ಭ್ರಷ್ಟಾಚಾರ ಆರೋಪ ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಎಚ್ಚರಿಕೆ
Team Udayavani, Apr 12, 2022, 12:15 PM IST
ಕಲಬುರಗಿ: ಉತ್ತಮವಾಗಿ ಮುನ್ನೆಡೆಸಲಾಗುತ್ತಿದ್ದರೂ ವಿಶ್ವಕರ್ಮ ಸಮಾಜದ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿರುವುದರಿಂದ ಸಮಾಜದ ಘನತೆಗೆ ಧಕ್ಕೆ ಉಂಟಾಗುತ್ತಿದ್ದು, ಭ್ರಷ್ಟಾಚಾರ ಆರೋಪ ಮಾಡಿರುವವರು ಕೂಡಲೇ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕ್ಕದ್ದಮ್ಮೆ ಹೂಡಲಾಗುವುದು ಎಂದು ವಿಶ್ವಕರ್ಮ ಸಮಾಜದ ಅಧ್ಯಕ್ಷ ಮಾಣಿಕರಾವ ಪೋದ್ದಾರ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ವಿಶ್ವಕರ್ಮ ಸಮಾಜದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆಗೆ ನಿರ್ಧರಿಸಲಾಗಿತ್ತು. ಆದರೆ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಚುನಾವಣೆಗೆ ಮುಂದಾಗಿದ್ದರಿಂದ ಸಮಾಜದ ಎಲ್ಲ ಹಿರಿಯರು ಅದನ್ನು ತಿರಸ್ಕರಿಸಿದ್ದರು. ಆದರೆ ಚುನಾವಣಾಧಿಕಾರಿ ಚಂದ್ರಶೇಖರ ನಿಯಮ ಬಾಹಿರವಾಗಿ ಚುನಾವಣೆ ನಡೆಸಿದ್ದರಿಂದ ಅದನ್ನು ತಿರಸ್ಕರಿಸಿ, ಹಿಂದಿನ ಪದಾಧಿಕಾರಿಗಳನ್ನೇ ಇದುವರೆಗೆ ಮುಂದುವರಿಸಲಾಗಿದೆ ಎಂದರು.
ಇಡೀ ಸಮಾಜ ಇದೀಗ ಒಗ್ಗಟ್ಟಾಗಿದೆ. ಆದರೆ ಕೆಲವರು ಸಮಾಜದಲ್ಲಿ 2.5 ಕೋಟಿ ರೂ. ಅವ್ಯವಹಾರವಾಗಿದೆ. ಚಿನ್ನ, ಬೆಳ್ಳಿ ಆಭರಣ ಗುಳುಂ ಆಗಿವೆ ಎನ್ನುತ್ತಿದ್ದಾರೆ. ಇಡೀ ಸಂತ್ರಸ್ತವಾಡಿಯ ಕಾಳಿಕಾ ದೇವಿಯ ದೇವಸ್ಥಾನ ಆಸ್ತಿಯೇ ಅಷ್ಟು ಇಲ್ಲ. ದೇವಿಯ ಎಲ್ಲ ಆಭರಣ ಸಂಸ್ಥೆಯಲ್ಲಿಯೇ ಇದ್ದು, ಆರು ಲಕ್ಷ ರೂ. ಬ್ಯಾಂಕ್ನಲ್ಲಿವೆ. ಸಂಸ್ಥೆ ಆರಂಭವಾದಾಗಿನಿಂದ ಇದುವರೆಗೆ ಪ್ರತಿ ವರ್ಷದ ಲೆಕ್ಕಪತ್ರಗಳನ್ನು ಇಡಲಾಗಿದೆ. ಆರೋಪದಲ್ಲಿ ಹುರುಳಿಲ್ಲ. ಆದ್ದರಿಂದ ಕೂಡಲೇ ಇದಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ, ಶೀಘ್ರದಲ್ಲಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಸಮಾಜದ ಪ್ರಧಾನ ಕಾರ್ಯದರ್ಶಿ ದಶರಥ ಪೋದ್ದಾರ, ಉಪಾಧ್ಯಕ್ಷ ಮನೋಹರ ಪೋದ್ದಾರ, ಪ್ರಮುಖರಾದ ಕುಪ್ಪಣ್ಣ ಪೋದ್ದಾರ, ಸತೀಶ ಪತ್ತಾರ, ದತ್ತು ಬಡಿಗೇರ್ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ