ದಲಿತ ಮುಖಂಡನ ಮೇಲೆ ಹಲ್ಲೆ-ಮನವಿ
Team Udayavani, May 6, 2022, 1:23 PM IST
ಯಡ್ರಾಮಿ: ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಶ್ರೀ ಗ್ರಾಮದೇವತೆ ಜಾತ್ರಾ ಉತ್ಸವದಲ್ಲಿ ಸ್ಥಳೀಯ ದಲಿತ ಮುಖಂಡನ ಮೇಲೆ ಕೆಲ ಪೊಲೀಸ್ ಸಿಬ್ಬಂದಿ ನಡೆಸಿದ ಹಲ್ಲೆ ಖಂಡಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ಪಿಎಸ್ಐ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅಮರನಾಥ ಕುಳಗೇರಿ ಮಾತನಾಡಿ, ಶ್ರೀ ಗ್ರಾಮದೇವತೆ ಜಾತ್ರೆಯಲ್ಲಿ ಪಟ್ಟಣದ ದಲಿತ ಮುಖಂಡ ಶ್ರೀಶೈಲ ದೊರಿ ಎಲ್ಲರಂತೆ ಜಾತ್ರೆಯಲ್ಲಿ ಭಾಗಿಯಾಗಿದ್ದ. ಜನರ ಗದ್ದಲದಲ್ಲಿ ಆತನ ಕಾಲು ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಆಕಸ್ಮಿಕವಾಗಿ ತಾಕಿದ್ದನ್ನೇ ನೆಪ ಮಾಡಿಕೊಂಡು, ಪೊಲೀಸ್ ಸಿಬ್ಬಂದಿ ಠಾಣೆಗೆ ಎಳೆದು ತಂದು ಮಾರಣಾಂತಿಕ ಹಲ್ಲೆ ಮಾಡಿದ್ದು ಖಂಡನೀಯವಾಗಿದೆ ಎಂದರು.
ಕೂಡಲೇ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.
ಶ್ರವಣಕುಮಾರ ಡಿ. ನಾಯಕ, ಚಂದ್ರು ಮಲ್ಲಾಬಾದ, ದೊಡೇಶ ಕಾಚಾಪೂರ, ನದೀಮ, ಮರೆಪ್ಪ ನಾಯಕ, ತಾಯಪ್ಪ ನಾಯಕ, ಮರೆಪ್ಪ ಪ್ಯಾಟಿ, ಲಾಳೇಸಾಬ ಮನಿಯಾರ, ಅಮರ ಕುಸ್ತಿ, ವಿವಿಧ ಸಂಘಟನೆಗಳ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್