ಸದೃಢ ರಾಷ್ಟ್ರಕ್ಕೆ ವಿವೇಕವಾಣಿ ಅಗತ್ಯ
Team Udayavani, Jan 16, 2022, 10:20 AM IST
ಜೇವರ್ಗಿ: ಯಾವುದೇ ರಾಷ್ಟ್ರದ ಅಭಿವೃದ್ಧಿಯಲ್ಲಿ ಅಲ್ಲಿನ ಯುವಕರ ಪಾತ್ರ ತುಂಬಾ ಪ್ರಮುಖವಾಗಿದೆ. ಇಡೀ ಯುವ ಸಮೂಹದ ಚೇತನಾ ಶಕ್ತಿಯಾದ ವಿವೇಕಾನಂದರು ನೀಡಿದ ಸಂದೇಶವನ್ನು ಪ್ರತಿಯೊಬ್ಬ ಯುವಕರೂ ಅಳವಡಿಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಪ್ರಾಚಾರ್ಯ ಮೊಹಮ್ಮದ್ ಅಲ್ಲಾ ಉದ್ದೀನ್ ಸಾಗರ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದ ವತಿಯಿಂದ ಏರ್ಪಡಿಲಾಗಿದ್ದ “ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ-ರಾಷ್ಟ್ರೀಯ ಯುವ ದಿನಾಚರಣೆ’ ಉದ್ಘಾಟಿಸಿ ಅವರು ಮಾತನಾಡಿದರು.
ಎನ್ಎಸ್ಎಸ್ ಅಧಿಕಾರಿ ಎಚ್.ಬಿ.ಪಾಟೀಲ ಮಾತನಾಡಿ, ಯುವಕರು ಪುರುಷ ಸಿಂಹಗಳಾಗಬೇಕು. ಪರಾವಲಂಬಿಗಳಾಗಬಾರದು. ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂದು ಪ್ರತಿಪಾದಿಸುತ್ತಿದ್ದ ಸ್ವಾಮಿ ವಿವೇಕಾನಂದರು, ಯುವ ಜನರಿಗೆ ನೀಡಿರುವ ಸಂದೇಶಗಳು ಜೀವನ ಧರ್ಮವಾಗಿದೆ ಎಂದರು.
ಸ್ಥಳೀಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಶಿವಶರಣಪ್ಪ ಜೆ., ಉಪನ್ಯಾಸಕ ಸುರೇಶ, ಕಾಲೇಜಿನ ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್, ಶರಣಮ್ಮ ಭಾವಿಕಟ್ಟಿ, ರವೀಂದ್ರಕುಮಾರ ಬಟಗೇರಿ, ಶಂಕ್ರೆಪ್ಪ ಹೊಸದೊಡ್ಡಿ, ಮಂಜುನಾಥ ಎ.ಎಂ., ಪ್ರಥಮ ದರ್ಜೆ ಸಹಾಯಕ ನೇಸರ ಎಂ.ಬೀಳಗಿ, ಅತಿಥಿ ಉಪನ್ಯಾಸಕರಾದ ರಂಜಿತಾ ಠಾಕೂರ್, ಲಾಡ್ಲೆಮಶಾಕ್ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ