ಇನ್ನೂ ಆರಂಭವಾಗಿಲ್ಲ ಆಧಾರ ಸೇವಾ ಕೇಂದ್ರ


Team Udayavani, Aug 14, 2021, 5:38 PM IST

ಇನ್ನೂ ಆರಂಭವಾಗಿಲ್ಲ ಆಧಾರ ಸೇವಾ ಕೇಂದ್ರ

ಆಳಂದ: ಕಳೆದ ಎರಡು ತಿಂಗಳಿಂದಲೂ ಹೋಬಳಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಧಾರ ಸೇವಾ ಕೇಂದ್ರಗಳ ಸೇವಾ ಕಾರ್ಯ ಸ್ಥಗಿತವಾಗಿದ್ದರಿಂದ ಆಧಾರ ಕಾರ್ಡ್‌ ತಿದ್ದುಪಡಿ, ಅಪ್‌ಡೇಟ್‌ಗಾಗಿ ಸಾರ್ವಜನಿಕರು ಪಟ್ಟಣದ ಖಾಸಗಿ ಸೇವಾ ಕೇಂದ್ರಗಳ ಎದುರು ದಿನವಿಡಿ ಸರತಿಸಾಲಿನಲ್ಲಿ ನಿಲ್ಲುವಂತಾಗಿದೆ.

ಕಂದಾಯ ಇಲಾಖೆ ಸ್ವಾಧಿಧೀನದ ಹೋಬಳಿ ಕೇಂದ್ರ ಆಳಂದ, ಖಜೂರಿ, ನಿಂಬರ್ಗಾ, ಮಾದನಹಿಪ್ಪರಗಾ, ನರೋಣಾ ನಾಡ ಕಚೇರಿಗಳಲ್ಲಿ ಆಧಾರ ಸೇವಾ ಕೇಂದ್ರಗಳು ಕಳೆದ ಎರಡು ತಿಂಗಳಿಂದ ಕಾರ್ಯನಿರ್ವಹಿಸುತ್ತಿಲ್ಲ.

ಸಕಾಲಕ್ಕೆ ಆಧಾರ ಸರಿಪಡಿಸದೇ ಇರುವುದು ಸರ್ಕಾರಿ ಸೌಲಭ್ಯ ಸೇರಿದಂತೆ ಇನ್ನುಳಿದ ಕೆಲಸಕ್ಕೆ ಅಡಚಣಿ ಎದುರಾಗಿದೆ. ನಮ್ಮನ್ನು ಸೌಲಭ್ಯಗಳಿಂದ ವಂಚಿತವನ್ನಾಗಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಸದ್ಯ ಬ್ಯಾಂಕ್‌ ಖಾತೆ ತೆರೆಯಲು, ರೇಷನ್‌ ಕಾರ್ಡ್‌ಗೆ ಹೊಂದಾಣಿಕೆ ಸೇರಿದಂತೆ ಅಗತ್ಯ ದಾಖಲೆ ಪಡೆಯಲು, ಸರ್ಕಾರಿ ವ್ಯವಹಾರಕ್ಕೆ ಆಧಾರ ಕಾರ್ಡ್‌ ಕಡ್ಡಾಯವಾಗಿ ಕೇಳಲಾಗುತ್ತಿದೆ. ಆದರೆ, ಸಾರ್ವಜನಿಕರಿಗೆ ಸಕಾಲಕ್ಕೆ ಸರಿಪಡಿಸಿದ ಆಧಾರ ಕಾರ್ಡ್‌ ಸಲ್ಲಿಕೆ ವಿಳಂಬ ಆಗುತ್ತಿದೆ. ಹೀಗಿದ್ದರೂ ಸಾರ್ವಜನಿಕರು ತಮ್ಮ ಆಧಾರ ಕಾರ್ಡ್‌ ಸರಿಪಡಿಸಿಕೊಳ್ಳಲು ಮುಂದಾಗಿ ಆಧಾರ ಸೇವಾ ಕೇಂದ್ರಗಳಿಗೆ ಹೋದರೆ ಕಳೆದ ಎರಡು ತಿಂಗಳಿಂದಲೂ ಸೇವಾ ಕಾರ್ಯ ನಡೆಯದೇ ಇರುವುದರಿಂದ ಬೇಸತ್ತು ಪರವಾನಗಿ ಪಡೆದ ಖಾಸಗಿ ಸೇವಾ ಕೇಂದ್ರಗಳ ಮೊರೆ ಹೋಗಿ, ದಿನವಿಡಿ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.

ಸದ್ಯ ಪಟ್ಟಣದ ಎಸ್‌ಬಿಐ ಶಾಖೆಯಲ್ಲಿ ಆಧಾರ ಸೇವಾ ಕೇಂದ್ರ ಹೊರತುಪಡಿಸಿ ನಾಡ ಕಚೇರಿ ಸೇರಿದಂತೆ ಇನ್ನುಳಿದ ಖಾಸಗಿ ಸೇವಾ ಕೇಂದ್ರಗಳಿಗೂ ಸರ್ಕಾರ ತಡೆ ನೀಡಿದ್ದರಿಂದ ಸದ್ಯ ಪಟ್ಟಣದ ಏಕೈಕ ಸೇವಾ ಕೇಂದ್ರವಾಗಿ ಎಸ್‌ಬಿಐ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಎಲ್ಲ ಭಾಗಗಳಿಂದ ಜನ ಬರುತ್ತಿರುವುದರಿಂದ ದಟ್ಟಣೆ ಉಂಟಾಗಿದೆ. ಅಲ್ಲದೇ ಸರ್ವರ್‌ನ ತಾಂತ್ರಿಕ ಅಡೆತಡೆಯಿಂದ ದಿನಕ್ಕೆ 20 ಕಾರ್ಡ್‌ಗಳನ್ನು ಮಾತ್ರ ಸರಿಪಡಿಸಿಕೊಡಲು ಸಾಧ್ಯವಿದೆ
ಎನ್ನುತ್ತಾರೆ ಸೇವಾಕೇಂದ್ರದ ಸಿಬ್ಬಂದಿ.

ಬ್ಯಾಂಕ್‌ ಖಾತೆ, ರೇಷನ್‌ ಕಾರ್ಡ್‌, ಮಾಸಾಶನ, ಜಮೀನು ಸರ್ವೇ, ಮಕ್ಕಳ ಶಿಷ್ಯ ವೇತನ ಪಡೆಯಲು ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬ ನಾಗರಿಕರಿಗೂ ಆಧಾರ ಕಾರ್ಡ್‌ ಎಲ್ಲದಕ್ಕೂ ಆಧಾರ ಸ್ತಂಭವಾಗಿದೆ. ಆದರೆ ಜನರಿಗೆ ಸಕಾಲಕ್ಕೆ ಮಾರ್ಪಡಿತ ಆಧಾರ ಕಾರ್ಡ್‌ ನೀಡುವ ಸೇವಾ ಕೇಂದ್ರಗಳೇ ಬಾಗಿಲು ಮುಚ್ಚಿದ್ದು, ಜನತೆ ಪರದಾಡುವಂತೆ ಆಗಿದೆ.

ಮೂಲಗಳ ಪ್ರಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆಧಾರ ನೋಂದಣಿ ಕೈಗೊಳ್ಳುವ ಕುರಿತು ಗ್ರಾಪಂ ಸಿಬ್ಬಂದಿಗೆ ತರಬೇತಿ ನೀಡಿ ಆಧಾರ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಒಂದು ತಿಂಗಳ ಹಿಂದೆಯೇ ಸರ್ಕಾರ ಆದೇಶ ನೀಡಿತ್ತು. ಆದರೆ ಈ ಕಾರ್ಯ ಇನ್ನೂ ಚಾಲ್ತಿಗೆ ಬಂದಿಲ್ಲ.

ನಿಂಬರ್ಗಾ ನಾಡಕಚೇರಿಯಲ್ಲಿನ ಆಧಾರ ನೋಂದಣಿ ಕೇಂದ್ರದಲ್ಲಿ ಸುಮಾರು ಎರಡು ತಿಂಗಳಿಂದಲೂ ಯಾವುದೇ ಕೆಲಸ-ಕಾರ್ಯ ನಡೆಯುತ್ತಿಲ್ಲ. ಖಾಸಗಿ ಕೇಂದ್ರಕ್ಕೆ ಅನುಮತಿ ನೀಡಿಲ್ಲ. ಹೀಗೆ ಸಾರ್ವಜನಿಕರು ಕಲಬುರಗಿ ಸೇರಿದಂತೆ ಇನ್ನುಳಿದ ಕಡೆ ಹೋಗಿ ಹೆಚ್ಚಿನ ಹಣ ನೀಡಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ನಾಡಕಚೇರಿಯಲ್ಲಿ ಇನ್‌ವರ್ಟರ್‌ ಇಲ್ಲ. ವಿದ್ಯುತ್‌ ಕಡಿತವಾದರೆ ಕೆಲಸ ಬಂದ್‌ ಆಗಿ ಜನರು ದಿನವಿಡಿ ಸರಣಿಯಲ್ಲೇ ನಿಲ್ಲುವಂತಾಗಿದೆ. ಅನೇಕರ ಆಧಾರ ಕಾರ್ಡ್‌ಗೆ ಮೊಬೈಲ್‌ ಸಂಖ್ಯೆ ಹೊಂದಾಣಿಕೆ ವಿಳಂಬವಾಗಿದೆ. ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಹಣ ಬರುತ್ತಿಲ್ಲ. ಕಾರ್ಮಿಕರ ಕಾರ್ಡ್‌ ಹೊಸದಾಗಿ ಮಾಡಿಕೊಳ್ಳುವರಿಗೆ ಆಧಾರಗೆ ಮೊಬೈಲ್‌ ಸಂಖ್ಯೆ ಬೇಕು. ಆದರೆ ಸೇವಾ ಕೇಂದ್ರ ಮುಚ್ಚಿದ್ದರಿಂದ ಜನಸಾಮಾನ್ಯರಿಗೆ ಸರ್ಕಾಲಕ್ಕೆ ಮಾರ್ಪಡಿತ ಆಧಾರ ಸಿಗದೇ ತೊಂದರೆ ಪಡುವಂತೆ ಆಗಿದೆ.
ಬಸವರಾಜ ಯಳಸಂಗಿ, ಕರವೇ ಅಧ್ಯಕ್ಷ, ನಿಂಬರಗಾ

ಆಳಂದ, ನರೋಣಾ, ಮಾದನಹಿಪ್ಪರಗಾ ನಾಡಕಚೇರಿಯಲ್ಲಿ ಸೇವಾ ಕೇಂದ್ರದ ಹಳೆಯ ಸಿಬ್ಬಂದಿ ತೆಗೆದು ಹೊಸಬರ ನೇಮಕ ಮಾಡಿದ್ದರಿಂದ ಕಾರ್ಯ ಕೈಗೊಳ್ಳಲು ವಿಳಂಬವಾಗಿದೆ. ಖಜೂರಿ ಮತ್ತು ನಿಂಬರ್ಗಾದಲ್ಲಿ ತೊಂದರೆಯಿಲ್ಲ. ಶೀಘ್ರವೇ ಕಾರ್ಯ ಆರಂಭಿಸಲಾಗುವುದು.
ಯಲ್ಲಪ್ಪ ಸುಬೇದಾರ, ತಹಶೀಲ್ದಾರ್‌

*ಮಹಾದೇವ ವಡಗಾಂವ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.