ಮುಳವಾಡ ಏತನೀರಾವರಿ ಕಾಲುವೆಗಳಿಗೆ ನೀರು ಹರಿಸಿ
Team Udayavani, Apr 17, 2020, 3:50 PM IST
ಆಲಮಟ್ಟಿ: ಕೃಷ್ಣಾಭಾಗ್ಯಜಲ ನಿಗಮದ ಮುಖ್ಯ ಅಭಿಯಂತರರಿಗೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನವಿ ಸಲ್ಲಿಸಿದರು.
ಆಲಮಟ್ಟಿ: ಮುಳವಾಡ ಏತನೀರಾವರಿ ಯೋಜನೆ ವ್ಯಾಪ್ತಿಯ ಎಲ್ಲ ಕಾಲುವೆಗಳ ಮೂಲಕ ಏ. 20ರೊಳಗಾಗಿ ಕೆರೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನವಿ ಸಲ್ಲಿಸಿದರು.
ಮಧ್ಯಾಹ್ನ ಆಲಮಟ್ಟಿ ಕೃಷ್ಣಾಭಾಗ್ಯಜಲನಿಗಮದ ಮುಖ್ಯ ಅಭಿಯಂತರ ಎಂ.ಎನ್.ಪದ್ಮಜಾ ಅವರ ಮೂಲಕ ಕೃಷ್ಣಾ ಮೇಲ್ದಂಡೆ ಯೋಜನೆ ನೀರು ನಿರ್ವಹಣೆ ಸಲಹಾ ಸಮಿತಿ ಅಧ್ಯಕ್ಷ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯು ಬೇಸಿಗೆಯ ಬಿರುಬಿಸಿಲಿಂದ ಜನಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪ್ಪಿಸುವಂತಾಗಿದೆ ಇದರಿಂದ ಜಿಲ್ಲೆಯಲ್ಲಿಯೇ ಬೃಹತ್ ಜಲಾಶಯ ನಿರ್ಮಿಸಿದ್ದರೂ ಜನರು ನೀರಿಗಾಗಿ ಪರದಾಡುತ್ತಿದ್ದು, ಅದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಮುಳವಾಡ ಏತನೀರಾವರಿ ಯೋಜನೆಯ ಪೂರ್ವ ಕಾಲುವೆ, ಪಶ್ಚಿಮ ಕಾಲುವೆ ಮಸೂತಿ ಹಾಗೂ ಮಲಘಾಣ ಜಾಕ್ ವೆಲ್ಗಳನ್ನು ಆರಂಭಿಸಬೇಕು. ಈಗಾಗಲೇ ವಿಜಯಪುರ ಮುಖ್ಯ ಕಾಲುವೆಯು ಕೂಡಗಿ ಬಳಿ ರೈಲ್ವೆ ಅಂಡರ್ ಪಾಸ್ ಕಾಮಗಾರಿಯೂ ಮುಗಿದಿದೆ. ಇದರಿಂದ ನೀರು ಹರಿಸಲು ಯಾವುದೇ ತೊಂದರೆಯಿಲ್ಲ. ಆದ್ದರಿಂದ ಜಿಲ್ಲೆಯ ಎಲ್ಲ ಕೆರೆಗಳನ್ನು ಕಾಲುವೆಗಳ ಮೂಲಕ ತುಂಬಿಸುಬುದರಿಂದ ಜನ-ಜಾನುವಾರುಗಳು, ವನ್ಯ ಜೀವಿಗಳು ಬದುಕುತ್ತವೆ. ಅಲ್ಲದೇ ಕಾಲುವೆಗಳ ಮೂಲಕ ನೀರು ಹರಿಯುವುದರಿಂದ ಅಂತರ್ಜಲ ಹೆಚ್ಚಾಗಿ ಕೊಳವೆಬಾವಿ ಹಾಗೂ ತೆರೆದಬಾವಿಗಳಿಗೆ ನೀರು ಹೆಚ್ಚಾಗಲಿದೆ ಎಂದು ಹೇಳಿದರು.
ಕರವೀರ ಮಡಿವಾಳರ, ಅಂದಾನಿ ತೋಳಮಟ್ಟಿ, ರೋಣಿಹಾಳ ತಾ.ಪಂ.ಸದಸ್ಯ ಬಸಪ್ಪ ಸಿದ್ದಗೊಂಡ, ಶಿವರಾಜ ಮುರನಾಳ, ಅಪ್ಪುಕಟ್ಟಿಮನಿ, ಮಸೂಬಾಕಟ್ಟಿಮನಿ, ಬಸವರಾಜ ಸಾತಿಹಾಳ, ಅಮರ ಮಡಿವಾಳರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ