ರಿಂಗ್ರೋಡ್ ಕಾಮಗಾರಿಗೆ ಮನವಿ
Team Udayavani, Apr 24, 2022, 10:48 AM IST
ಆಳಂದ: ಬಹುದಿನಗಳ ಬೇಡಿಕೆ ಯಾಗಿರುವ ಆಳಂದ ಪಟ್ಟಣಕ್ಕೆ ವರ್ಥುಲ ರಸ್ತೆ (ರಿಂಗ್ರೋಡ್) ಕಾಮಗಾರಿ ಸೇರಿದಂತೆ ಇನ್ನಿತರ ಬೇಡಿಕೆಗಳ ಕಾಮಗಾರಿಗೆ ಮಂಜೂರಾತಿ ನೀಡಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದರು.
ಕಲಬುರಗಿಯಲ್ಲಿ ಆಗಮಿಸಿದ್ದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಶಾಸಕರು, ಆಳಂದ ಪಟ್ಟಣವು ಕರ್ನಾಟಕ ಮಹಾರಾಷ್ಟ್ರ,ಆಂಧ್ರಪ್ರದೇಶಕ್ಕೆ ಸಂಪರ್ಕ ಒದಗಿಸುವ ಪ್ರಮುಖ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಪಟ್ಟಣದ ಹೊರವಲಯಕ್ಕೆ ವರ್ಥುಲ ರಸ್ತೆ ನಿರ್ಮಾಣ ಕಾಮಗಾರಿ ಬಹುದಿನಗಳ ಬೇಡಿಕೆಯಾಗಿದ್ದು, ಇದು ಸುಮಾರು 25ಕಿ.ಮೀ ವರ್ಥುಲ ರಸ್ತೆ ಆಗಲಿದೆ. ಇದರ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ನೀಡಬೇಕು ಎಂದು ಮನವಿ ಸಲ್ಲಿಸಿದರು.
ಪಟ್ಟಣದಲ್ಲಿ ಶಾಶ್ವತ ಮತ್ತು ಸಮರ್ಪಕವಾಗಿ ಎಲ್ಲ ಬಡಾವಣೆಗಳಿಗೆ ಕುಡಿಯುವ ನೀರು ಒದಗಿಸಲು ಹೊಸ ಪೈಪಲೈನ್ ಕಾಮಗಾರಿಗೆ 118 ಕೋಟಿ ರೂ. ಅಗತ್ಯವಾಗಿದೆ. ಅಲ್ಲದೆ 100 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಕೈಗೊಳ್ಳಲು ಆದೇಶಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯ ಮಂತ್ರಿಗಳು ಸ್ಪಂದಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್