ಕಲಬುರಗಿ: 24 ಗಂಟೆಯಲ್ಲಿ 11 ಜನ ಬಲಿ
ಆಳಂದ ಪಟ್ಟಣದ ಹತ್ಯಾನ ಗಲ್ಲಿಯ 72 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
Team Udayavani, Apr 23, 2021, 6:18 PM IST
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಮರಣ ಮೃದಂಗ ಬಾರಿಸುತ್ತಿದೆ. ಇತ್ತೀಚೆಗೆ ಎರಡ್ಮೂರು ಗಂಟೆಗೊಂದು ಸಾವುಗಳು ದಾಖಲಾಗುತ್ತಿದೆ. ಬುಧವಾರವಷ್ಟೇ ಎಂಟು ಸೋಂಕಿತರು ಬಲಿಯಾಗಿದ್ದರೆ, ಗುರುವಾರ 11 ಮಂದಿ ಮಹಾಮಾರಿ ರೋಗದಿಂದ
ಮೃತಪಟ್ಟಿದ್ದಾರೆ.
ಕೊರೊನಾ ಮೊದಲ ಅಲೆಯಲ್ಲಿ 24 ಗಂಟೆಯಲ್ಲಿ ಗರಿಷ್ಠ 10 ಸೋಂಕಿತರ ಸಾವು ದಾಖಲಾಗಿತ್ತು. ಆದರೆ, ಕಳೆದ 24 ಗಂಟೆಯೊಳಗೆ ಮೂವರು ಮಹಿಳೆಯರು ಸೇರಿದಂತೆ 11 ಜನರನ್ನು ಮಹಾಮಾರಿ ಸೋಂಕು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತರ ಸಂಖ್ಯೆ 410ಕ್ಕೆ ಏರಿಕೆಯಾಗಿದೆ.
ಮೃತರ ವಿವರ: ಗುರುವಾರ ಹೊಸದಾಗಿ 659 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸೇಡಂ ತಾಲೂಕಿನ ಮಳಖೇಡ ಗ್ರಾಮದ 46 ವರ್ಷದ ವ್ಯಕ್ತಿ, ಕಲಬುರಗಿಯ ಬಿದ್ದಾಪುರ ಕಾಲೋನಿಯ 40 ವರ್ಷದ ವ್ಯಕ್ತಿ ಮತ್ತು ಕಲಬುರಗಿಯ ಸುವರ್ಣ ನಗರದ 83 ವರ್ಷದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದೇ ರೀತಿ ತೀವ್ರ ಉಸಿರಾಟದ ಸಮಸ್ಯೆ ಜತೆಗೆ ಅಧಿಕ ರಕ್ತದೊತ್ತಡ ಹಾಗೂ ಮೆದುಳಿಗೆ ರಕ್ತಪೂರೈಕೆ ಸಮಸ್ಯೆಯಿಂದ ಬಳಲುತ್ತಿದ್ದ ಚಿತ್ತಾಪುರ ತಾಲೂಕಿನ ರಾಜೋಳ ಗ್ರಾಮದ 72 ವರ್ಷದ ವೃದ್ಧ, ತೀವ್ರ ಉಸಿರಾಟದ ತೊಂದರೆ ಮತ್ತು ಸಕ್ಕರೆ ಕಾಯಿಲೆದಿಂದ ಬಳಲುತ್ತಿದ್ದ ಕಲಬುರಗಿಯ ಮೆಕ್ಕಾ ಕಾಲೋನಿಯ 72 ವರ್ಷದ ವೃದ್ಧ ಮತ್ತು ಆಳಂದ ಪಟ್ಟಣದ ಹತ್ಯಾನ ಗಲ್ಲಿಯ 72 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಅಲ್ಲದೇ, ತೀವ್ರ ಉಸಿರಾಟದ ತೊಂದರೆ, ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ನರಳುತ್ತಿದ್ದ ಕಲಬುರಗಿಯ ವಿಠuಲ ನಗರದ 73 ವರ್ಷದ ವೃದ್ಧ, ಆದರ್ಶ ನಗರದ 52 ವರ್ಷದ ವ್ಯಕ್ತಿ, ರಾಘವೇಂದ್ರ ಕಾಲೋನಿಯ 81 ವರ್ಷದ ವೃದ್ಧ, ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ 54 ವರ್ಷದ ಮಹಿಳೆ ಹಾಗೂ ಶಹಾಬಜಾರ ಪ್ರದೇಶದ ಕಬಾಡಗಲ್ಲಿಯ 57 ವರ್ಷದ ಮಹಿಳೆ ಮಹಾಮಾರಿ ರೋಗದಿಂದ ಮೃತಪಟ್ಟಿದ್ದಾರೆ.
ಸಕ್ರಿಯ ರೋಗಿಗಳು ಹೆಚ್ಚಳ: ದಿನದಿಂದ ದಿನ ಕೊರೊನಾ ಪಾಸಿಟಿವ್ ಕೇಸ್ ಹೆಚ್ಚಿತ್ತಿರುವುದರಿಂದ ಸಕ್ರಿಯ ರೋಗಿಗಳ ಸಂಖ್ಯೆಯೂ ಅಧಿಕವಾಗುತ್ತಿದೆ. ಇದರಿಂದ ಕೋವಿಡ್ ಆಸ್ಪತ್ರೆಗಳು ತುಂಬಿ ತುಳುಕುವಂತೆ ಆಗಿದೆ. ಗುರುವಾರ ಹೊಸದಾಗಿ 659 ಪಾಸಿಟಿವ್ ಪ್ರಕರಣಗಳೊಂದಿಗೆ ಒಟ್ಟಾರೆ
ಸೋಂಕಿತರ ಸಂಖ್ಯೆ 32295ಕ್ಕೆ ಏರಿಕೆಯಾಗಿದೆ. ಇದೇ ವೇಳೆ 288 ಜನ ಸೋಂಕಿತರು ಗುಣಮುಖ ರಾಗಿದ್ದಾರೆ. ಇದರೊಂದಿಗೆ ಈವರೆಗೆ 26184 ಮಂದಿ ಚೇತರಿಸಿಕೊಂಡಂತೆ ಆಗಿದೆ. ಜಿಲ್ಲಾದ್ಯಂತ 5701 ಜನ ಸಕ್ರಿಯ ಕೊರೊನಾ ರೋಗಿಗಳು ಇದ್ದಾರೆ. ಇದರಲ್ಲಿ 810 ಮಂದಿ ಕೊರೊನಾ ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 4768 ಜನ ಸೋಂಕಿತರು ಹೋಂ ಐಸೋಲೇಷನ್ನಲ್ಲಿ ಇದ್ದು, 30 ಮಂದಿ ಕೋವಿಡ್ ಕೇರ್ಸೆಂಟರ್ಗಳಲ್ಲಿ ದಾಖಲಾಗಿದ್ದಾರೆ. ಇನ್ನೂ, 4144 ಕೊರೊನಾ ಮಾದರಿ ಪರೀಕ್ಷಾ ವರದಿಗಳು ಬಾಕಿ ಉಳಿದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ