ಆಳಂದ: ಹಿರೋಳಿಯಲ್ಲಿ ನೀರಿಗಾಗಿ ನಿಲ್ಲದ ಹಾಹಾಕಾರ-ದೇಗುಲದ ಬಾವಿಗೆ ನೂಕುನುಗ್ಗಲು

ದೂರದ ಪ್ರದೇಶಕ್ಕೆ ಹೋಗಿ ನೀರು ತರಲು ಪರದಾಡುತ್ತಿದ್ದಾರೆ.

Team Udayavani, Jul 12, 2023, 2:20 PM IST

ಆಳಂದ: ಹಿರೋಳಿಯಲ್ಲಿ ನೀರಿಗಾಗಿ ನಿಲ್ಲದ ಹಾಹಾಕಾರ

ಆಳಂದ: ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಹಿರೋಳಿ ಗ್ರಾಮದಲ್ಲಿ ಕಳೆದೊಂದು ತಿಂಗಳಿಂದ ನೀರು ಪೂರೈಕೆ ಇಲ್ಲದೇ ಹಾಹಾಕಾರ ಸೃಷ್ಟಿಯಾಗಿದೆ. ಹಿರೋಳಿ ಗ್ರಾಮ ಪಂಚಾಯಿತಿಯಿಂದ ನೀರು ಪೂರೈಕೆ ಮಾಡುವ ತೆರೆದ ಬಾವಿ, ಕೊಳವೆ ಬಾವಿಗಳು ಸಂಪೂರ್ಣ ಬತ್ತಿ ಹೋಗಿವೆ. ಎರಡ್ಮೂರು ಕೊಡ ನೀರು ಸಿಕ್ಕರೆ ಪುಣ್ಯ.

ಇಷ್ಟು ನೀರು ಇಡೀ ಕುಟುಂಬಕ್ಕೆ ಸಾಲದಿರುವುದರಿಂದ ಹೆಣ್ಮಕ್ಕಳು, ಮಕ್ಕಳು ವೃದ್ಧರಾದಿಯಾಗಿ ನೀರಿಗಾಗಿ ಹೊಲ ಗದ್ದೆಗಳಿಗೆ ಅಲೆಯುವಂತಾಗಿದೆ. ಗ್ರಾಮದಲ್ಲಿ ಸುಮಾರು ಎರಡು ಸಾವಿರ ಮನೆಗಳಿದ್ದು, ಇಲ್ಲಿ ಐದಾರು ಸಾವಿರ ಜನರು ವಾಸವಾಗಿದ್ದಾರೆ. ಬೇಸಿಗೆ ಮುಗಿದು ಮಳೆಗಾಲ ಆರಂಭವಾಗಿದ್ದರೂ ಮಳೆ ಬಾರದೇ ಇರುವುದರಿಂದ ಜನ ಜಾನುವಾರುಗಳಿಗೆ ನೀರೊದಗಿಸುವುದು ಆಡಳಿತಕ್ಕೆ ದೊಡ್ಡ ಸವಾಲಾಗಿದೆ. ಮತ್ತೊಂದೆಡೆ ಗ್ರಾಮಸ್ಥರು ಕೆಲ ಖಾಸಗಿ ಬಾವಿ, ಕೊಳವೆ ಬಾವಿಗಳಿಗೆ ಹೋಗಿ ನೀರಿಗಾಗಿ ಬೇಡುವ ಪರಿಸ್ಥಿತಿ ಎದುರಾಗಿದೆ. ಅಲ್ಲಿಯೂ ಕೂಡಾ ನೀರು ಪಾತಾಳಕ್ಕೆ ಕುಸಿದಿದ್ದು, ಕೊಡ ನೀರು ಸಿಕ್ಕರೂ ನಿಟ್ಟುಸಿರು
ಬಿಡುವಂತಾಗಿದೆ.

ಮಕ್ಕಳು, ಮಹಿಳೆಯರು, ವಯೋವೃದ್ಧರು ಸೇರಿ ಕೊಡ ಹೊತ್ತು ನೀರು ತರಲು ಮುಂದಾದರೂ ನೀರು ದೊರಕುತ್ತಿಲ್ಲ. ಅನೇಕರು
ದ್ವಿಚಕ್ರ ವಾಹನ, ಸೈಕಲ್‌, ಎತ್ತಿನಗಾಡಿ ಮೂಲಕ ತಮಗೆ ಅನುಕೂಲವಿರುವ ವ್ಯವಸ್ಥೆಯಲ್ಲಿ ದೂರದ ಪ್ರದೇಶಕ್ಕೆ ಹೋಗಿ ನೀರು ತರಲು ಪರದಾಡುತ್ತಿದ್ದಾರೆ.

ತುರ್ತು ಕ್ರಮ ಕೈಗೊಳ್ಳಿ: ಗ್ರಾಪಂನಿಂದ ಸೋಮವಾರ ಎರಡು ಕೊಳವೆ ಬಾವಿ ತೋಡಿದ್ದರಲ್ಲಿ ಒಂದಕ್ಕೆ ನೀರು ಸಮರ್ಪಕವಾಗಿ ದೊರತ್ತಿಲ್ಲ. ಇನ್ನೊಂದು ವಿಫಲವಾಗಿದೆ. ಸದ್ಯ ಟ್ಯಾಂಕರ್‌ ಮೂಲಕವಾದರೂ ಜನರಿಗೆ ಕುಡಿಯುವ ನೀರು ಕೊಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಬೇಕೆಂದು ಗ್ರಾಮಸ್ಥ ರಾಜಶೇಖರ ಬಸ್ಥೆ ಹಿರೋಳಿ ಒತ್ತಾಯಿಸಿದ್ದಾರೆ.

ಹಲವೆಡೆ ನೀರಿನ ಸಮಸ್ಯೆ: ಹಿರೋಳಿ ಸೇರಿದಂತೆ ಹಲವೆಡೆ ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ವರದಿಗಳು ಕೇಳಿ ಬರುತ್ತಿವೆ. ಆದರೆ ತಾಲೂಕಾಡಳಿತ ಈ ಕುರಿತು ಕ್ರಮ ಕೈಗೊಂಡತ್ತಿಲ್ಲ. ಅಲ್ಲಲ್ಲಿ ನೀರಿಗಾಗಿ ಸ್ಥಳೀಯ ಮಟ್ಟದ ಕಾರ್ಯಾಚರಣೆ ನಡೆದರೂ ಪರಿಸ್ಥಿತಿ ಕೈ ಮೀರಿ ಸಮರ್ಪಕ ನೀರು ದೊರೆಯದೆ ಇರುವುದು ಹಳ್ಳಿಗರಿಗೆ ನುಂಗದ ತುತ್ತಾಗಿ ಪರಿಣಮಿಸಿದೆ. ಶಾಸಕರು ಮತ್ತು ಜಿಲ್ಲಾಡಳಿತ, ತಾಲೂಕಾಡಳಿತ ತುರ್ತು ಕ್ರಮ ಕೈಗೊಳ್ಳಬೇಕಿದೆ.

ನೂರು ಕೊಳವೆ ಬಾವಿಯಲ್ಲೂ ನೀರಿಲ್ಲ
ಹಿರೋಳಿ ಗ್ರಾಮದಲ್ಲಿ ಸುಮಾರು ನೂರು ಕೊಳವೆ ಬಾವಿಗಳನ್ನು ತೋಡಲಾಗಿದ್ದರೂ ಯಾವ ಬಾವಿಯಲ್ಲೂ ಸಮರ್ಪಕವಾಗಿ
ನೀರು ದೊರೆಯುತ್ತಿಲ್ಲ. ಕೆಲವೊಂದು ಸಂಪೂರ್ಣ ಬತ್ತಿ ಹೋಗಿದ್ದರೆ, ಕೆಲವೊಂದಿಷ್ಟು ಎರಡ್ಮೂರು ಮನೆಗಾಗುವಷ್ಟೇ ನೀರು ದೊರೆಯುತ್ತಿದೆ. ಸರ್ಕಾರ ಟ್ಯಾಂಕರ್‌ನಿಂದಾದರೂ ನೀರೊದಗಿಸಬೇಕೆಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ದೇಗುಲದ ಬಾವಿಗೆ ನೂಕುನುಗ್ಗಲು
ಗ್ರಾಮದಲ್ಲಿನ ಬಡಾವಣೆ ಅಂಬಾಬಾಯಿ ದೇವಸ್ಥಾನದಲ್ಲಿ ಕೊಳವೆ ಬಾವಿಯ ಪಂಪ್‌ ಸೆಟ್‌ನಿಂದ ನೆರೆ ಹೊರೆಯವರಿಗೆ ನೀರು
ಕೊಡಲಾಗುತ್ತಿದೆ. ಇಲ್ಲಿಯೂ ನೀರಿಗಾಗಿ ನಾ ಮುಂದೆ ನೀ ಮುಂದು ಎಂದು ಜನರ ನೂಕುನುಗ್ಗಲು ಉಂಟಾಗುತ್ತಿದೆ. ಅಲ್ಲದೆ
ಮತ್ತೂಂದೆಡೆ ಹಿರೋಳಿ ಗ್ರಾಮದ ಗೇಟ್‌ ಬಳಿಯಿರುವ ನೇಕಾರ ಕಾಲೋನಿಯಲ್ಲಿರುವ  ರೈತ ನಿಂಗಪ್ಪ ಉಡಗಿ ಅವರು ತಮ್ಮ
ಹೊಲದಲ್ಲಿನ ಪೇರಲ ಗಿಡಕ್ಕೆ ನೀರು ಕಡಿತ ಮಾಡಿ, ಜನರಿಗೆ ನೀರು ಕೊಡುತ್ತಿದ್ದಾರೆಂದು ಗ್ರಾಮದ ರಾಜಶೇಖರ ಬಸ್ಥೆ ತಿಳಿಸಿದ್ದಾರೆ.

*ಮಹಾದೇವ ವಡಗಾಂವ

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.