ಹಕ್ಕುಪತ್ರ ವಿತರಿಸಲು ಮನವಿ
Team Udayavani, Jun 24, 2022, 2:51 PM IST
ಶಹಾಬಾದ: ನಗರದ ರಾಮಘಡ ಆಶ್ರಯ ಕಾಲೋನಿಯ ಸುಮಾರು 267 ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು ತಾಂತ್ರಿಕ ದೋಷ ಎದುರಾಗುತ್ತಿದ್ದು, ಅದನ್ನು ಸರಿಪಡಿಸಿ ಹಕ್ಕು ಪತ್ರ ನೀಡಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಎಸ್ಯುಸಿಐ (ಸಿ) ಸ್ಥಳೀಯ ಸಮಿತಿ ನಿಯೋಗದ ವತಿಯಿಂದ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದ ರಾಮಘಡ ಆಶ್ರಯ ಕಾಲೋನಿಯ ಸುಮಾರು 267 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಬೇಕೆಂದು ಜಿಲ್ಲಾಧಿಕಾರಿಗಳಿಂದ ಅನುಮೋದನೆ ದೊರಕಿದೆ. ಆದರೂ ಸುಮಾರು ಎಂಟು ತಿಂಗಳಿನಿಂದ ಇಲ್ಲಿಯ ವರೆಗೆ ಹಕ್ಕು ಪತ್ರ ನೀಡದೇ ಇರುವುದರಿಂದ ತೊಂದರೆಗೆ ಸಿಲುಕಿದ್ದಾರೆ. ಇಲ್ಲಿನ ಜನರು ಹಲವು ವರ್ಷಗಳಿಂದ ಕಚೇರಿಗಳಿಗೆ ಅಲೆದಾಡಿದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಈ ಸಮಸ್ಯೆ ಕೂಡಲೇ ಬಗೆಹರಿಸಬೇಕೆಂದು ಮನವಿ ಸಲ್ಲಿಸಿದರು.
ಎಸ್ಯುಸಿಐ (ಸಿ) ಸ್ಥಳೀಯ ಸದಸ್ಯ ರಾಘವೇಂದ್ರ ಎಂ.ಜಿ. ನೇತೃತ್ವದ ನಿಯೋಗದಲ್ಲಿ ಆಶ್ರಯ ಕಾಲೋನಿ ನಿವಾಸಿಗಳಾದ ಗಿರೇಪ್ಪ, ರಮೇಶ ಗೌಡ, ವಿಜಯಕುಮಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪಶ್ಚಿಮ ಬಂಗಾಳದಲ್ಲಿ ಅಲ್ ಖೈದಾ ಶಂಕಿತ ಸದಸ್ಯರಿಬ್ಬರ ಬಂಧನ
ಪೆನ್ಚಾಕುವಿನಿಂದ ಇರಿದು ವಿದ್ಯಾರ್ಥಿ ಕೊಲೆ: ಆರೋಪಿಗಳ ಬಂಧನ
Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”
ಆಲಮಟ್ಟಿ ಶಾಸ್ತ್ರೀ ಜಲಾಶಯದ ಪ್ರವಾಹ ನಿರ್ವಹಣೆಗೆ ಮಹಾ ಸಿ.ಎಂ. ಶ್ಲಾಘನೆ : ಕೋಳಕೂರ
ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ