ಸನ್ನತಿ ಬೌದ್ದ ತಾಣ ಅಭಿವೃದ್ದಿಗೆ ಮನವಿ


Team Udayavani, Dec 17, 2021, 3:10 PM IST

14sannati

ವಾಡಿ: ಸಮೀಪದ ಸನ್ನತಿ ಭೀಮಾನದಿ ದಂಡೆಯ ಕನಗನಹಳ್ಳಿ ಪ್ರದೇಶದಲ್ಲಿ ದೊರೆತಿರುವ 3ನೇ ಶತಮಾನಕ್ಕೆ ಸೇರಿದ ಮೌರ್ಯ ಸಾಮ್ರಾಜ್ಯದ ದೊರೆ ಸಾಮ್ರಾಟ್‌ ಅಶೋಕನ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಬೌದ್ಧ ಸ್ತೂಪ ತಾಣ ಅಭಿವೃದ್ಧಿಗೆ ಕೇಂದ್ರ ಪ್ರಾಚ್ಯವಸ್ತು ಇಲಾಖೆ ನಿರ್ಲಕ್ಷ್ಯ ವಹಿಸಿದ್ದು, ಕೂಡಲೇ ಅಭಿವೃದ್ಧಿಗೆ ಮುಂದಾಗಬೇಕು ಎಂದು ದಲಿತ ಮುಖಂಡರು ಸಂಸದ ಡಾ| ಉಮೇಶ ಜಾಧವಗೆ ಮನವಿ ಸಲ್ಲಿಸಿದರು.

ಸನ್ನತಿ ಹೊರ ವಲಯದ ಕನಗನಹಳ್ಳಿ ಜಮೀನೊಂದರಲ್ಲಿ ದೊರೆತ ಬೌದ್ಧ ಇತಿಹಾಸದ ಕುರುಹಿನ ಜಾಡು ಹಿಡಿದು 1994ರಲ್ಲಿ ಉತ್ಖನನ ನಡೆಸಲಾಗಿದೆ. ಬೃಹತ್‌ ಬೌದ್ಧ ಸ್ತೂಪ, ಬುದ್ಧ ವಿಹಾರ ಕಟ್ಟಡ, ಸಾವಿರಾರು ಬದ್ಧನ ಮೂರ್ತಿಗಳು, ಬುದ್ಧನ ಜಾತಕ ಕಥೆ ಹೇಳುವ ಶಿಲ್ಪಕಲೆಗಳು, ಸಾಮ್ರಾಟ್‌ ಅಶೋಕ ಚಕ್ರವರ್ತಿಯ ಬೌದ್ಧ ಧರ್ಮ ಪ್ರಚಾರದ ಮಹತ್ವ ಹೇಳುವ ಶಾಸನಗಳು ಪತ್ತೆಯಾಗಿವೆ. ಕಳೆದ 20 ವರ್ಷಗಳಿಂದ ಈ ಪ್ರದೇಶ ಅಭಿವೃದ್ಧಿ ಕಾಣದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಭಿವೃದ್ಧಿಪಡಿಸಬೇಕಾದ ಕೇಂದ್ರ ಪ್ರಾಚ್ಯವಸ್ತು ಇಲಾಖೆ ನಿಷ್ಕಾಳಜಿ ಪ್ರದರ್ಶಿಸಿದೆ ಎಂದು ಸಂಸದರ ಗಮನಕ್ಕೆ ತರಲಾಯಿತು. ನಿರ್ಮಿಸಲಾದವಸ್ತುಸಂಗ್ರಹಾಲಯ ಕಟ್ಟಡ ಬಳಕೆಗೆ ಮುಕ್ತವಾಗಿಲ್ಲ. ಬೌದ್ಧ ತಾಣದ ಪ್ರದೇಶದಲ್ಲಿ ಮುಳ್ಳುಕಂಟಿ ಬೆಳೆದು ಅವ್ಯವಸ್ಥೆಯ ಆಗರವಾಗಿದೆ. ಸನ್ನತಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಿಲ್ಲ ಎಂದು ತಿಳಿಸಿದರು.

ಪ್ರಪಂಚದ ಗಮನ ಸೆಳೆದಿರುವ ಸನ್ನತಿ ಬೌದ್ಧ ಸ್ತೂಪ ತಾಣಕ್ಕೆ ನಿತ್ಯವೂ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಪ್ರವಾಸಿ ಗರು ಆಗಮಿಸುತ್ತಾರೆ. ಲೇಖಕರು, ಸಂಶೋಧಕರು, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ವಿದೇಶದ ಬೌದ್ಧ ಸನ್ಯಾಸಿಗಳು ಈ ಸ್ಥಳದ ಮಹತ್ವ ಅರಿಯಲು ಬರುತ್ತಾರೆ. ಆದರೆ ಇಲ್ಲಿ ಯಾವುದೇ ಸೌಲಭ್ಯಗಳಿಲ್ಲದ ಕಾರಣ ನಿರ್ಲಕ್ಷಿತ ತಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸನ್ನತಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದರಲ್ಲಿ ಕೋರಿದರಲ್ಲದೇ, ನಿರ್ಲಕ್ಷ್ಯ ಮುಂದುವರಿದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಇಂಟರ್‌ ನ್ಯಾಷನಲ್‌ ಬುದ್ಧಿಸ್ಟ್‌ ಯೂತ್‌ ಆರ್ಗನೈಸೇಷನ್‌ ಮುಖಂಡ, ವಾಡಿಯ ಡಾ| ಬಿ.ಆರ್‌. ಅಂಬೇಡ್ಕರ್‌ ತರುಣ ಸಂಘದ ಅಧ್ಯಕ್ಷ ಸಂದೀಪ ಕಟ್ಟಿ, ದಲಿತ ಮುಖಂಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರ, ಬೌದ್ಧ ಉಪಾಸಕರಾದ ರಣಧೀರ ಹೊಸಮನಿ, ಸಿದ್ಧು ದಿಕ್ಸಂಗಿ , ಜೈಭೀಮ ಹೊನಗುಂಟಾ, ರಜನಿಕಾಂತ ಕೊಂಬೆನೂರ, ಮಲ್ಲಿನಾಥ ಕಿವುಡೆ, ಸುನೀಲ ಚವನೂರ, ಸುಕ್ಕಪ್ಪ ಕೊಲ್ಲೂರ, ಯಲ್ಲಪ್ಪ ಕಟ್ಟಿಮನಿ ನಿಯೋಗದಲ್ಲಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.