ಎಚ್ಚರ! ದುರುಗುಟ್ಟಿ-ಬೆನ್ನಟ್ಟುತ್ತಿವೆ ಶ್ವಾನಗಳು


Team Udayavani, Apr 19, 2022, 10:10 AM IST

4dogs

ವಾಡಿ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಮನೆಯ ಹೊಸ್ತಿಲು ದಾಟಿ ಹೊರ ಬಂದರೆ ಶ್ವಾನಗಳ ಹಿಂಡು ಅವರನ್ನೇ ದುರುಗುಟ್ಟುತ್ತಿವೆ. ಯಾವುದೇ ಬಡಾವಣೆಗೆ ಹೋದರೂ ಬೊಗಳಿ ಬೆನ್ನಟ್ಟುವ ನಾಯಿಗಳು ಕಂಡುಬರುತ್ತಿವೆ. ಇದು ಪಾದಚಾರಿಗಳಿಗೆ ಭಯವನ್ನುಂಟು ಮಾಡುತ್ತಿದೆ.

ಪುರಸಭೆ ಆಡಳಿತ ಕೇಂದ್ರ ಸ್ಥಾನವಾಗಿರುವ ಪಟ್ಟಣದಲ್ಲಿ ಮತ್ತೂಮ್ಮೆ ಬೀದಿನಾಯಿಗಳ ಉಪಟಳ ಹೆಚ್ಚಾಗಿದೆ. ಬಡಾಬಣೆಗಳ ಗಲ್ಲಿ, ರಸ್ತೆಗಳ ಮೂಲಕ ಮಾರುಕಟ್ಟೆಗೆ, ಆಸ್ಪತ್ರೆಗೆ, ರೈಲು ನಿಲ್ದಾಣಗಳಿಗೆ ಹೋಗುವ ಜನರು ಬೀದಿನಾಯಿಗಳ ಕಾಟದಿಂದ ಬೇಸತ್ತಿದ್ದಾರೆ. ಮಾಂಸದ ಅಂಗಡಿಗಳ ಮುಂದೆ ಜಮಾಯಿಸಿ ಬಾಡೂಟದ ಆಹಾರಕ್ಕಾಗಿ ಕಾಯ್ದು ನಿಲ್ಲುತ್ತಿವೆ. ಅಂಗಡಿಯವರು ಎಸೆಯುವ ಮಾಂಸ ತ್ಯಾಜ್ಯದ ರುಚಿ ಕಂಡಿರುವ ಈ ಬೀದಿ ನಾಯಿಗಳು ಮನುಷ್ಯರನ್ನು ದುರುಗುಟ್ಟಿ ನೋಡಿ ಬೊಗಳುತ್ತಿವೆ.

ಕೆಲವೆಡೆ ಸಣ್ಣ ಮಕ್ಕಳ ಮೇಲೆ ದಾಳಿ ನಡೆಸುತ್ತಿವೆ. ಮನೆಯಿಂದ ಹೊರಗೆ ಬರುವ ಜನರು ನಾಯಿಗಳ ಕಣ್ತಪ್ಪಿಸಿಕೊಂಡೇ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಬಿಸಿಲ ತಾಪದಿಂದ ತತ್ತರಿಸಿರುವ ಜನತೆಯ ನೆಮ್ಮದಿಯನ್ನು ದಾಳಿಕೋರ ನಾಯಿಗಳು ಕಸಿದಿವೆ. ಇಲ್ಲಿನ ಪಿಲಕಮ್ಮಾ ಬಡಾವಣೆ, ಎಸಿಸಿ ಕಾಲೋನಿ, ಶಿವಾಜಿ ಚೌಕ್‌, ಮಲ್ಲಿಕಾರ್ಜುನ ದೇವಸ್ಥಾನ ಬಡಾವಣೆ, ಹನುಮಾನ ನಗರ, ಸೋನಾಬಾಯಿ ನಗರ, ವಿಜಯ ನಗರ, ಅಂಬೇಡ್ಕರ್‌ ಕಾಲೋನಿ, ರೆಸ್ಟ್‌ ಕ್ಯಾಂಪ್‌ ತಾಂಡಾ, ಜಾಂಬವೀರ ಕಾಲೋನಿ, ಜಾಮಿಯಾ ಮಸೀದಿ ಏರಿಯಾ, ಮಾರುಕಟ್ಟೆ ಪ್ರದೇಶ, ಬಸ್‌ ನಿಲ್ದಾಣ ಪರಿಸರದಲ್ಲಿ ಬೀದಿ ನಾಯಿಗಳ ಹಿಂಡು ಕಾಣಸಿಗುತ್ತವೆ.

ಮುಖ್ಯ ರಸ್ತೆ ಬದಿಯಲ್ಲಿ ಹಂದಿಗಳ ಸಂಖ್ಯೆಯೂ ಹೆಚ್ಚಿದ್ದರಿಂದ ಬೈಕ್‌ ಸವಾರರು ಅಪಘಾತಕ್ಕೆ ಈಡಾಗುತ್ತಿರುವ ಉದಾಹರಣೆಗಳು ಇವೆ. ಆದ್ದರಿಂದ ಪುರಸಭೆ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಾಯಿ, ಹಂದಿಗಳನ್ನು ಹಿಡಿದು ಕೂಡಲೇ ಸ್ಥಳಾಂತರಿಸಬೇಕು ಎಂದು ನಗರದ ಜನತೆ ಮನವಿ ಮಾಡಿದ್ದಾರೆ.

ಬೀದಿನಾಯಿಗಳನ್ನು ಹಿಡಿದು ಬೇರೆಡೆ ಸ್ಥಳಾಂತರಿಸಲು ನೂತನ ಕಾನೂನಿನಲ್ಲಿ ಅವಕಾಶವಿಲ್ಲ. ಅವುಗಳನ್ನು ಹಿಡಿದು ಕೊಲ್ಲುವುದು ಅಪರಾಧ. ನಾಯಿಗಳನ್ನು ಹಿಡಿದು ಸಂತಾನ ಹರಣ ಚಿಕಿತ್ಸೆ ನೀಡುವ ಮೂಲಕ ಅದೇ ಜಾಗದಲ್ಲಿ ಬಿಡುವ ನಿಯಮವಿದೆ. ನಗರದಲ್ಲಿ ಮಾಂಸ ತ್ಯಾಜ್ಯವನ್ನು ಎಲ್ಲೆಂದೆರಲ್ಲಿ ಎಸೆಯದಂತೆ ಮಾಂಸ ವ್ಯಾಪಾರಿಗಳಿಗೆ ಖಡಕ್‌ ಸೂಚನೆ ಕೊಟ್ಟಿದ್ದೇವೆ. ಪೌರಕಾರ್ಮಿಕರಿಗೆ ತ್ಯಾಜ್ಯ ಕೊಟ್ಟು ಅವರು ಆದೇಶ ಪಾಲಿಸುತ್ತಿದ್ದಾರೆ. ಪಶು ವೈದ್ಯರನ್ನು ಸಂಪರ್ಕಿಸಿ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಕೊಡಲು ಕ್ರಮಕೈಗೊಳ್ಳುತ್ತೇನೆ. ಆಸ್ಪತ್ರೆಯಲ್ಲೂ ನಾಯಿ, ಹಾವು, ಚೇಳು ವಿಷಜಂತುಗಳ ಕಡಿತದ ಔಷಧ ಲಭ್ಯವಿರುವಂತೆ ಎಚ್ಚರಿಕೆ ವಹಿಸುತ್ತೇವೆ. -ಡಾ| ಚಿದಾನಂದ ಸ್ವಾಮಿ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.