ಕ್ವಾರಂಟೈನ್‌ ಕೇಂದ್ರಗಳಲ್ಲಿ ಅವ್ಯವಸ್ಥೆ ಆಗರ

ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿದರೆ ಜೈಲು ತೀರ್ಥ ತಾಂಡಾ-ಗ್ರಾಮದಲ್ಲಿ ಸ್ವಯಂ ಕ್ವಾರಂಟೈನ್‌

Team Udayavani, May 25, 2020, 10:51 AM IST

25-May-2

ಸಾಂದರ್ಭಿಕ ಚಿತ್ರ

ಆಳಂದ: ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸದಿಂದ ಏಳು ಜನರು ಅಸುನೀಗಿದ್ದು, 141 ಜನ ಸೋಂಕಿತರಿದ್ದಾರೆ. ತಬ್ಲೀಘಿ ಹಾಗೂ ಮುಂಬೈ ವಲಸಿಗರ ಮೂಲಕ ಸೋಂಕು ಎಲ್ಲೆಡೆ ಹಬ್ಬಿ ಗಂಡಾಂತರ ತಂದೊಡ್ಡಿದೆ. ವಲಸಿಗರು ಕ್ವಾರಂಟೈನ್‌ದಲ್ಲಿದ್ದಾರೆ. ಆದರೆ ಕ್ವಾರಂಟೈನ್‌ ಕೇಂದ್ರಗಳೇ ಅವ್ಯವಸ್ಥೆ ಆಗರವಾಗಿವೆ. ಮೂಲಭೂತ ಸೌಲಭ್ಯಗಳಿಲ್ಲದೇ ಕ್ವಾರಂಟೈನ್‌ ಕೇಂದ್ರಗಳೇ ಅನಾರೋಗ್ಯಕ್ಕೆ ಒಳಗಾಗಿರುವಾಗ ಅಲ್ಲಿನ ವಲಸಿಗರ ಪಾಡು ಹೇಳತೀರದಂತಾಗಿದೆ.

ಹಡಲಗಿ ಗ್ರಾಮದಲ್ಲಿ ಕ್ವಾರಂಟೈನ್‌ ಮಾಡಿರುವ ಜನರಿಗೆ ಸೂಕ್ತ ವ್ಯವಸ್ಥೆ ಮಾಡಿಲ್ಲ. ಕೆಲವರನ್ನು ಊರಲ್ಲಿ ಬಿಡಲಾಗಿದೆ ಎಂದು ಕರವೇ ತಾಲೂಕು ಅಧ್ಯಕ್ಷ ಮಹಾಂತೇಶ ಸಣ್ಣಮನಿ ಆರೋಪಿಸಿದ್ದಾರೆ. ತೀರ್ಥ ತಾಂಡಾ ಮತ್ತು ಗ್ರಾಮದಲ್ಲಿ ಸ್ಥಳೀಯರು ವಿರೋಧಿಸಿದ್ದಕ್ಕೆ 200 ಜನರು ತಮ್ಮ ಹೊಲಗಳಲ್ಲಿ ಸ್ವಯಂ ಕ್ವಾರಂಟೈನ್‌ ಮಾಡಿಕೊಂಡಿದ್ದಾರೆ. ಇವರಿಗೆ ಸೌಲಭ್ಯ ನೀಡುವಂತೆ ಒತ್ತಾಯಿಸಿದಾಗ ಆರು ದಿನಗಳ ಬಳಿಕ ದಿನಸಿ ಕಿಟ್‌ ನೀಡಲಾಗಿದೆ. ಮದಗುಣಕಿ, ಯಳಸಂಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸದಲ್ಲಿ ತೊಡಗಿದ ಕಾರ್ಮಿಕರಿಗೆ ಪ್ರಾಥಮಿಕ ಸುರಕ್ಷಾ ಕ್ರಮಗಳನ್ನು ನೀಡಿಲ್ಲ. ಅಂತರ ಕಾಪಾಡಿಕೊಂಡಿಲ್ಲ. ಕಾರ್ಮಿಕರು ಮುಂಜಾಗ್ರತೆ ಅರಿವಿಲ್ಲದೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಸಣ್ಣಮನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಲಸೆ ಬಂದವರನ್ನು ನಿಂಗದಳ್ಳಿ ಮತ್ತು ಮದಗುಣಕಿ ಗ್ರಾಮದಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಇವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ಜನರು ಮುಂಜಾಗ್ರತೆ ವಹಿಸುತ್ತಿಲ್ಲ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅವೈಜ್ಞಾನಿಕ ಕ್ವಾರಂಟೈನ್‌: ಗ್ರಾಮಗಳ ಶಾಲೆಗಳಲ್ಲಿ ಕ್ವಾರಂಟೈನ್‌ ಕೈಗೊಳ್ಳುವ ಬದಲು ಆಳಂದ ಪಟ್ಟಣ ಅಥವಾ ಹೋಬಳಿ ಮಟ್ಟದಲ್ಲಿ ದೊಡ್ಡ ಕಟ್ಟಡ, ಮೂಲಸೌಲಭ್ಯ ಇರುವ ಸ್ಥಳಗಳಲ್ಲಿ ಕೈಗೊಳ್ಳಬೇಕಿತ್ತು. ಆಯಾ ಗ್ರಾಮಗಳ ಶಾಲೆಗಳಲ್ಲಿ ಕ್ವಾರಂಟೈನ್‌ ಮಾಡಿದ್ದರಿಂದ ಊಟ, ವಸತಿ ನೀರು ಮೂಲ ಸೌಲಭ್ಯ ಒದಗಿಸುವ ಜವಾಬ್ದಾರಿ ಹೊತ್ತಿರುವ ಗ್ರಾ.ಪಂಗಳು ಸೂಕ್ತ ಕ್ರಮ ಕೈಗೊಳ್ಳಲು ಆಗದ ಕಾರಣ ಸ್ಥಳೀಯ ಸಿಬ್ಬಂದಿ ಪರದಾಡುವಂತೆ ಆಗಿದೆ. ಯಾದಗಿರಿ ಜಿಲ್ಲೆ ಮಾದರಿಯಂತೆ ಇಲ್ಲೂ ಒಂದೇ ಕಡೆ ಕ್ವಾರಂಟೈನ್‌ ಕೇಂದ್ರ ಸ್ಥಾಪಿಸಿದ್ದರೆ ಆಯಾ ಗ್ರಾ.ಪಂ ಸಿಬ್ಬಂದಿ ನಿಯೋಜಿಸಿ ತಮ್ಮ ವ್ಯಾಪ್ತಿಯ ಸಂಬಂ ಧಿತರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲು ಅನುಕೂಲವಾಗುತ್ತಿತ್ತು.

ಅನುಚಿತ ವರ್ತನೆಗೆ ಶಿಕ್ಷೆ: ಕ್ವಾರಂಟೈನ್‌ಗೆ ದಾಖಲಾದವರಿಂದ 12 ದಿನಗಳ ಬಳಿಕ ವೈದ್ಯ ಸಿಬ್ಬಂದಿಗಳಿಂದ ಗಂಟಲು ದ್ರವ ಪಡೆದು ಪರೀಕ್ಷೆಗೆ ಕಳುಹಿಸಿ ಕೊಡಲಾಗುವುದು. ಸಕಾರಾತ್ಮಕ ವರದಿ ಬಂದರೆ 15 ದಿನಗಳ ಬಳಿಕ ಮನೆಗೆ ಕಳುಹಿಸಲಾಗುವುದು. ಕೋವಿಡ್‌-19 ಶಂಕೆ ವ್ಯಕ್ತವಾದರೆ ಜಿಲ್ಲಾ ಕೋವಿಡ್‌-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು. ಕ್ವಾರಂಟೈನ್‌ ದಲ್ಲಿ ಇದ್ದವರು ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದರೆ, ಬೇಕಾಬಿಟ್ಟಿ ಹೊರಗೆ ಓಡಾಡಿದರೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಹಶೀಲ್ದಾರ್‌ ದಯಾನಂದ ಪಾಟೀಲ ಎಚ್ಚರಿಸಿದ್ದಾರೆ.

ಸಮಸ್ಯೆಗಳಿದ್ದರೆ ನಾಗರಿಕರು ಸಹಾಯವಾಣಿ ಸಂಖ್ಯೆ 08477-202428ಕ್ಕೆ ಕರೆ ಮಾಡಿ ತಿಳಿಸಬೇಕು. ಆಯಾ ಗ್ರಾಮದ ಶಾಲೆಗಳಲ್ಲಿ ಕ್ವಾರಂಟೈನ್‌ ಮಾಡಿ ಸೌಕರ್ಯ ಒದಗಿಸಲಾಗುತ್ತಿದೆ. ಗ್ರಾಮೀಣ ಕ್ವಾರಂಟೈನ್‌ ಕೇಂದ್ರಗಳನ್ನು ಬಿಟ್ಟು ದೊಡ್ಡ ಮಟ್ಟದಲ್ಲಿ ಕಿತ್ತೂರುರಾಣಿ ಚನ್ನಮ್ಮ ವಸತಿ, ಆದರ್ಶ ಮತ್ತು ಕಸ್ತೂರಬಾ ಶಾಲೆಗಳಲ್ಲಿ ಕ್ವಾರಂಟೈನ್‌ ಸ್ಥಾಪಿಸಲು ವ್ಯವಸ್ಥೆ ಇದೆ. 141 ಕ್ವಾರಂಟೈನ್‌ಗಳಲ್ಲಿ 5862 ಜನರು ದಾಖಲಾಗಿದ್ದಾರೆ. ಆಯಾ ಸಂಬಂಧಿ ತ ಗ್ರಾ.ಪಂ ಅಭಿವೃದ್ಧಿ ಅಧಿ ಕಾರಿಗಳು ಊಟ, ವ್ಯವಸ್ಥೆ ನೋಡಿಕೊಳ್ಳುತ್ತಿದ್ದು, ಅಡುಗೆ ಸಹಾಯಕರ ಮೂಲಕ ಅಡುಗೆ ಮಾಡಿ ನೀಡಲಾಗುತ್ತಿದೆ. ವಾರದಲ್ಲಿ ಎರಡು ಬಾರಿ ಬಾಳೆ ಹಣ್ಣು, ಮೊಟ್ಟೆ, ಮಕ್ಕಳಿಗೆ ಹಾಲು, ಬಿಸ್ಕಿಟ್‌ ನೀಡಲಾಗುತ್ತಿದೆ. ಮನೋರಂಜನೆಗಾಗಿ ಟಿವಿ, ಕೇರಂಬೋರ್ಡ್‌ ನೀಡಲಾಗಿದೆ.
ದಯಾನಂದ ಪಾಟೀಲ,
ತಹಶೀಲ್ದಾರ್‌

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.