ಬಾಡುತ್ತಿದೆ ಹೂವು ಬೆಳೆಗಾರರ ಬದುಕು

ಮಾರುಕಟ್ಟೆಗೆ ಸಾಗಿಸಲಾಗದೇ ಮಣ್ಣುಪಾಲಾಗುತ್ತಿವೆ ಹೂವು

Team Udayavani, Apr 30, 2020, 11:59 AM IST

30-April-05

ಆಲಮಟ್ಟಿ: ಯಲಗೂರ ಗ್ರಾಮದ ರಮೇಶ ಹೂಗಾರ ಅವರ ತೋಟದಲ್ಲಿ ಬೆಳೆದ ಹೂವು.

ಆಲಮಟ್ಟಿ: ವಿಶ್ವದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಜಾರಿಗೊಳಿಸಿದ್ದರಿಂದ ಹೂವು ಬೆಳೆಗಾರರ ಬದುಕು ಬಾಡುತ್ತಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದುವೆ, ಜಾತ್ರೆ, ಉತ್ಸವ ರದ್ದುಗೊಳಿಸಿದ್ದರಿಂದ, ಪ್ರಸಿದ್ಧ ದೇಗುಲಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿದ್ದರಿಂದ ಹೂವಿಗೆ ಬೇಡಿಕೆ ಕುಸಿದಿದೆ. ಹೀಗಾಗಿ ಹೂಗಳು ಮಾರುಕಟ್ಟೆಗೆ ಸಾಗಿಸಲಾಗದೇ ಹೊಲದಲ್ಲೇ ಬಾಡಿ, ಕೊಳೆತು ಮಣ್ಣು ಪಾಲಾಗುತ್ತಿವೆ.

ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಊರು ಕಳೆದುಕೊಂಡಿದ್ದ ಬಹುತೇಕ ಸಂತ್ರಸ್ತರ ಕುಟುಂಬಕ್ಕೆ ಹೂವಿನ ಬೆಳೆ ಆಸರೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳಬಾಳ ಗ್ರಾಮದ ರಮೇಶ ಬಸಪ್ಪ ಹೂಗಾರ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಮನೆ ಹಾಗೂ ಹೊಲಗಳನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಸರ್ಕಾರದಿಂದ ನೀಡಿದ ಪುಡಿಗಾಸು ಪರಿಹಾರ ಪಡೆದು ಇಲ್ಲಿಗೆ ಸಮೀಪದ ಯಲಗೂರದಲ್ಲಿ ರೈತರೊಬ್ಬರ ಜಮೀನು ಲಾವಣಿಗೆ ಪಡೆದು ಮತ್ತು ಒಂದು ಎಕರೆ ಜಮೀನು ಖರೀದಿಸಿದ್ದಾರೆ. ಈ ಎರಡೂ ಜಮೀನುಗಳಲ್ಲಿ ವಿವಿಧ ಬಗೆಯ ಹೂವುಗಳನ್ನು ಬೆಳೆದಿದ್ದಾರೆ. ಈ ಹೂವುಗಳನ್ನು ಪಟ್ಟಣ, ನಗರ ಪ್ರದೇಶಗಳಿಗೆ ಹೋಗಿ ಮಾರುತ್ತಿದ್ದರು.

ಹೂವಿನ ವ್ಯಾಪಾರವೇ ವಂಶಪಾರಂಪರ್ಯ ಉದ್ಯೋಗವಾಗಿದೆ. ಆದರೂ ಕಳೆದ 15 ವರ್ಷಗಳಿಂದ ಸಾಲಸೋಲ ಮಾಡಿ ಸೇವಂತಿಗೆ (ಗಲಾಟಿ) ಸಸಿಗಳನ್ನು ಖರೀದಿಸಿ ತಂದು ನಾಟಿ ಮಾಡಿ ಹೂ ಬೆಳೆಯುತ್ತಿದ್ದಾರೆ. ಹೊಲದಲ್ಲಿ ಬೆಳೆದ ಹೂವುಗಳನ್ನು ಮನೆಗೆ ತಂದು ಕುಟುಂಬದ ಸದಸ್ಯರು ಸೇರಿ ಮಾಲೆಗಳನ್ನು ಕಟ್ಟಿ ಆಲಮಟ್ಟಿ, ನಿಡಗುಂದಿಯ ವಿವಿಧ ಅಂಗಡಿಗಳಿಗೆ 5 ರೂ.ಗೆ ಒಂದರಂತೆ ಮಾರುತ್ತಾರೆ. ಹೂಮಾಲೆ ಕಟ್ಟಿ ಉಳಿಯುವ ಹೂಗಳನ್ನು ಇಲಕಲ್ಲ, ಆಲಮಟ್ಟಿ ಹಾಗೂ ನಿಡಗುಂದಿಗಳಲ್ಲಿ 50 ರೂ.ಗೆ ಕೆಜಿಯಂತೆ ಮಾರುತ್ತಾರೆ. ಆದರೆ ಈಗ ಹೂವು ಮಾರಲಾಗದೇ ಹೂ ಬೆಳೆಗಾರರ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ.

ಮಣ್ಣು ಪಾಲಾದ ಹೂ: ಲಾಕ್‌ಡೌನ್‌ ನಿಂದಾಗಿ ಈಗ ಹೂ ಮಾರಲಾಗುತ್ತಿಲ್ಲ. ಕೊನೆಗೆ ಗಿಡವಾದರೂ ಬದುಕಲಿ ಎಂದು ತೋಟದಲ್ಲಿಯೇ ಹೂವು ಕತ್ತರಿಸಿ ಮಣ್ಣು ಪಾಲು ಮಾಡಲಾಗುತ್ತಿದೆ. ಕಷ್ಟಪಟ್ಟು ಬೆಲೆದ ಹೂವನ್ನು ಕೈಯಾರೆ ಕತ್ತರಿಸಿ ನೆಲಕ್ಕೆಸೆಯುವಂತಾಗಿದೆ ಎಂದು ರೈತ ರಮೇಶ ಹೂಗಾರ ಅಳಲು ತೋಡಿಕೊಂಡಿದ್ದಾರೆ. ಇದೇ ಯಲಗೂರಿನ ರೈತ ಮಂಜುನಾಥ
ಕಿರಿಶ್ಯಾಳ ಅವರೂ ಕೂಡ ದುಂಡುಮಲ್ಲಿಗೆ, ಕಾಕಡಾ ಮಲ್ಲಿಗೆ ಹಾಗೂ ಸೇವಂತಿಗೆ ಹೂ ಬೆಳೆದಿದ್ದಾರೆ. ಅವರೂ ಕೂಡ ಮಾರಾಟ ಮಾಡಲಾಗದೇ ತೊಂದರೆ ಅನುಭವಿಸುವಂತಾಗಿದೆ.

ಸರ್ಕಾರ ಹೂವು ಬೆಳೆದ ರೈತರ ಬದುಕು ಹಾಳಾಗದಂತೆ ಅವರಿಗೆ ಆರ್ಥಿಕ ಸಹಾಯ ನೀಡಬೇಕು.
ಚಂದ್ರಶೇಖರ ಹೆರಕಲ್ಲ,
ಪ್ರಗತಿಪರ ಸಂಘಟನೆ ಅಧ್ಯಕ್ಷ

ರೈತರ ಜಮೀನಿಗೆ ಹೋಗಿ ಸಮೀಕ್ಷೆ ನಡೆಸಲಾಗುವುದು. ನಂತರ ಸರ್ಕಾರದ ನಿಯಮದಂತೆ ಸೂಕ್ತ ಕ್ರಮ ವಹಿಸಲಾಗುವುದು.
ಸಿ.ಬಿ.ಪಾಟೀಲ, ಸಹಾಯಕ
ನಿರ್ದೇಶಕರು ತೋಟಗಾರಿಕೆ ಇಲಾಖೆ
ಬಸವನಬಾಗೇವಾಡಿ-ಮುದ್ದೇಬಿಹಾಳ

ಶಂಕರ ಜಲ್ಲಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.