ಸ್ನೇಹಾ ಸೊಸೈಟಿಯಲ್ಲಿ ಅವ್ಯವಹಾರ ಆರೋಪ


Team Udayavani, Dec 18, 2021, 10:54 AM IST

2work

ಕಲಬುರಗಿ: ತೃತೀಯ ಲಿಂಗಿಗಳ ಶ್ರೇಯೋಭಿವೃದ್ಧಿಯಾಗಿ ಸ್ಥಾಪಿತವಾಗಿರುವ ಸ್ನೇಹಾ ಸೊಸೈಟಿಯಲ್ಲಿ ಅವ್ಯವಹಾರ ನಡೆದಿದ್ದು, ಇದರ ಲೆಕ್ಕಪತ್ರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಮಂಗಳಮುಖೀಯರ ಗುರುಗಳಾದ ಸಂತೋಷಿಯಮ್ಮ ಹಾಗೂ ಪಿಂಕಿಯಮ್ಮ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೊಸೈಟಿ ಅಧ್ಯಕ್ಷೆಯಾಗಿರುವ ಮುಸ್ಕಾನ್‌, ಕಾರ್ಯದರ್ಶಿ ಅಂಬಿಕಾ ಅನಕ್ಷರಸ್ಥರಾಗಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಸೊಸೈಟಿಯ ಪ್ರೋಗ್ರಾಮ ಮ್ಯಾನೇಜರ್‌ ಮೌನೇಶ ಕೋರವಾರ, ಪ್ರೊಜೆಕ್ಟ್ ಡೈರೆಕ್ಟರ್‌ ಮನಿಷಾ ಚವ್ಹಾಣ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.

ಕೊರೊನಾ ಮತ್ತು ಲಾಕ್‌ಡೌನ್‌ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳು ಸುಮಾರು ಒಂಭತ್ತು ಸಾವಿರ ಕಿಟ್‌ ಗಳನ್ನು ಕಲ್ಪಿಸಿವೆ. ಆದರೆ, ಈ ಕಿಟ್‌ಗಳನ್ನು ಯಾರಿಗೆ ಹಂಚಿಕೆ ಮಾಡಲಾಗಿದೆ ಎಂದು ಪ್ರಶ್ನಿಸಿದರು.

ಸೊಸೈಟಿಗೆ ಬಿಡುಗಡೆಯಾದ ಹಣ ಮತ್ತು ಕಿಟ್‌ಗಳ ಬಗ್ಗೆ ಪ್ರಶ್ನೆ ಮಾಡಿದ ಮಂಗಳಮುಖೀಯರ ಮೇಲೆ ಮೌನೇಶ ಕೋರವಾರ, ಮನಿಷಾ ಚವ್ಹಾಣ ಹಲ್ಲೆ ಮಾಡಿದ್ದಾರೆ. ಲೆಕ್ಕ ಕೊಡುತ್ತೇವೆ ಬನ್ನಿ ಎಂದು ಪೂಣಾದಿಂದ ಕರೆಸಿಕೊಂಡು ತಮ್ಮ ತಲೆಗೆ ಕಲ್ಲಿನಿಂದ ತಾವೇ ಹೊಡೆದುಕೊಂಡು ನಮ್ಮ ಮೇಲೆ ಕೇಸ್‌ ದಾಖಲಿಸಿದ್ದಾರೆ ಎಂದು ಅಳಲು ತೋಡಿಕೊಂಡರು.

ದಲಿತ ಸೇನೆ ಅಧ್ಯಕ್ಷ, ವಕೀಲ ಹಣಮಂತ ಯಳಸಂಗಿ ಮಾತನಾಡಿ, ಸ್ನೇಹಾ ಸೊಸೈಟಿ 2010ರಲ್ಲಿ ಸ್ಥಾಪನೆಯಾಗಿದೆ. 2,300ಕ್ಕೂ ಹೆಚ್ಚು ಮಂಗಳಮುಖೀಯರು ಇದರಲ್ಲಿ ಸದಸ್ಯರಿದ್ದಾರೆ. ಆದರೆ, ಇವರಿಗಾಗಿ ಹಣ ಖರ್ಚು ಮಾಡದೇ ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ಮಾಡಬೇಕೆಂದು ಹೇಳಿದರು.

ಡಿಸಿ ಕಚೇರಿ ಎದುರು ಪ್ರತಿಭಟನೆ

ಮಂಗಳಮುಖೀಯರು ಎಂದರೆ ಸಮಾಜದಿಂದ ದೂರ ಇರುವ ಸಮುದಾಯ. ಆದರೆ, ಅದೇ ಸಮುದಾಯದ ಎಂಟು ಜನರ ಮೇಲೆ ಮನಿಷಾ ಚವ್ಹಾಣ ಮತ್ತು ಮೌನೇಶ ಕೂಡಿಕೊಂಡು ಅಟ್ರಾಸಿಟಿ ಕೇಸ್‌ ದಾಖಲಿಸಿದ್ದಾರೆ. ತಕ್ಷಣವೇ ಈ ಕೇಸ್‌ ವಾಪಸ್‌ ಪಡೆಯಬೇಕು. ಮಂಗಳವಾರದೊಳಗೆ ಸ್ನೇಹಾ ಸೊಸೈಟಿ ಹಣದ ಬಗ್ಗೆ ತನಿಖೆ ನಡೆಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳಮುಖೀಯರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ದಲಿತ ಸೇನೆ ಅಧ್ಯಕ್ಷ ಹಣಮಂತ ಯಳಸಂಗಿ ಎಚ್ಚರಿಸಿದ್ದಾರೆ.

ಸೊಸೈಟಿ ಅಧ್ಯಕ್ಷೆ ಮುಸ್ಕಾನ್‌, ಕಾರ್ಯದರ್ಶಿ ಅಂಬಿಕಾ, ಮಂಗಳಮುಖೀಯರಾದ ಭೀಮಾ, ಶೀಲಾ ಇನ್ನಿತರರು ಇದ್ದರು.

ಮನಿಷಾ ಚವ್ಹಾಣ ಬೇರೆ ಮಂಗಳಮುಖೀಯರಿಗೆ ಭಿಕ್ಷೆ ಬೇಡುವುದು ಬೇಡ ಎನ್ನುತ್ತಿದ್ದಳು. ಭಿಕ್ಷೆ ಬೇಡದೆ ಮಂಗಳಮುಖೀಯರು ಜೀವನ ಸಾಗಿಸುವುದು ಹೇಗೆ? ಆದರೆ, ಇದೇ ಮನಿಷಾ ಚವ್ಹಾಣ ಐಷಾರಾಮಿ ಜೀವನ ನಡೆಸುತ್ತಿದ್ದು, ಇದಕ್ಕೆ ಹಣ ಎಲ್ಲಿಂದ ಬರುತ್ತಿದೆ? -ಸಂತೋಷಿಯಮ್ಮ, ಮಂಗಳಮುಖೀಯರ ಗುರು

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.