ನಾಡಿದ್ದು ಅವಳಿನಗರದಲ್ಲಿ ಟ್ರ್ಯಾಕ್ಟರ್‌ ರ್ಯಾಲಿ


Team Udayavani, Jan 24, 2021, 11:49 AM IST

Tractor Rally

ಹುಬ್ಬಳ್ಳಿ: ದೆಹಲಿಯಲ್ಲಿನ ರೈತರ ಹೋರಾಟ ಬೆಂಬಲಿಸಿ, ಕೃಷಿಗೆ ಮಾರಕ ಕಾಯ್ದೆ ರದ್ಧತಿ ಹಾಗೂ ಎಂಎಸ್‌ಪಿಗೆ ಕಾನೂನಾತ್ಮಕ ಸ್ಥಾನಕ್ಕೆ ಒತ್ತಾಯಿಸಿ ಜ.26ರಂದು ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲಾಗುವುದು ಎಂದು ರೈತ ನಾಯಕ ಬಾಬಾಗೌಡ ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಹಿತರಕ್ಷಣಾ ಪರಿವಾರದಡಿ ಮೂರು ಕಡೆಗಳಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲಾಗುವುದು. ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್‌ ಪೆರೇಡ್‌ ನಡೆಸಲು ನಿರ್ಧರಿಸಿದ್ದು, ಇದಕ್ಕೆ ಬೆಂಬಲವಾಗಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಟ್ರ್ಯಾಕ್ಟರ್‌ಗಳ ಮೆರವಣಿಗೆ ನಡೆಸಲಾಗುವುದು. ನಮ್ಮದು ಶಾಂತಿಯುತ ಮೆರವಣಿಗೆ. ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಮೆರವಣಿಗೆ ನಡೆಯಲಿದೆ ಎಂದರು.

ಕೇಂದ್ರದ ಮೇಲೆ ವಿಶ್ವಾಸವಿಲ್ಲ: ಕೃಷಿಗೆ ಮಾರಕ ಕಾಯ್ದೆಗಳ ರದ್ಧತಿ ಹಾಗೂ ಎಂಎಸ್‌ಪಿಗೆ ಕಾನೂನು ಬಲ ನೀಡಲು ಒತ್ತಾಯಿಸಿ ದೆಹಲಿಯಲ್ಲಿ ರೈತರು ಐತಿಹಾಸಿಕ ಹೋರಾಟ ನಡೆಸುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿಯವರು ರೈತರ ಭೇಟಿಗೆ ಸಿದ್ಧರಿಲ್ಲ. ಹೋರಾಟ ಸ್ಥಳಕ್ಕೆ ಆಗಮಿಸಿ ಚರ್ಚಿಸುವ ಧೈರ್ಯ ಅವರಿಗಿಲ್ಲ. ಹೋಗಲಿ ಹೋರಾಟ ಪ್ರಮುಖರನ್ನಾದರೂ ತಮ್ಮ ಕಚೇರಿಗೆ ಕರೆಯಿಸಿ ಚರ್ಚಿಸಬಹುದಿತ್ತು. ಅದನ್ನೂ ಮಾಡುತ್ತಿಲ್ಲ. ಕೆಲ ಸಚಿವರು ಬಂದು ಕೇವಲ ಗಿಣಿಪಾಠ ಒಪ್ಪಿಸುವ ಕಾರ್ಯ ಮಾಡುತ್ತಿದ್ದು, ರೈತರ ಮೂಲ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಎಂಎಸ್‌ಪಿ-ಎಪಿಎಂಸಿ ರದ್ದು ಮಾಡಲ್ಲ ಎಂದು ಹೇಳುತ್ತಲೇ ಎಪಿಎಂಸಿಗಳಿಗೆ ಬೀಗ ಹಾಕಲು ಏನು ಬೇಕೋ ಅದೆಲ್ಲವನ್ನು ಕೇಂದ್ರ ಸರಕಾರ ಮಾಡುತ್ತಿದೆ. ಅದಾನಿ-ಅಂಬಾನಿ ಉದ್ಯಮಗಳಿಗೆ ಪೂರಕವಾಗುವ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಕೇಂದ್ರ ಸರಕಾರ ಸರ್ವಾ ಧಿಕಾರಿ ಧೋರಣೆಗೆ ಮುಂದಾಗಿದೆ. ಕೃಷಿಗೆ ಮಾರಕ ಕಾಯ್ದೆಗಳನ್ನು ಮುಂದುವರಿಸಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ವ್ಯವಸ್ಥೆಗೂ ಧಕ್ಕೆಯಾಗಲಿದೆ. ಪಡಿತರ ಆಹಾರ ಧಾನ್ಯಗಳಿಗಾಗಿ ಅದಾನಿ-ಅಂಬಾನಿಗಳ ಬಳಿ ಸರಕಾರವೇ ಹೋಗುವ ಸ್ಥಿತಿ ಬರಲಿದೆ. ಕೃಷಿಗೆ ಮಾರಕ ಕಾಯ್ದೆಗಳು ಸಂಪೂರ್ಣ ರದ್ದಾಗಬೇಕು. ಎಂಎಸ್‌ಪಿಗೆ ಕಾನೂನು ಬಲ ನೀಡಿದಲ್ಲಿ ರೈತರ ಹೋರಾಟ ಅಂತ್ಯಗೊಳ್ಳಲಿದೆ ಎಂದರು.

ಇದನ್ನೂ ಓದಿ:ಜಿಪಂನಲ್ಲಿ 1.40 ಕೋಟಿ ವೆಚ್ಚದ ಕಟ್ಟಡ ಉದ್ಘಾಟನೆ

ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್‌ ವರದಿ ಜಾರಿ ಎಂದು ಘೋಷಿಸಿದ್ದ ಮೋದಿಯವರು, ಇದೀಗ ವರದಿಯನ್ನೇ ತಿರುಚಿ, ಅನುಷ್ಠಾನ ಅಸಾಧ್ಯ ಎಂದು ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ನೀಡುವ ಮೂಲಕ ರೈತರನ್ನು ವಂಚಿಸಿದ್ದಾರೆ. ಸತ್ಯ ಮರೆಮಾಚಿ, ಸುಂದರವಾದ ಸುಳ್ಳುಗಳನ್ನು ಹೇಳುವುದನ್ನೇ ಚಾಣಕ್ಯ ನೀತಿ ಎಂದು ಕರೆಯಲಾಗುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅದನ್ನೇ ಮಾಡುತ್ತಿದ್ದಾರೆಂದು ಟೀಕಿಸಿದರು. ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ಮುಖಂಡರಾದ ಪಿ.ಎಚ್‌. ನೀರಲಕೇರಿ, ಗುರುರಾಜ ಹುಣಸಿಮರದ, ಶಾಕೀರ್‌ ಸನದಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.