ಭಾಷಾ ಸಾಮರಸ್ಯ ಮೈಗೂಡಿಸಿಕೊಳ್ಳಲು ಸಲಹೆ
Team Udayavani, Jan 11, 2022, 12:10 PM IST
ಜೇವರ್ಗಿ: ಯಾವುದೇ ಭಾಷೆ ಮೇಲು- ಕೀಳಲ್ಲ. ಪ್ರತಿಯೊಂದು ಭಾಷೆಗೆ ತನ್ನದೇ ಆದ ಮಹತ್ವವಿದೆ. ಮಾತೃಭಾಷೆಯನ್ನು ಹೃದಯಾಂತರಾಳದಿಂದ ಪ್ರೀತಿಸಿ, ಅನ್ಯ ಭಾಷೆಗಳನ್ನು ಗೌರವಿಸಬೇಕು. ಇದರಿಂದ ಭಾಷಾ ತಾರತಮ್ಯ ನಿವಾರಣೆಯಾಗಲು ಸಾಧ್ಯವಿದೆ. ಎಲ್ಲ ಭಾಷೆಗಳನ್ನು ಗೌರವಿಸುವ ಭಾಷಾ ಸಾಮರಸ್ಯ ಮೈಗೂಡಿಸಿಕೊಳ್ಳುವುದು ಪ್ರಸ್ತುತ ಸಂದರ್ಭದಲ್ಲಿ ಅಗತ್ಯವಾಗಿದೆ ಎಂದು ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ಸರ್ಕಾರಿ ಪಿಯು ಕಾಲೇಜಿನ ಹಿಂದಿ ಉಪನ್ಯಾಸಕ ಜಮೀಲ್ ಅಹಮ್ಮದ್ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕದ ಸಹಯೋಗದೊಂದಿಗೆ ಹಿಂದಿ ವಿಭಾಗದ ವತಿಯಿಂದ ಸೋಮವಾರ ಜರುಗಿದ “ವಿಶ್ವ ಹಿಂದಿ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
1975ರ ಜನವರಿ 10ರಂದು ನಾಗಪುರನಲ್ಲಿ ಹಿಂದಿ ಭಾಷೆಗೆ ಸಂಬಂಧಿ ಸಿದಂತೆ ಬೃಹತ ಸಮ್ಮೇಳನ ಜರುಗಿತು. ಹಿಂದಿ ಭಾಷೆಯ ಮಹತ್ವವನ್ನು ಸಾರುವ ದಿಕ್ಸೂಚಿ ಸಮ್ಮೇಳನ ಇದಾಗಿದೆ. ಅದರ ಸವಿನೆನಪಿಗಾಗಿ ಪ್ರತಿವರ್ಷ ಜನವರಿ 10ರಂದು “ವಿಶ್ವ ಹಿಂದಿ ದಿನವನ್ನು ಆಚರಿಸಲಾಗುತ್ತದೆ. ಹಿಂದಿ ಭಾಷೆಯು ರಾಷ್ಟಭಾಷೆಯಾಗಿದ್ದು, ಸರಳ ಹಾಗೂ ಸುಂದರವಾಗಿದೆ. ಇದು ಗ್ರಾಮೀಣ ಪ್ರದೇಶದ ಜನಸಾಮಾನ್ಯರು ಒಳಗೊಂಡಂತೆ ಎಲ್ಲರಿಗೂ ಅರ್ಥವಾಗುವ, ಮಾತನಾಡುವ ಭಾಷೆಯಾಗಿದ್ದು, ಇದು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ. ಹಿಂದಿ ಭಾಷೆಯು ದೇಶದ ಸಂಸ್ಕೃತಿ, ಪರಂಪರೆಯ ರಾಯಭಾರಿಯಾಗಿ ಪ್ರತಿನಿಧಿಸುತ್ತದೆ ಎಂದರು.
ಪ್ರಾಚಾರ್ಯ ಮೊಹಮ್ಮದ್ ಅಲ್ಲಾ ಉದ್ದೀನ್ ಸಾಗರ, ಎನ್.ಎಸ್. ಎಸ್ ಅದಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಶರಣಮ್ಮ ಭಾವಿಕಟ್ಟಿ, ರವೀಂದ್ರಕುಮಾರ ಬಟಗೇರಿ, ಶಂಕ್ರೆಪ್ಪ ಹೊಸದೊಡ್ಡಿ, ಮಂಜುನಾಥ ಎ.ಎಂ., ಪ್ರಕಾಶ ಪಾಟೀಲ, ಪ್ರ.ದ.ಸ ನೇಸರ ಎಂ.ಬೀಳಗಿ, ಅತಿಥಿ ಉಪನ್ಯಾಸಕರಾದ ರಂಜಿತಾ ಠಾಕೂರ್, ಲಾಡ್ಲೆಮಶಾಕ್ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ