ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ


Team Udayavani, Apr 2, 2023, 5:30 PM IST

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ಧಾರವಾಡ : ಧಾರವಾಡ ಗ್ರಾಮೀಣ- 71 ವಿಧಾನಸಭಾ ಮತಕ್ಷೇತ್ರ ಬಿಟ್ಟು ಹೋಗದೇ, ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಿ ಇಲ್ಲಿಯ ಬಾರಾಕೋಟ್ರಿಯಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಸ್ವಗೃಹದ ಎದುರು ಬ್ಲಾಕ್ ಕಾಂಗ್ರೆಸ್- 71ರ ನೇತೃತ್ವದಲ್ಲಿ ಅವರ ಅಭಿಮಾನಿಗಳು ರವಿವಾರ ಧರಣಿ ಸತ್ಯಾಗ್ರಹ ನಡೆಸಿದರು.

ಸಿಎಂ ಎದುರು ಸ್ಪರ್ಧೆಗಾಗಿ ಶಿಗ್ಗಾಂವಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತಂತೆ ಚರ್ಚೆ ಆಗುತ್ತಿದ್ದು, ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ ಗ್ರಾಮೀಣ- 71 ಮತಕ್ಷೇತ್ರ ಬಿಟ್ಟು ವಿನಯ್ ಅವರು ಹೋಗಬಾರದು. ಇಲ್ಲಿಂದಲೇ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಇದಲ್ಲದೇ ಸಚಿವರಾಗಿ ಕೆಲಸ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ಇದೆ. ಕ್ಷೇತ್ರದ ಜನತೆಯೊಂದಿಗೆ ನಿಕಟ ಸಂಪರ್ಕದಿಂದ ಜನಪ್ರಿಯ ನಾಯಕರಾಗಿದ್ದಾರೆ. ಹೀಗಾಗಿ ಈ ಕ್ಷೇತ್ರ ಬಿಟ್ಟು ಹೋಗುವ ಚಿಂತನೆ ಮಾಡಬಾರದು. ಈ ಕೂಡಲೇ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನ ಕೈಕೊಳ್ಳಬೇಕು. ಇದಕ್ಕೆ ಪಕ್ಷದ ವರಿಷ್ಠರು ಕೂಡ ಅವಕಾಶ ಕಲ್ಪಿಸಿ ಕೊಡಬೇಕು. ಇಲ್ಲದೇ ಹೋದಲ್ಲಿ ಧಾರವಾಡ -71 ಬ್ಲಾಕ್ ಕಾಂಗ್ರೆಸ ನ ಎಲ್ಲ ಪದಾಧಿಕಾರಿಗಳು, ಮುಖಂಡರು ಸಾಮೂಹಿಕ ರಾಜೀನಾಮೆ ಕೊಡುತ್ತೇವೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

ಇನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರ ಪರವಾಗಿ ಉಪಾಧ್ಯಕ್ಷ ಪ್ರಕಾಶ ಹಳಿಯಾಳ ಮನವಿ ಸ್ವೀಕರಿಸಿದ್ದು, ಅಲ್ಲದೇ ಪ್ರತ್ಯೇಕವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಕೂಡ ಮನವಿ ಪತ್ರ ಸಲ್ಲಿಸಲಾಯಿತು. ಇದಲ್ಲದೇ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರಿಗೆ ಅಭಿಮಾನಿಗಳು ರಕ್ತದಿಂದ ಬರೆದ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಏಗನಗೌಡರ, ಈಶ್ವರ ಶಿವಳ್ಳಿ ಪರಮೇಶ ಕಾಳೆ, ಚನಬಸಪ್ಪ ಮಟ್ಟಿ, ಅಣ್ಣಪ್ಪ ಚಿನಗುಡಿ, ಕಿಶೋರ ಬಡಿಗೇರ, ಮಂಜು ಭೀಮಕ್ಕನವರ, ಆಯ್ .ಎಸ್. ಏಣಗಿ, ನಂದೀಶ ನಾಯ್ಕರ, ಮಿಲಿಂದ ಇಚ್ಚಂಗಿ,ಮೈಲಾರಗೌಡ ಪಾಟೀಲ ಗೌರಮ್ಮ ಬಳೋಗಿ, ಬಸವರಾಜ ಜಾಧವ, ನವೀನ ಕದಂ, ಸಿದ್ದು ತಿದಿ, ಸೂರಜ ಪುಡಕಲಕಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಜಿಲ್ಲೆಗೆ ಪ್ರವೇಶ ಇಲ್ಲದ ಕಾರಣ ಅವರ ಪರವಾಗಿ ಮತದಾರರ ಸಂಪರ್ಕ ಮಾಡುವ ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದೇನೆ ಹೊರತು ಧಾರವಾಡ ವಿಧಾನಸಭಾ ಕ್ಷೇತ್ರ- 71 ರ ಆಕಾಂಕ್ಷಿ ಅಥವಾ ಅಭ್ಯರ್ಥಿಯೂ ನಾನಲ್ಲ. ಹೀಗಾಗಿ ಯಾರೂ ಗೊಂದಲಕ್ಕೆ ಒಳಗಾಗಬೇಡಿ. ಎಲ್ಲ ಗೊಂದಲ, ಊಹಾಪೋಹಗಳಿಗೆ ಶೀಘ್ರವೇ ತೆರೆ ಬೀಳಲಿದೆ. ಕ್ಷೇತ್ರಕ್ಕೆ ಮರಳಿ ವಿನಯ ಅವರೇ ಬರಲಿದ್ದು, ಅವರೇ ಸ್ಪರ್ಧೆ ಮಾಡಲಿದ್ದಾರೆ.
-ಶಿವಲೀಲಾ ಕುಲಕರ್ಣಿ, ವಿನಯ ಕುಲಕರ್ಣಿ ಪತ್ನಿ

ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಧರಣಿ ಕೈಗೊಂಡ ಬೆಂಬಲಿಗರು, ಕಾರ್ಯಕರ್ತರನ್ನು ಸಮಾಧಾನಪಡಿಸುವ ಕೆಲಸ ಶಿವಲೀಲಾ ಕುಲಕರ್ಣಿ ಮಾಡಿದರು. ಇದಲ್ಲದೇ ವಿಡಿಯೋ ಕಾಲ್ ಮೂಲಕ ಧರಣಿನಿರತರೊಂದಿಗೆ ಮಾತನಾಡಿದ ವಿನಯ ಕುಲಕರ್ಣಿ, ಶಿಗ್ಗಾಂವಿಯಿಂದ ಸ್ಪರ್ಧೆ ಮಾಡುವಂತೆ ಪಕ್ಷದ ವರಿಷ್ಠರು ಕೇಳಿದ್ದು ನಿಜ, ಆದರೆ ನಾನು ಇಲ್ಲ ಎಂಬುದಾಗಿ ಸ್ಪಷ್ಟ ಸಂದೇಶ ನೀಡಿದ್ದೇನೆ. ಈ ಕ್ಷೇತ್ರ ಬಿಟ್ಟು ಹೋಗುವ ಮಾತೇ ಇಲ್ಲ. ಈ ಅಭಿಮಾನ, ಪ್ರೀತಿ ಬಿಟ್ಟು ಹೋಗುವ ವಿಚಾರವೂ ಇಲ್ಲ. ಈ ಅಭಿಮಾನಕ್ಕೆ ಚಿರಋಣಿಯಾಗಿದ್ದೇನೆ ಎಂದು ಮನವೊಲಿಸಿದರು.

ಇದನ್ನೂ ಓದಿ: ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.