ಕೋವಿಡ್‌ನಿಂದ ನಷ್ಟದಲ್ಲಿವೆ ಸಾರಿಗೆ ಸಂಸ್ಥೆಗಳು

ಬಸ್‌ ಎನ್ನುವ ಮನಸ್ಸು ಬಾರದೆ ಕನ್ನಡದ ತೇರು ಅನ್ನುವಷ್ಟು ಸಂತಸ ಮೂಡಿಸಿದೆ

Team Udayavani, Nov 2, 2021, 6:42 PM IST

ಕೋವಿಡ್‌ನಿಂದ ನಷ್ಟದಲ್ಲಿವೆ ಸಾರಿಗೆ ಸಂಸ್ಥೆಗಳು

ಹುಬ್ಬಳ್ಳಿ: ಕೋವಿಡ್‌ನಿಂದ ಸಾರಿಗೆ ಸಂಸ್ಥೆಗಳು ಸಾಕಷ್ಟು ನಷ್ಟ ಅನುಭವಿಸಿವೆ. ಅರ್ಧ ವೇತನದ ತೆಗೆದುಕೊಳ್ಳುತ್ತಿರುವ ಸಂದರ್ಭದಲ್ಲಿಯೂ ಸಾರಿಗೆ ಸಿಬ್ಬಂದಿ ಕನ್ನಡಾಭಿಮಾನ ಕಡಿಮೆಯಾಗಿಲ್ಲ. ತಮ್ಮ ಸ್ವಂತ ವಾಹನಕ್ಕಿಂತ ಹೆಚ್ಚಾಗಿ ಶೃಂಗರಿಸಿ ಕನ್ನಡಾಸಕ್ತಿ, ಅಭಿಮಾನ ಹಾಗೂ
ಗೌರವ ಹೆಚ್ಚಿಸಿದ್ದಾರೆಂದು ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್‌.ಪಾಟೀಲ ಹೇಳಿದರು.

ಸೋಮವಾರ ಇಲ್ಲಿನ ಗೋಕುಲ ರಸ್ತೆಯ ಹೊಸ ಬಸ್‌ ನಿಲ್ದಾಣದಲ್ಲಿ ಹಂಪಿ ಪರಂಪರೆ ತಿಳಿಸುವ ಕನ್ನಡದ ತೇರು ಸ್ತಬ್ಧಚಿತ್ರ ಹಾಗೂ ಇಡೀ ಕನ್ನಡಮಯಗೊಂಡಿರುವ ಬಸ್‌ ಗೆ ಚಾಲನೆ ನೀಡಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ಸಂಘಟನೆಗಳು ಹಬ್ಬದ ಸಂದರ್ಭ ವೇತನ ನೀಡುವಂತೆ ಪ್ರತಿಭಟನೆ ನಡೆಸಿದರೂ, ಸರಕಾರದೊಂದಿಗೆ ಸಾಕಷ್ಟು ಪ್ರಯತ್ನ ಮಾಡಿದರೂ ಚುನಾವಣೆ ಹಿನ್ನೆಲೆಯಲ್ಲಿ ಅದು ಸಾಧ್ಯವಾಗಲಿಲ್ಲ. ಆದರೆ ದೀಪಾವಳಿ ಸಂಭ್ರಮ ಕಳೆಗುಂದಬಾರದು ಎನ್ನುವ ಕಾರಣಕ್ಕೆ ಅರ್ಧವೇತನ ಹಾಕಲಾಗಿದೆ. ಶೀಘ್ರ ಉಳಿದ ವೇತನ ಪಾವತಿಸಲಾಗುವುದು. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಯಲ್ಲಿ ರಾಜ್ಯೋತ್ಸವ ಕಿಚ್ಚು, ಅಭಿಮಾನಿ, ಆಚರಣೆ ಇದಾವುದು ಅಡ್ಡಿಯಾಗಿಲ್ಲ. ಸಿಬ್ಬಂದಿ ತಮ್ಮ ವಾಹನಕ್ಕಿಂತ ಹೆಚ್ಚಾಗಿ ಸಂಸ್ಥೆ ಬಸ್‌ ಗಳನ್ನು ಪೀÅತಿ ಮಾಡುತ್ತಾರೆ. ಆ ಶೃಂಗಾರ ನೋಡಿದರೆ ಇದಕ್ಕೆ ಬಸ್‌ ಎನ್ನುವ ಮನಸ್ಸು ಬಾರದೆ ಕನ್ನಡದ ತೇರು ಅನ್ನುವಷ್ಟು ಸಂತಸ ಮೂಡಿಸಿದೆ ಎಂದರು.

ಉಪಾಧ್ಯಕ್ಷ ಡಾ| ಬಸವರಾಜ ಕೆಲಗಾರ ಮಾತನಾಡಿ, ಎಲ್ಲಾ ಸಂಸ್ಕೃತಿ ಇರುವ ಕರುನಾಡು ನಮ್ಮ ರಾಜ್ಯ. ಶ್ರೇಷ್ಠ ಸಂಸ್ಕೃತಿ ಹೊಂದಿದೆ. ಇದಕ್ಕೆ ಯಾವುದೇ ಅಪಚಾರವಾಗದಂತೆ ಮುನ್ನಡೆಸಿಕೊಂಡು ಹೋಗುವ ಕೆಲಸ ಆಗಬೇಕಿದೆ. ಸರಕಾರಿ ಆದೇಶ ಪಾಲನೆ ಎನ್ನುವುದಕ್ಕಿಂತ ಇದು ನಮ್ಮ
ಕರುನಾಡಿನ ಹಬ್ಬ ಎನ್ನುವ ಭಾವನೆ ಎಲ್ಲರಲ್ಲಿದೆ. ಎಷ್ಟೇ ಭಾಷೆ ಕಲಿತರೂ ನಮ್ಮ ಭಾಷೆ ಬಳಸಬೇಕು. ಉದ್ಯೋಗಕ್ಕೆ ಬೇರೆ ಭಾಷೆ ಇರಲಿ. ಆದರೆ ಬದುಕಿನ ಭಾಷೆ ಕನ್ನಡವಾಗಿರಲಿ ಎಂದರು.

ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ಸಿಬ್ಬಂದಿ ಸಮರ್ಪಣಾ ಭಾವದಿಂದ ಕೆಲಸ ಮಾಡುತ್ತಿದ್ದಾರೆ. ಇದು ನಾಡು-ನುಡಿಯ ಮೇಲಿರುವ ಪ್ರೀತಿ ಹಾಗೂ ಗೌರವವಾಗಿದೆ ಎಂದರು. ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಗಂಗಾಧರ ಕಮಲದಿನ್ನಿ ಮಾತನಾಡಿ, ಸಂಸ್ಥೆ ಹಾಗೂ ನೌಕರರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಸರಕಾರದ ಅಸಹಕಾರದಿಂದ ನಷ್ಟಕ್ಕೆ ಕಾರಣವಾಗಿದೆ. ಸಂಸ್ಥೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಸಂಸ್ಥೆಗೆ ಬರಬೇಕಾದ ಬಾಕಿ ಜತೆಗೆ ಸಂಸ್ಥೆ ಇತಿಹಾಸದಲ್ಲಿ ಉಳಿಯುವಂತಹ ಕೊಡುಗೆ ನಿಮ್ಮಿಂದ ಆಗಲಿ ಎಂದರು.

ಹಂಪಿ ಸ್ತಬ್ದ ಚಿತ್ರ ಕನ್ನಡದ ತೇರು ನಿರ್ಮಾಣದ ಉಸ್ತುವಾರಿ ಅಧಿಕಾರಿಗಳಾದ ಪ್ರವೀಣ ಈಡೂರ, ಅಶೋಕ ಡೇಂಗಿ ಹಾಗೂ ಕನ್ನಡಮಯ ಬಸ್‌ ಆಗಿ ಶೃಂಗರಿಸಿದ ನಿರ್ವಾಹಕ ಶಶಿಕುಮಾರ ಬೋಸ್ಲೆ, ಚಾಲಕ ಸಂತೋಷ ಜಲಮಗಿ ಅವರನ್ನು ಸನ್ಮಾನಿಸಲಾಯಿತು. ಮಂಡಳಿ ನಿರ್ದೇಶಕರು ಸಂತೋಷ ಪಾಟೀಲ, ಸಿದ್ದಲಿಂಗೇಶ್ವರ ಮಠದ, ಅಶೋಕ ಮಳಗಿ, ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ, ಉಪ ಮುಖ್ಯ ಲೆಕ್ಕಾಧಿಕಾರಿ ಪ್ರಕಾಶ ಕರಗುದರಿ, ವಿಭಾಗೀಯ ಕಚೇರಿ ಹಾಗೂ ಕಾರ್ಯಾಗಾರದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.