ಜಿಡಗಾ ಮಠದ ಕೆರೆ ನಿರ್ಮಾಣಕ್ಕೆ ಒಪ್ಪಿಗೆ


Team Udayavani, Jan 17, 2022, 11:53 AM IST

7lake

ಆಳಂದ: ತಾಲೂಕಿನ ಜಿಡಗಾ ನವಕಲ್ಯಾಣ ಮಠದ 30 ಎಕರೆ ಪ್ರದೇಶದಲ್ಲಿ ಶ್ರೀ ಮಠದ ಪ್ರಸ್ತಾಪಿತ ಪ್ರವಾಸಿ ತಾಣ ಮಾದರಿ ಕೆರೆ ನಿರ್ಮಾಣ ಕಾರ್ಯಕ್ಕೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಸಹಮತ ಸೂಚಿಸಿದರು.

ಶನಿವಾರ ಜಿಡಗಾ ನವಕಲ್ಯಾಣ ಮಠಕ್ಕೆ ನಿಗಮದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಶ್ರೀ ಮಠದ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ| ಮುರುಘರಾಜೇಂದ್ರ ಮಹಾ ಸ್ವಾಮೀಜಿಯಿಂದ ದರ್ಶನಾಶೀರ್ವಾದ ಪಡೆದು ಚರ್ಚಿಸಿ, ಕೆರೆ ನಿರ್ಮಾಣದ ಕಾರ್ಯ ಕೈಗೆತ್ತಿಕೊಳ್ಳುವ ಕುರಿತು ನೀಲಿ ನಕ್ಷೆ ಹಾಗೂ ಅಂದಾಜು ಪಟ್ಟಿ ಸಿದ್ಧಪಡಿಸಿ ಕಾರ್ಯಗತ ಮಾಡಲಾಗುವುದು ಎಂದರು.

ಇದೇ ವೇಳೆ ಶ್ರೀಗಳು ಮಾತನಾಡಿ, ಶ್ರೀ ಮಠದಿಂದ ಕೆರೆ ನಿರ್ಮಾಣದ ಸಂಕಲ್ಪವಿದೆ. ಇದರಿಂದ ನೆರೆಹೊರೆ ರೈತರ ಹೊಲದಲ್ಲಿ ಅಂತರ್ಜಲ ವೃದ್ಧಿಯಾಗುವುದು. ಭವಿಷ್ಯದಲ್ಲಿ ಶ್ರೀಮಠ ಉದ್ದೇಶಿತ 2001 ಗೋವು ರಕ್ಷಣೆ, ಸಾವಿರ ಬಡ ಮಕ್ಕಳಿಗೆ ಉಚಿತ ವಸತಿ ಸಹಿತ ಶಿಕ್ಷಣದಂತ ಲೋಕಪಯೋಗಿ ಕಾರ್ಯಕ್ಕೆ ನೀರಿನ ಅಗತ್ಯವಾಗಲಿದೆ. ಜತೆಗೆ ಹಸಿರು ಪರಿಸರ ಅರಣ್ಯೀಕರಣಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಪ್ರವಾಸಿತಾಣ ಉದ್ಯಾನವನ ಮಾದರಿ ಹಾಗೂ ಕೆರೆಯಲ್ಲಿ ಲಿಂ| ಷಡಕ್ಷರಿ ಶಿವಯೋಗಿ ಸಿದ್ಧರಾಮರ 76 ಅಡಿ ಎತ್ತರದ ಬೃಹತ್‌ ಪ್ರತಿಮೆ ಸ್ಥಾಪಿಸಲು ಉದ್ದೇಶಿಸಲಾಗಿದೆ. ಉದ್ದೇಶಿತ ಈ ಕೆರೆಗೆ ನೀರಿನ ಮೂಲವಾಗಿ ಭೀಮಾನದಿಯಿಂದ ಅಮರ್ಜಾಕ್ಕೆ ನೀರು ತರುವ ಯೋಜನೆ ಜಾಲ್ತಿಯಲಿದೆ. ಇದೇ ಮಾರ್ಗದಲ್ಲಿ ಕೆರೆಯ ಜಾಗ ಇರುವುದರಿಂದ ಆ ನೀರು ತುಂಬಿಸಿಕೊಳ್ಳಲು ಅನುಕೂಲವಾಗುತ್ತದೆ. ಆರಂಭಿಕವಾಗಿ ಕೆರೆ ನಿರ್ಮಾಣಕ್ಕಾಗಿ 12 ಎಕರೆ ಜಾಗ ಬಿಟ್ಟುಕೊಡಲಾಗಿತ್ತು. ಆದರೆ ಇನ್ನಷ್ಟು ಜಾಗದ ಅವಶ್ಯಕತೆ ಮನಗಂಡು ಇನ್ನೂ 18 ಎಕರೆ ಸೇರಿ ಒಟ್ಟು 30 ಎಕರೆ ಪ್ರದೇಶ ಒದಗಿಸಲು ಬದ್ಧವಾಗಿದ್ದೇವೆ ಎಂದು ವಿವರಿಸಿದರು.

ಈ ಕುರಿತು 30 ಎಕರೆ ಪ್ರದೇಶದಲ್ಲಿ ವಿಸ್ತೃತವಾಗಿ ನೀಲಿ ನಕ್ಷೆ ಹಾಗೂ ಅಂದಾಜು ಪಟ್ಟಿ ಸಿದ್ಧಪಡಿಸಿ ಮುಂದಿನ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ನಿರ್ದೇಶಕ ಮಲ್ಲಿಕಾರ್ಜುನ ಒಪ್ಪಿಗೆ ಸೂಚಿಸಿದರು.

ನಿಗಮದ ಅಧೀಕ್ಷಕ ಅಭಿಯಂತರ ವಿಲಾಸಕುಮಾರ ಮಹಾಶೆಟ್ಟಿ, ಕಲಬುರಗಿ ಐಪಿಸಿ ವಿಭಾಗ-1 ನಿಗಮದ ಕಾರ್ಯಪಾಲಕ ಅಭಿಯಂತರ ಸೂರ್ಯಕಾಂತ ಮಾಲೆ, ಶಾಖಾಧಿಕಾರಿ ಸತೀಶ ಉಪ್ಪಿನ್‌, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಲಕ್ಷ್ಮೀಕಾಂತ ಬಿರಾದಾರ, ಮುಖಂಡ ಅಭಿಷೇಕ ಅಲಂಪ್ರಭು ಪಾಟೀಲ, ಗುತ್ತಿಗೆದಾರ ಎಂ.ಎಸ್‌. ಪಾಟೀಲ, ಸಿದ್ಧಶ್ರೀ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಬಸವರಾಜ ಹಿರೇಮಠ, ಸಿದ್ಧರಾಮ ಪಾಟೀಲ, ಶ್ರೀ ಮಠದ ಆಪ್ತ ಕಾರ್ಯದರ್ಶಿ ಬಸವರಾಜ ಚೌಪಾಟೆ, ಯಲ್ಲಾಲಿಂಗ ಸಲಗರ, ಶಿಕ್ಷಕ ಸಿದ್ಧರಾಮ ಯಾದವಾಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.