪ ನಂದೂರ, ಮಾಧ್ಯಮದಲ್ಲಿದ್ದವರಿಗೆ ಸಾಹಿತ್ಯ ಬರಹದ ಬಿಕ್ಕಟ್ಟು ಇರುತ್ತದೆ. ಅದನ್ನು ಮೀರಿ ಶಿವರಾಮ ಅಸುಂಡಿ ಅವರು ನಾಟಕ ಕೃತಿ ರಚಿಸಿದ್ದಾರೆ. ನಾಟಕದಲ್ಲಿ ಹಲವು ಸೂಕ್ಷ್ಮ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಸಾಮಾಜಿಕ ಹಾಗೂ ಮಾನವೀಯ ಕಳಕಳಿ ತೋರಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಸ್ಥಾನಿಕ ಸಂಪಾದಕಿ ಎಸ್‌.ರಶ್ಮಿ ಚಿತ್ರಂ ಭಳಾರೆ ವಿಚಿತ್ರಂ ಕೃತಿ ಪರಿಚಯಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಗಣಪತಿ ಗಂಗೊಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕೆಎಸ್‌ಎಂ ಟ್ರಸ್ಟ್‌ ಕಾರ್ಯದರ್ಶಿ ಡಾ| ಎಂ. ಬೈರೇಗೌಡ, ಕೃತಿಕಾರ ಡಾ| ಶಿವರಾಮ ಅಸುಂಡಿ ವೇದಿಕೆಯಲ್ಲಿದ್ದರು. ಮಹೇಂದ್ರ ಚವ್ಹಾಣ ಸ್ವಾಗತಿಸಿದರು. ಸುಶೀಲೇಂದ್ರ ಕುಂದರಗಿ ನಿರೂಪಿಸಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.