ಪೊಲೀಸ್ ದೌರ್ಜನ್ಯ ಆರೋಪ; ಪ್ರತಿಭಟನೆ
Team Udayavani, Dec 27, 2021, 1:13 PM IST
ಚಿಂಚೋಳಿ: ತಾಲೂಕಿಗೆ ಶವ ಸಂಸ್ಕಾರಕ್ಕೆ ಹೊರಟಿದ್ದ ಜೀಪು ನಿಲ್ಲಿಸಿ ದಂಡ ವಿಧಿಸಿದ ಸುಲೇಪೇಟ ಪೊಲೀಸರಿಗೆ ಹಣ ನೀಡಿ ರಸೀದಿ ಪಡೆದು ಬರುವಾಗ ಕಾನ್ಸ್ಟೇಬಲ್ವೊಬ್ಬರು ಜೀಪು ಚಾಲಕನಿಗೆ ಲಾಠಿಯಿಂದ ಥಳಿಸಿರುವುದನ್ನು ಖಂಡಿಸಿ ಪಸ್ತಪುರ ಗ್ರಾಮಸ್ಥರು ದಸ್ತಾಪುರ ಗ್ರಾಮದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ತಾಲೂಕಿನ ಪಸ್ತಪುರ ಗ್ರಾಮಸ್ಥರು ಪಟ್ಟಣದಲ್ಲಿ ಶವ ಸಂಸ್ಕಾರದಲ್ಲಿ ಭಾಗವಹಿಸಲು ಜೀಪಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ದಸ್ತಾಪುರ ಗ್ರಾಮದ ಹತ್ತಿರ ಪೊಲೀಸರು ಜೀಪು ನಿಲ್ಲಿಸಿ ದಂಡ ವಸೂಲಿ ಮಾಡಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಚಾಲಕನ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಆಗ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಲಾಠಿಯಿಂದ ಥಳಿಸಿದ್ದಾರೆ ಎಂದು ದೂರಿದ ಗ್ರಾಮಸ್ಥರು ಚಿಂಚೋಳಿ ಕಲಬುರಗಿ ರಾಜ್ಯ ಹೆದ್ದಾರಿ ಮೇಲೆ ರಸ್ತೆ ತಡೆ ನಡೆಸಿ, ಎರಡು ತಾಸು ವಾಹನ ಸಂಚಾರ ಸ್ಥಗಿತಗೊಳಿಸಿದ್ದರು.
ಸಿಪಿಐ ಜಗದೀಶ ಜಿ.ಕೆ, ಪಿಎಸ್ಐ ಸುಖಾನಂದಸಿಂಗ್ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿ ಪೊಲೀಸ್ ಕಾನ್ ಸ್ಟೇಬಲ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ಜೆಡಿಎಸ್ ಮುಖಂಡ ಸಂಜೀವನ್ ಯಾಕಾಪುರ, ಬಸವರಾಜ ಬಾಲಿ, ಜಗನ್ನಾಥ ಧುತ್ತರಗಿ, ಸನ್ನಿ ಜಾಬಶೆಟ್ಟಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ