1ರಿಂದ ರೈಲುಗಳ ಸಂಚಾರ ವೇಗ ಹೆಚ್ಚಳ -ವೇಳೆ ಪರಿಷ್ಕರಣೆ


Team Udayavani, May 22, 2022, 11:30 AM IST

3

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯ ಜೂ. 1ರಿಂದ ಕೆಲ ರೈಲುಗಳ ವೇಗವೃದ್ಧಿ ಮತ್ತು ವೇಳೆ ಪರಿಷ್ಕರಣೆ ಮಾಡಲು ನಿರ್ಧರಿಸಿದೆ. ಬೆಂಗಳೂರು-ಕಾರವಾರ ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ (16595) ರೈಲು ಸಂಜೆ 6:40ರ ಬದಲು 6:50 ಗಂಟೆಗೆ ಬೆಂಗಳೂರಿನಿಂದ ಹೊರಡಲಿದೆ. ಅದೇ ರೀತಿ ಕಾರವಾರ-ಬೆಂಗಳೂರು (16596) ರೈಲು ಬೆಳಗ್ಗೆ 8ರ ಬದಲು 7:15 ಗಂಟೆಗೆ ಬೆಂಗಳೂರು ತಲುಪಲಿದೆ. ಹಾಸನ-ಕಾರವಾರ-ಹಾಸನ ನಡುವೆ ಸಮಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಬೆಂಗಳೂರು-ಕನ್ನೂರ ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ (16511) ರೈಲು ರಾತ್ರಿ 9:30ರ ಬದಲು 9:35 ಗಂಟೆಗೆ ಬೆಂಗಳೂರಿನಿಂದ ಹೊರಡಲಿದೆ. ಅದೇ ರೀತಿ ಕನ್ನೂರ-ಬೆಂಗಳೂರು (16512) ರೈಲು ಬೆಳಗ್ಗೆ 6:50ರ ಬದಲು 6:30 ಗಂಟೆಗೆ ಬೆಂಗಳೂರು ತಲುಪಲಿದೆ. ಹಾಸನ-ಕನ್ನೂರ-ಹಾಸನ ನಡುವೆ ವೇಳೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಮಿರಜ್‌-ಬೆಂಗಳೂರು ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ (16590) ರೈಲು ಬೆಂಗಳೂರಿಗೆ ಬೆಳಗ್ಗೆ 6:30ರ ಬದಲು 6:15 ಗಂಟೆಗೆ ತಲುಪಲಿದೆ.  ಮಿರಜದಿಂದ ಯಶವಂತಪುರ ನಡುವೆ ಸಮಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ವಿಜಯಪುರ-ಮಂಗಳೂರು ಜಂಕ್ಷನ್‌ ನಿತ್ಯ ಸಂಚಾರ ಎಕ್ಸ್‌ಪ್ರೆಸ್‌ ಸ್ಪೇಶಲ್‌ (07377) ರೈಲು ಸಂಜೆ 6:15ರ ಬದಲು 6:35 ಗಂಟೆಗೆ ವಿಜಯಪುರದಿಂದ ಹೊರಟು ಬಸವನ ಬಾಗೇವಾಡಿ ರೋಡ್‌ (7:12), ಆಲಮಟ್ಟಿ (7:30), ಬಾಗಲಕೋಟೆ (ರಾತ್ರಿ 8:18), ಗುಳೇದಗುಡ್ಡ ರೋಡ್‌ (8:33), ಬಾದಾಮಿ (8:47), ಹೊಳೆಆಲೂರು (9:11), ಮಲ್ಲಾಪೂರ (9:31), ಗದಗ (10:30), ಹುಬ್ಬಳ್ಳಿ (11:55) ಮಾರ್ಗವಾಗಿ ಮಂಗಳೂರು ಜಂಕ್ಷನ್‌ ತಲುಪಲಿದೆ. ಕರ್ಜಗಿಯಿಂದ ಮಂಗಳೂರು ಜಂಕ್ಷನ್‌ ನಡುವೆ ವೇಳೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಅರಸೀಕೆರೆ-ಹುಬ್ಬಳ್ಳಿ ನಿತ್ಯ ಸಂಚಾರ ಪ್ಯಾಸೆಂಜರ್‌ ಸ್ಪೇಶಲ್‌ (07367) ರೈಲು ಅರಸೀಕೆರೆಯಿಂದ ಬೆಳಗ್ಗೆ 5:10ರ ಬದಲು 5:30 ಗಂಟೆಗೆ ಹೊರಟು ವೇಳೆ ಪರಿಷ್ಕರಣೆಯೊಂದಿಗೆ ಬಾಣಾವರ, ಕಡೂರು, ಬಿರೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಸವಣೂರು ಮಾರ್ಗವಾಗಿ ಎಂದಿನಂತೆ ಮಧ್ಯಾಹ್ನ 12:15 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.

ಜೂ. 4ರಿಂದ ಹುಬ್ಬಳ್ಳಿ-ಯಶವಂತಪುರ ವಾರದ ಎಕ್ಸ್‌ಪ್ರೆಸ್‌ (16544) ರೈಲು ಹುಬ್ಬಳ್ಳಿಯಿಂದ ಬೆಳಗ್ಗೆ 11:20ರ ಬದಲು 11:30 ಗಂಟೆಗೆ ಹೊರಡಲಿದೆ. ಹಾವೇರಿಯಿಂದ ಯಶವಂತಪುರ ನಡುವೆ ಸಮಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಜೂ. 1ರಿಂದ ಹಜರತ್‌ ನಿಜಾಮುದ್ದೀನ-ಯಶವಂತಪುರ ವಾರದಲ್ಲಿ ಎರಡು ದಿನ ಸಂಚಾರ ಸೂಪರ್‌ಫಾಸ್ಟ್‌ ಎಕ್‌ Õಪ್ರಸ್‌ (12630) ರೈಲು ಯಶಂತಪುರಕ್ಕೆ ಬೆಳಗ್ಗೆ 6:05ರ ಬದಲು 5:45 ಗಂಟೆಗೆ ತಲುಪಲಿದೆ. ಮಾರ್ಗ ನಡುವಿನ ಇನ್ನುಳಿದ ನಿಲ್ದಾಣಗಳಲ್ಲಿ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲ.

ಜೂ. 2ರಿಂದ ಯಶವಂತಪುರ-ಹಜರತ್‌ ನಿಜಾಮುದ್ದೀನ (12629) ರೈಲು ಯಶವಂತಪುರದಿಂದ ಮಧ್ಯಾಹ್ನ 1:55ರ ಬದಲು 2:30 ಗಂಟೆಗೆ ಹೊರಟು ತುಮಕೂರು (3:20), ಅರಸೀಕೆರೆ (ಸಂಜೆ 4:37), ದಾವಣಗೆರೆ (6:38), ಹಾವೇರಿ (7:45) ಮಾರ್ಗವಾಗಿ ಹಜರತ್‌ ನಿಜಾಮುದ್ದೀನ ತಲುಪಲಿದೆ. ಹಾವೇರಿ-ಹಜರತ್‌ ನಿಜಾಮುದ್ದೀನ-ಹಾವೇರಿ ನಡುವೆ ವೇಳೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಮೇ 31ರಿಂದ ಚಂಡಿಗಢ-ಯಶವಂತಪುರ ವಾರದಲ್ಲಿ ಎರಡು ದಿನ ಸಂಚಾರದ ಎಕ್ಸ್‌ಪ್ರೆಸ್‌ (22686) ರೈಲು ಯಶವಂತಪುರಕ್ಕೆ ಬೆಳಗ್ಗೆ 6:05ರ ಬದಲು 5:45 ಗಂಟೆಗೆ ತಲುಪಲಿದೆ. ಜೂ. 1ರಿಂದ ಯಶವಂತಪುರ-ಚಂಡಿಗಢ ವಾರದಲ್ಲಿ ಎರಡು ದಿನ ಸಂಚಾರದ ಎಕ್ಸ್‌ ಪ್ರಸ್‌ (22685) ರೈಲು ಮಧ್ಯಾಹ್ನ 1:55ರ ಬದಲು 2:30 ಗಂಟೆಗೆ ಯಶವಂತಪುರದಿಂದ ಹೊರಟು ತುಮಕೂರು (3:20), ಅರಸೀಕೆರೆ (ಸಂಜೆ 4:37), ದಾವಣಗೆರೆ (6:38) ಮಾರ್ಗವಾಗಿ ಚಂಡಿಗಢ ತಲುಪಲಿದೆ. ದಾವಣಗೆರೆ-ಚಂಡಿಗಂಢ-ದಾವಣಗೆರೆ ನಡುವೆ ಸಮಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಜೂ. 3ರಿಂದ ಪಂಢರಪುರ-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್‌ (16542) ರೈಲು ಯಶವಂತಪುರದಿಂದ ಬೆಳಗ್ಗೆ 6:05ರ ಬದಲು 5:45 ಗಂಟೆಗೆ ಹೊರಡಲಿದೆ. ಮಾರ್ಗ ನಡುವಿನ ಇನ್ನುಳಿದ ನಿಲ್ದಾಣಗಳಲ್ಲಿ ವೇಳೆಯಲ್ಲಿ ಯಾವುದೇ ಬದಲಾವಣೆಗಳಿಲ್ಲವೆಂದು ನೈಋತ್ಯ ರೈಲ್ವೆ ವಲಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.