ಕೆರೆ ಒಡ್ಡಿನಲ್ಲಿ ಬಿರುಕು; ತನಿಖೆಗೆ ಆಗ್ರಹ
Team Udayavani, Aug 3, 2022, 2:55 PM IST
ಚಿಂಚೋಳಿ: ನಾಗಾ ಇದಲಾಯಿ ಗ್ರಾಮ ದಲ್ಲಿನ ಸಣ್ಣ ನೀರಾವರಿ ಕೆರೆಯ ಮಣ್ಣಿನ ಒಡ್ಡಿನಲ್ಲಿ ಬಿರುಕು ಕಾಣಿಸಿದ್ದಲ್ಲದೇ, ಕುಸಿತವಾಗುತ್ತಿರುವುದಕ್ಕೆ ಕೆರೆ ದುರಸ್ತಿ ಕಾಮಗಾರಿ ಕಳಪೆಯಾಗಿದ್ದೇ ಕಾರಣ ವಾಗಿದ್ದು, ತನಿಖೆ ನಡೆಸಬೇಕೆಂದು ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ ಒತ್ತಾಯಿಸಿರು.
ತಾಲೂಕಿನ ನಾಗಾಇದಲಾಯಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಕೆರೆಯಲ್ಲಿ ಕಾಣಿಸಿಕೊಂಡಿರುವ ಕುಸಿತ ಮತ್ತು ಬಿರುಕು ಪರಿಶೀಲಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಾಲೂಕಿನಲ್ಲಿ ಕಳೆದ 2020ರಲ್ಲಿ ಸುರಿದ ಭಾರಿ ಮಳೆಗೆ ಹೂಡದಳ್ಳಿ ಮತ್ತು ನಾಗಾಇದಲಾಯಿ ಗ್ರಾಮಗಳಲ್ಲಿರುವ ಕೆರೆಗಳ ಒಡ್ಡುಗಳು ಒಡೆದಿದ್ದವು. ಆ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಜೆ.ಸಿಮಾಧುಸ್ವಾಮಿ ನಾಗಾಇದಲಾಯಿ ಗ್ರಾಮಕ್ಕೆ ಭೇಟಿ ನೀಡಿ, ಕೆರೆ ದುರಸ್ತಿಕಾರ್ಯಕ್ಕೆ ಪ್ರಕೃತಿ ವಿಕೋಪ ಪರಿಹಾರ ಯೋಜನೆ ಅಡಿಯಲ್ಲಿ 4ಕೋಟಿ ರೂ. ಮಂಜೂರಿಗೊಳಿಸಿದ್ದರು. ಆನಂತರ ಕೆರೆ ದುರಸ್ತಿ ಕಾಮಗಾರಿ ಕೇವಲ ಒಂದೆರೆಡು ತಿಂಗಳಲ್ಲಿ ಪೂರ್ಣಗೊಳಿಸಲಾಗಿತ್ತು. ಹೀಗಾಗಿ ಕಾಮಗಾರಿ ಕಳಪೆಯಾಗಿದೆ ಎಂದು ಆಪಾದಿಸಿದರು.
ಶಾಸಕ ಡಾ| ಅವಿನಾಶ ಜಾಧವ ಕೆರೆ ಒಡ್ಡು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳ ಪರಿಶೀಲಿಸಿ ದುರಸ್ತಿ ಕಾರ್ಯ ನಡೆದ ಸ್ಥಳದಲ್ಲಿ ಹಾನಿ ಆಗಿಲ್ಲ. ಆದರೆ ಹಳೆ ಜಾಗದಲ್ಲಿ ಬಿರುಕು ಕಾಣಿಸುತ್ತಿದೆ ಎಂದು ಹೇಳಿರುವುದು ಸಮರ್ಪಕವಾಗಿಲ್ಲ. ಆದ್ದರಿಂದ ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಸೈಯದ್ ನಿಯಾಜ ಅಲಿ, ಹಣಮಂತರೆಡ್ಡಿ, ವಿಶ್ವನಾಥ ಪಾಟೀಲ, ವೀರಾರೆಡ್ಡಿ, ಬಸವಂತರೆಡ್ಡಿ, ಶೇರಖಾನ್, ರಾಜಶೇಖರ ಬೋಯಿನ್, ಸುದರ್ಶನರೆಡ್ಡಿ, ನಾಗೇಶ ಗಂಜಿ, ಸಂಗಮೇಶ ಪಾಟೀಲ, ನಾಗರಾಜ, ಸಂತೋಷ ಪೂಜಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ