ಸಿಂಧುತ್ವ ಪ್ರಮಾಣ ಪತ್ರಕ್ಕಾಗಿ ಗೊಂಡ ಸಮಿತಿಯಿಂದ ಧರಣಿ
Team Udayavani, Mar 10, 2022, 10:20 AM IST
ಚಿಂಚೋಳಿ: ಸಿಂಧುತ್ವ ಪ್ರಮಾಣಪತ್ರ ಹಾಗೂ ಗೊಂಡ ಜಾತಿಗೆ ಎಸ್ಟಿ ಪ್ರಮಾಣ ಪತ್ರ ತಡೆ ಹಿಡಿದಿರುವ ಬಗ್ಗೆ ಸಿಆರ್ಎಲ್ ಸುತ್ತೋಲೆ ಹೊರಡಿಸಿರುವ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಗೊಂಡ ಸಂಘರ್ಷ ಸಮಿತಿ ತಾಲೂಕು ಮುಖಂಡರು ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಬುಧವಾರದಿಂದ ಆರಂಭಿ ಸಿದ್ದಾರೆ.
ಧರಣಿ ಸತ್ಯಾಗ್ರಹದಲ್ಲಿ ಗೊಂಡ ಸಮಾಜದ ಮುಖಂಡ ರೇವಣಸಿದ್ಧಪ್ಪ ಅಣಕಲ್ ಮಾತನಾಡಿ, ರಾಜ್ಯದಲ್ಲಿ ಗೊಂಡ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಕೊಡದೆ ಬಿಜೆಪಿ ಸರ್ಕಾರ ಅನ್ಯಾಯ ಎಸಗುತ್ತಿದೆ. ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿ ಗೊಂಡ ಜನಾಂಗದವರಿದ್ದಾರೆ. ಅನೇಕ ತಲೆಮಾರುಗಳಿಂದ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ಪಡೆದು ಅನೇಕ ಸರ್ಕಾರಿ ಹುದ್ದೆಗಳಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಶೈಕ್ಷಣಿಕವಾಗಿ, ರಾಜಕೀಯವಾಗಿಯೂ ಇದರ ಲಾಭ ಪಡೆಯುತ್ತಿದ್ದೇವೆ. ಆದರೆ ಬಿಜೆಪಿ ಸರ್ಕಾರ ಕಳೆದ 30 ಆಗಸ್ಟ್ 2021ರಂದು ಹೊರಡಿಸಿದ ಆದೇಶದಿಂದ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡ ಹಣಮಂತ ಪೂಜಾರಿ ಮಾತನಾಡಿ, ಸರ್ಕಾರದ ಈ ಆದೇಶದಿಂದ ಸರ್ಕಾರಿ ನೌಕರಿಗೆ ನೇಮಕವಾಗಿರುವ ಅಭ್ಯರ್ಥಿಗಳು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖಂಡರಾದ ರವೀಂದ್ರ ಪೂಜಾರ, ಗಂಗಾಧರ ಗಡ್ಡಿಮನಿ, ರಾಮಚಂದ್ರ, ರವಿಕುಮಾರ ಕುಂಚಾವರಂ, ಸಂತೋಷ ಕುಮಾರ ಮಾಳಪ್ಪನೋರ, ಚಿಮ್ಮಾ ಏಇದಲಾಯಿ ಮಹಾದೇವ, ಗೋಪಾಲ ಪೂಜಾರಿ, ಸುರೇಶ ವೈದ್ಯರಾಜ, ಶಿವಕುಮಾರ ಪೋಚಾಲಿ, ರಾಜಕುಮಾರ ಕನಕಪೂರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ