ಆಳಂದ: ಏಳು ಸ್ವಸಹಾಯ ಸಂಘಕ್ಕೆ ಸಾಲ ವಿತರಣೆ


Team Udayavani, Feb 24, 2022, 12:37 PM IST

11group

ಆಳಂದ: ಮಹಿಳೆಯರು ಸ್ವ-ಸಹಾಯ ಸಂಘ ಗಳನ್ನು ಕಟ್ಟಿಕೊಂಡು ಅವುಗಳಿಗೆ ಇರುವ ಸೌಲಭ್ಯ, ಸಾಲ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಂಘ ಮಿತ್ರ ಗ್ರಾಮೀಣ ಹಣಕಾಸು ಸೇವಾ ಸಂಸ್ಥೆಯ ಧಾರವಾಡದ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ ಸಲಹೆ ನೀಡಿದರು.

ಪಟ್ಟಣದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸಂಸ್ಥಾನ ಹಿರೇಮಠದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಸಂಘ ಮಿತ್ರ ಗ್ರಾಮೀಣ ಹಣಕಾಸು ಸೇವಾ ಸಂಸ್ಥೆ, ಗ್ರಾಮ ಸ್ವರಾಜ್ಯ ಸೌಹಾರ್ದ ಪತ್ತಿನ ಸಂಘ ನಿಯಮಿತ (ನಾಗಲೇಗಾಂವ)ದ ಆಶ್ರಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘವು ಹೈನುಗಾರಿಕೆ, ಗುಡಿ ಕೈಗಾರಿಕೆ, ಮನೆ ಸಾಲ ಹೀಗೆ ವಿವಿಧ ರೀತಿಯ ಸಾಲ ನೀಡುತ್ತದೆ. ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾಗಿದ್ದ ಕಲಬುರಗಿಯ ಸಂಘಮಿತ್ರ ಹಣಕಾಸು ಸೇವಾ ಸಂಸ್ಥೆ ವ್ಯವಸ್ಥಾಪಕ ಧರ್ಮರಾಜ ದೇಶಮುಖ ಮಾತನಾಡಿ, ಏಳು ಸ್ವಸಾಹಯ ಸಂಘಗಳಿಗೆ ತಲಾ 25 ಸಾವಿರ ರೂ.ಗಳಂತೆ ಸಾಲವಿತರಣೆ ಮಾಡಲಾಗಿದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಸ್ವರಾಜ್ಯ ಸೌಹಾರ್ದ ಪತ್ತಿನ ಸಂಘದ ಅಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ ಮಾತನಾಡಿ, ಮಹಿಳೆಯರು ಸಂಘ ಮಿತ್ರ ಶಕ್ತಿ ತುಂಬಿಕೊಂಡು ಆರ್ಥಿಕ ಶಿಕ್ಷಣ ನೀತಿಗಳನ್ನು ಪಾಲಿಸಿ, ಉಳಿತಾಯ ಮಾಡಬೇಕು. ಇದರಿಂದ ಆರ್ಥಿಕ ಲಾಭವಾಗುತ್ತದೆ ಎನ್ನುವುದನ್ನು ಮನಗಾಣಬೇಕು ಎಂದು ಸಲಹೆ ನೀಡಿದರು.

ಸಂಸ್ಥಾನ ಹಿರೇಮಠದ ಶ್ರೀ ಸಿದ್ಧೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಸೇವಾ ಸಂಸ್ಥೆ ವ್ಯವಸ್ಥಾಪಕ ರವಿಕುಮಾರ, ಪುರಸಭೆ ಅಧ್ಯಕ್ಷೆ ರಾಜಶ್ರೀ ಎಸ್‌. ಖಜೂರಿ, ಸದಸ್ಯ ಶ್ರೀಶೈಲ ವಿ. ಪಾಟೀಲ, ಆನಂದ ಎಸ್‌. ದೇಶಮುಖ, ವಲಯ ವ್ಯವಸ್ಥಾಪಕ ಶಿವಲಿಂಗಯ್ಯ ಹಿರೇಮಠ, ಅಣ್ಣರಾಯ ಪಾಟೀಲ, ಶರಣಬಸಪ್ಪ, ಅಂಗನ ವಾಡಿ ಕಾರ್ಯಕರ್ತೆ ಸಂಘದ ಅಧ್ಯಕ್ಷೆ ಪುಷ್ಪಾವತಿ ಚಟ್ಟಿ, ಗಜರಾಬಾಯಿ, ಸುನಂದಾ, ಚಂದ್ರಕಲಾ, ಬಂಡೆಮ್ಮಾ ಹಾಗೂ ಸಂಘದ ಮಹಿಳೆಯರು ಇದ್ದರು.

ಮಡಿವಾಳಯ್ಯ ಬಿ. ಮಠಪತಿ ನಿರೂಪಿಸಿದರು. ವಿದ್ಯಾರ್ಥಿನಿಯರಾದ ವರ್ಷಾ, ಸ್ವಪ್ನಾ, ಮಿನಾಕ್ಷಿ, ರೇಷ್ಮಾ, ಲಕ್ಷ್ಮೀ ಪ್ರಾರ್ಥನಾ ಗೀತೆ ಹಾಡಿದರು. ಅಣ್ಣರಾವ ಪಾಟೀಲ ಸ್ವಾಗತಿಸಿದರು, ದೀಪಕ ವಿ. ಗುಂಡಗೊಳೆ ವಂದಿಸಿದರು. ಇದೇ ವೇಳೆ ಭಾಗ್ಯವಂತಿ ನಿರಂತರ ಉಳಿತಾಯ ಸಂಘ ಸೇರಿ ಏಳು ಸಂಘಗಳಿಗೆ ತಲಾ 25 ಸಾವಿರ ರೂಪಾಯಿಯಂತೆ ಒಟ್ಟು 13.50 ಲಕ್ಷ ರೂ. ಸಾಲ ವಿತರಣೆ ಮಾಡಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.