ಕಾನೂನು ಬಲವರ್ಧನೆಗೆ ಟಾನಿಕ್‌ ನೀಡುವರೇ ಅಲೋಕಕುಮಾರ?


Team Udayavani, Jul 18, 2022, 9:48 AM IST

1ALOK-kumar

ಕಲಬುರಗಿ: ಜಿಲ್ಲೆಯ ಎಸ್ಪಿ ಹಾಗೂ ಈ ಭಾಗದ ಐಜಿಪಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದ ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಲೋಕಕುಮಾರ ಎರಡು ದಿನಗಳ ಭೇಟಿಗಾಗಿ ಸೋಮವಾರ ನಗರಕ್ಕೆ ಆಗಮಿಸುತ್ತಿದ್ದಾರೆ.

ಎಡಿಜಿಪಿಯಾದ ನಂತರ ರಾಜ್ಯದ ಎಲ್ಲ ವಿಭಾಗೀಯ ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೋಕಕುಮಾರ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ನಿಟ್ಟಿನಲ್ಲಿ ಮಹತ್ವದ ಸಭೆಗಳನ್ನು ನಡೆಸುತ್ತಿರುವುದರ ಜತೆಗೆ ಕಠಿಣ ಸೂಚನೆಗಳನ್ನು ನೀಡುತ್ತಿರುವುದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಪಂದಿಸುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಕಲಬುರಗಿ ಎಸ್ಪಿಯಾಗಿದ್ದಾಗ ರೌಡಿಗಳ ಹೆಡೆ ಮುರಿದಿದ್ದ ಅವರು ಹಲವು ರೌಡಿಗಳು ಕಲಬುರಗಿ ಬಿಡುವಂತೆ ಮಾಡಿದ್ದರು. ಜಿಲ್ಲೆಯ ದೊಡ್ಡ ರೌಡಿಯಿಂದ ಹಿಡಿದು ಪುಡಿ ರೌಡಿಗಳನ್ನು ಹೆಸರು-ಅಪರಾಧ ಸಮೇತ ಮಾಹಿತಿ ಹೊಂದಿದ್ದ ಅಲೋಕಕುಮಾರ ಅವರು ಅಪರಾಧ ಪ್ರಕರಣಗಳನ್ನು ಸಂಪೂರ್ಣ ಹತ್ತಿಕ್ಕಿದ್ದರು. ಪ್ರಮುಖವಾಗಿ ಆಟದ ಗೊಂಬೆಗಳಾಗಿದ್ದ ನಾಡಪಿಸ್ತೂಲು ಮಾರಾಟ ಜಾಲ ಪತ್ತೆ ಹಚ್ಚಿ, ಆ ತಂಡವನ್ನು ಬುಡಸಮೇತ ಕಿತ್ತು ಹಾಕಿದ್ದರು. ನಾಡಪಿಸ್ತೂಲು ಮಾರಾಟ ಜಾಲಕ್ಕೆ ಬ್ರೇಕ್‌ ಹಾಕಿದ್ದರು. ತದನಂತರ ಐಜಿಪಿಯಾಗಿದ್ದಾಗಲೂ ಕರಿಚಿರತೆ ಅಲಿಯಾಸ್‌ ಶಿವಾನಂದ ಬಡಿಗೇರ ಸೇರಿದಂತೆ ಇತರೆ ಖತರ್ನಾಕ್‌ ರೌಡಿಗಳನ್ನು ಎನ್‌ಕೌಂಟರ್‌ ಮೂಲಕ ಹತ್ತಿಕ್ಕಿದ್ದಲ್ಲದೇ ಮಾರ್ಕೆಟ್‌ ಸತೀಶ ಸೇರಿ ಇತರೆ ವಿರುದ್ಧ ಕೋಕಾ ಕಾಯ್ದೆ ಜಾರಿಗೆ ತಂದಿದ್ದರು. ಈಗ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಅಲೋಕಕುಮಾರ ಕಲಬುರಗಿಗೆ ಆಗಮಿಸುತ್ತಿದ್ದು, ಕಲಬುರಗಿಯಲ್ಲಿ ಅದರಲ್ಲೂ ಮಹಾನಗರದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಗೆ ಯಾವ ನಿಟ್ಟಿನಲ್ಲಿ ಕ್ರಮಕ್ಕೆ ಸೂಚಿಸುತ್ತಾರೆಂಬುದನ್ನು ಜನ ಕಾತರದಿಂದ ಕಾಯುತ್ತಿದ್ದಾರೆ. ಯಾವ ಟಾನಿಕ್‌ ನೀಡುತ್ತಾರೆ ಎಂಬುದು ಕುತೂಹಲ ಮೂಡಿದೆ.

ಇದನ್ನೂ ಓದಿ: ನಾಲ್ಕು ತಿಂಗಳ ಮಗುವನ್ನು ಮನೆ ಛಾವಣಿಯಿಂದ ಕೆಳಕ್ಕೆಸೆದ ಕೋತಿ!

ಇಂದು ಅಹವಾಲು ಸ್ವೀಕಾರ

ಜುಲೈ 18ರಂದು ಸಂಜೆ 4ಕ್ಕೆ ಕಲಬುರಗಿ ಮಹನಾಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಎಡಿಜಿಪಿ ಅಲೋಕಕುಮಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ಪೊಲೀಸ್‌ ಇಲಾಖೆಗೆ ಸಂಬಂಧಿಸಿದಂತೆ ದೂರು ಸಲ್ಲಿಸಬಹುದಾಗಿದೆ.

ಅಪರಾಧ ಪ್ರಕರಣಗಳು ಹೆಚ್ಚಳ

ಕಲಬುರಗಿ ಮಹಾನಗರ ಪೊಲೀಸ್‌ ಆಯುಕ್ತಾಲಯ ಆದ ನಂತರ ಅಪರಾಧ ಪ್ರಕರಣಗಳು ಕಡಿಮೆ ಆಗಬೇಕು. ಆದರೆ ಉಲ್ಟಾ ಜಾಸ್ತಿಯಾಗಿರುವುದನ್ನು ಅಂಕಿ-ಅಂಶಗಳೇ ನಿರೂಪಿಸುತ್ತಿವೆ. ಕೊಲೆಗಳಂತೂ ರಾಜಾರೋಷವಾಗಿ ನಡೆಯುತ್ತಿವೆ. ಯುವಕರಂತೂ ಯಾರ ಭಯವಿಲ್ಲದೇ ನಿರ್ಭಯವಾಗಿ ಅಪರಾಧ ಪ್ರಕರಣಗಳಲ್ಲಿ ಆಸಕ್ತಿ ತೋರುತ್ತಿರುವುದು ಭಯ ಮೂಡಿಸುತ್ತಿದೆ. ಯುವಕರ ತ್ರಿಬಲ್‌ ರೈಡ್‌ ಸಾಮಾನ್ಯ ಎನ್ನುವಂತಾಗಿದೆ. ಇದೇ ಕಾರಣಕ್ಕೆ ಅಪಘಾತಗಳು ನಿಯಂತ್ರಣ ಇಲ್ಲ ಎನ್ನುವಂತೆ ನಡೆಯುತ್ತಿವೆ. ಒಟ್ಟಾರೆ ಅಪರಾಧಿಗಳಿಗೆ ಪೊಲೀಸರ ಭಯಯೇ ಇಲ್ಲ ಎನ್ನುವಂತಾಗಿದೆ.

ಕಳೆದ ಆರು ತಿಂಗಳ ಅವಧಿಯಲ್ಲಿ ಕಲಬುರಗಿ ಮಹಾನಗರದಲ್ಲಿ 18 ಕೊಲೆಗಳಾಗಿವೆ. ಕಳೆದ ವರ್ಷ 38 ಹಾಗೂ ಅದರ ಹಿಂದಿನ ವರ್ಷ 27 ಕೊಲೆಗಳಾಗಿದ್ದವು. ಅದೇ ರೀತಿ ಪ್ರಸ್ತುತ ಆರು ತಿಂಗಳ ಅವಧಿಯಲ್ಲಿ 45 ಮನೆ ಹಾಗೂ ದರೋಡೆ ಪ್ರಕರಣಗಳು ನಡೆದಿದ್ದರೆ ಕಳೆದ ವರ್ಷ 86, ಅದರ ಹಿಂದಿನ ವರ್ಷ 68 ಪ್ರಕರಣಗಳು ನಡೆದಿದ್ದವು. ಇದು ಪೊಲೀಸ್‌ ಆಯುಕ್ತಾಲಯವಾಗಿದ್ದರೂ ಅಪರಾಧ ಸಂಖ್ಯೆಗಳು ಕಡಿಮೆಯಾಗದೇ ಹೆಚ್ಚಳವಾಗಿರುವುದು ನಿರೂಪಿಸುತ್ತದೆ.

ಕಳೆದೆರಡು ವರ್ಷಗಳಿಂದ ರೌಡಿಗಳಿಗೆ ಭಯ ಹುಟ್ಟಿಸುವ ನಿಟ್ಟಿನಲ್ಲಿ ಯಾವುದೇ ಕಾರ್ಯಾಚರಣೆ ನಡೆದಿರುವುದನ್ನು ಕಾಣಬಹುದಾಗಿದೆ. ರೌಡಿ ಪರೇಡ್‌ ನಡೆಸಿ ಎಚ್ಚರಿಕೆ ನೀಡುವುದಕ್ಕೆ ಮಾತ್ರ ಸಿಮೀತ ಎನ್ನುವಂತಾಗಿದೆ.

ಗಾಣಗಾಪುರ ನಕಲಿ ವೆಬ್ಸೈಟ್

ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅರ್ಚಕರು ನಕಲಿ ವೆಬ್‌ಸೈಟ್‌ ತೆರೆದು ಸರ್ಕಾರಕ್ಕೆ ಬೊಕ್ಕಸಕ್ಕೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ ಐಆರ್‌ ದಾಖಲಾಗಿದೆ. ಆದರೆ ತನಿಖೆಗೆ ಸಂಬಂಧಿಸಿದಂತೆ ಸರಿಯಾದ ನಿಟ್ಟಿನಲ್ಲಿ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಸರಿಯಾದ ದಾಖಲೆಗಳನ್ನು ತನಿಖಾಧಿಕಾರಿ ನಿರ್ವಹಿಸುತ್ತಿಲ್ಲ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಎಡಿಜಿಪಿಯವರು ನಿಗಾ ವಹಿಸುವುದು ಅಗತ್ಯವಾಗಿದೆ.

ಎಸ್ಪಿ ಹಾಗೂ ಐಜಿಯಾಗಿದ್ದಾಗ ನೇರವಾಗಿ ಕೆಲಸ ಮಾಡಬಹುದಾಗಿದೆ. ಆದರೆ ಈ ಎಡಿಜಿಪಿಯಾಗಿ ಕೆಲಸ ಮಾಡಿಸಬೇಕಿದೆ. ಕಲಬುರಗಿ ಜಿಲ್ಲೆ ಹಾಗೂ ಮಹಾನಗರ ಕಾನೂನು ಸುವ್ಯವಸ್ಥೆ ಕುರಿತಾಗಿ ಸುದೀರ್ಘ‌ ಸಭೆ ನಡೆಸಿ ಸಮಾಲೋಚಿಸಲಾಗುವುದು.ಅಲೋಕಕುಮಾರ, ಎಡಿಜಿಪಿ

-ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.