ಕಾಗಿಣಾ ಚತುಷ್ಪಥ ಹೆದ್ದಾರಿಗೆ 65 ಕೋಟಿ


Team Udayavani, Mar 17, 2022, 3:00 PM IST

11road

ಶಹಾಬಾದ: ನಗರದ ಕಾಗಿಣಾ ಸೇತುವೆ ಮೇಲೆ ಹಾಳಾದ ರಸ್ತೆ, ಮುರಿದು ಬಿದ್ದ ತಡೆಗೋಡೆ, ಕಿರಿದಾದ ರಸ್ತೆ ಮೇಲೆ ನೀರಿನ ಪೈಪ್‌, ರಸ್ತೆ ಮಧ್ಯೆ ಗುಂಡಿಗಳಿಗೆ ಈಗ ಶಾಶ್ವತ ಪರಿಹಾರ ದೊರಕಿದೆ.

ತಾಲೂಕಿನ ಶಹಾಬಾದ-ವಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ-150ಕ್ಕೆ ಸಂಬಂಧಿ ಸಿದಂತೆ ಶಂಕರವಾಡಿ ಸಮೀಪ ನಿರ್ಮಿಸಲಾಗಿರುವ ಸೇತುವೆಗೆ ಹೊಸ ಸೇತುವೆ, ಅದಕ್ಕೆ ಹೊಂದಿಕೊಂಡಿರುವಂತೆ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್‌ ಗಡ್ಕರಿ 65 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.

ಕಾಗಿಣಾ ಸೇತುವೆಗೆ 1968ರಲ್ಲಿ ಅಂದಿನ ಲೋಕೋಪಯೋಗಿ ಸಚಿವರಾಗಿದ್ದ ವೀರೇಂದ್ರ ಪಾಟೀಲ ಅವರ ಅವ ಧಿಯಲ್ಲಿ ಸೇತುವೆ ನಿರ್ಮಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ ನಿರ್ವಹಣೆ ಕೊರತೆಯಿಂದ ಸೇತುವೆ ಸಾರ್ವಜನಿಕರ ಜೀವಕ್ಕೆ ಕುತ್ತಾಗಿ ಪರಿಣಮಿಸಿತ್ತು. ಐವತ್ತು ಅಡಿ ಅಗಲದ ರಾಷ್ಟ್ರೀಯ ಹೆದ್ದಾರಿಗೆ ಹತ್ತಡಿ ಅಗಲದ ಸೇತುವೆ ಇದ್ದು, ಮಧ್ಯದಲ್ಲಿ ಕಂದಕಗಳು, ನೀರಿನ ಪೈಪ್‌ ಗಳು, ಅಲ್ಲದೇ ತಡೆಗೋಡೆ ಇಲ್ಲದೆ ಸೇತುವೆ ಅಪಾಯಕ್ಕೆ ಆಹ್ವಾನಿಸುವಂತಿತ್ತು. ಪ್ರವಾಹ ಬಂದಾಗ ಸಂಪರ್ಕ ಕಡಿತಗೊಳ್ಳುತ್ತಿತ್ತು. ಈಗ ಇದಕ್ಕೆಲ್ಲಾ ಮುಕ್ತಿ ಸಿಕ್ಕಂತಾಗಿದೆ.

ಈಗಾಗಲೇ ಈ ಸೇತುವೆ ಮೇಲಿಂದ ಹಲವಾರು ವಾಹನಗಳು ನದಿಗೆ ಬಿದ್ದಿವೆ. ಹಲವಾರು ಸಾವು, ನೋವುಗಳು ಉಂಟಾಗಿವೆ. ಈಗ ರಾಷ್ಟ್ರೀಯ ಹೆದ್ದಾರಿಯ ಸುರ್ಪದಿಗೆ ಬಂದರೂ ಯಾವುದೇ ಕ್ರಮ ಕೈಗೊಳ್ಳದ್ದಕ್ಕೆ ಸಾರ್ವಜನಿಕರು ಅಸಮಾಧಾನಗೊಂಡಿದ್ದರು. ಈ ಕುರಿತು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಅನೇಕ ಬಾರಿ ಮನವಿ ಸಲ್ಲಿಸಲಾಗಿತ್ತು. ಈಗ ಇದಕ್ಕೆ ಮುಕ್ತಿ ಸಿಕ್ಕಂತಾಗಿದೆ.

ಶಾಸಕರು ಮುತುವರ್ಜಿ ವಹಿಸಿ ನಿತೀನ್‌ ಗಡ್ಕರಿ, ಡಾ| ಸಂಸದ ಉಮೇಶ ಜಾಧವ ಗಮನಕ್ಕೆ ತಂದು ಸುಮಾರು 65 ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದಾರೆ. ಇದರಿಂದ ನಗರದ ಕಾಗಿಣಾ ನದಿಗೆ ಹೊಸ ಸೇತುವೆ ಹಾಗೂ ಚತುಷ್ಪತ ಹೆದ್ದಾರಿ ನಿರ್ಮಾಣ ಕಾಮಗಾರಿ ಸದ್ಯದಲ್ಲಿಯೇ ನಡೆಯಲಿದ್ದು, ಬಹುದಿನಗಳ ಕನಸು ನನಸಾಗಲಿದೆ.

ಹದಗೆಟ್ಟ ರಸ್ತೆ ಮತ್ತು ತಡೆ ಗೋಡೆಯಿಲ್ಲದ ಸೇತುವೆ ಸಂಚಾರಕ್ಕೆ ನಾಗರಿಕರು ಜೀವಭಯದಿಂದಲೇ ಪ್ರಯಾಣಿಸುವಂತೆ ಆಗಿತ್ತು. ಈ ಬಗ್ಗೆ ಹಲವಾರು ಜನರು ದೂರು ಸಲ್ಲಿಸುತ್ತಿದ್ದರು. ಇದನ್ನು ಮನಗಂಡು ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೆ. ಇದನ್ನು ಮನಗಂಡು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್‌ ಗಡ್ಕರಿ ಅನುದಾನ ಒದಗಿಸಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. -ಬಸವರಾಜ ಮತ್ತಿಮಡು, ಶಾಸಕ

ನದಿಗೆ ನಿರ್ಮಿಸಿದ ಸೇತುವೆ ಹಳೆಯದಾಗಿ ಅಭದ್ರತೆಯಿಂದ ಕೂಡಿತ್ತು. ಈಗ ಹೊಸ ಸೇತುವೆ ಇದಕ್ಕೆ ಹೊಂದಿ ಕೊಂಡಿರುವಂತೆ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಅನುದಾನ ಒದಗಿಸಲು ಕಾರಣರಾದ ಕೇಂದ್ರ ಸಚಿವ ನಿತೀನ್‌ ಗಡ್ಕರಿ, ಸಂಸದ ಉಮೇಶ ಜಾಧವ ಹಾಗೂ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಕೃತಜ್ಞತೆ ಸಲ್ಲಿಸುತ್ತೆವೆ. -ಅಣವೀರ ಇಂಗಿನಶೆಟ್ಟಿ ಅಧ್ಯಕ್ಷ, ಬಿಜೆಪಿ ಮಂಡಲ, ಶಹಾಬಾದ

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.