ಪಿಯು ಕಾಲೇಜು ಸ್ಥಳಾಂತರ ವಿರೋಧಿಸಿ ಮನವಿ
Team Udayavani, Jun 25, 2019, 2:04 PM IST
ಆಳಂದ: ಬಾಲಕಿಯರ ಪಿಯು ಕಾಲೇಜು ಸ್ಥಳಾಂತರಕ್ಕೆ ವಿರೋಧಿಸಿ ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಆಳಂದ: ಪಟ್ಟಣದಲ್ಲಿನ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ದೂರದ ಪ್ರದೇಶಕ್ಕೆ ಸ್ಥಳಾಂತರಿಸುವ ಕ್ರಮ ಖಂಡಿಸಿದ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಮೊದಲಿನ ಸ್ಥಳದಲ್ಲೇ ಮುಂದುವರಿಯಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಡಿಡಿಪಿಯುಗೆ ಮನವಿ ಸಲ್ಲಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್. ಕೋರಳ್ಳಿ ಮಾರನಾಡಿ, ಪಟ್ಟಣದಲ್ಲಿನ ಏಕೈಕ ಸರ್ಕಾರಿ ಬಾಲಕಿಯರ ಕಾಲೇಜನ್ನು ಹೊರವಲಯದ ಸುರಕ್ಷಿತವಲ್ಲದ ನಿರ್ಜನ ಪ್ರದೇಶದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸುವುದರಿಂದ ವಿದ್ಯಾರ್ಥಿನಿಯರಿಗೆ ತೊಂದರೆಯಾಗುತ್ತದೆ. ಬಸ್ ಸೌಕರ್ಯವಿಲ್ಲ. ಪಟ್ಟಣ ಸೇರಿ ಗ್ರಾಮೀಣ ಭಾಗದ ವಿದ್ಯಾರ್ಥಿಯನಿರಿಗೆ ದೂರದ ಕಾಲೇಜಿಗೆ ಹೋಗುವುದು ಅಸಾಧ್ಯವಾಗಿದೆ. ಇಂಥ ಗಂಭೀರವಾದ ವಿಷಯವನ್ನು ಸಂಬಂಧಿತ ಅಧಿಕಾರಿಗಳ ಹಗುರವಾಗಿ ಪರಿಗಣಿಸಿದ್ದಾರೆ ಎಂದು ಹರಿಹಾಯ್ದರು.
ನಿರ್ಜನ ಪ್ರದೇಶಕ್ಕೆ ಕಾಲೇಜು ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಪಾಲಕರು ಗೊಂದಲಕ್ಕೆ ಸಿಲುಕಿದ್ದಾರೆ. ತಮ್ಮ ಮಕ್ಕಳು ಕಾಲೇಜಿಗೆ ಹೋಗುವುದೇ ಬೇಡ ಎಂದು ಕಳುಹಿಸುತ್ತಿಲ್ಲ. ವಿದ್ಯಾರ್ಥಿನಿಯರಿಗೆ ಅನುಕೂಲ ಒದಗಿಸುವ ಬದಲು ಅನಾನುಕೂಲ ಮಾಡುವುದು ಸರಿಯಲ್ಲ. ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ಸೂಕ್ತ ಸ್ಥಳದಲ್ಲಿ ತಕ್ಷಣವೇ ಕಾಲೇಜು ಕಟ್ಟಡ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತಾಲೂಕಿನ ಎಲ್ಲ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿನಿಯರೊಂದಿಗೆ ಜುಲೈ 1ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ ಆವರಿಗೆ ಮನವಿ ಸಲ್ಲಿಸಿದರು.
ಸಂಘಟನೆ ಯುವ ಘಟಕದ ತಾಲೂಕು ಅಧ್ಯಕ್ಷ ಪ್ರಕಾಶ ಪಾಟೀಲ, ಮುಖಂಡ ಶಿವಲಿಂಗಪ್ಪ ಪಟ್ಟಣಶೆಟ್ಟಿ, ನಾಗರಾಜ ಘೋಡಕೆ, ದೇವಾ ವಾಗ್ದರಿ, ಅಣಿವೀರಯ್ಯ ಸ್ವಾಮಿ, ಲಿಂಗರಾಜ ಜೆರಟಗಿ, ಮಹೇಶ ಕೋಟೆ, ಪರಶುರಾಮ ಜಮಾದಾರ, ವಿದ್ಯಾರ್ಥಿನಿಯರಾದ ನಿಕಿತಾ, ಯಶೋಧಾ, ಅಂಬಿಕಾ, ಪ್ರೀಯಂಕಾ, ಪ್ರತೀಕ್ಷಾ, ಈರಮ್ಮಾ, ಶೃತಿ ಪಾಟೀಲ, ಷರಾ, ಆರೀಫಾ, ಜಯಿಬಾ, ಶೋಭಾ ಮತ್ತು ಸುಶಮಿತಾ ಮತ್ತಿತರು ಪಾಲ್ಗೊಂಡಿದ್ದರು.
ಮನವಿ ಸ್ವೀಕರಿಸಿದ ತಹಸೀಲ್ದಾರರು ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಿಕೊಟ್ಟು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ