ವಿಧಾನಸಭೆ ಚುನಾವಣೆ; ಸ್ಥಳೀಯರಿಗೆ ಆದ್ಯತೆ ನೀಡಿ
Team Udayavani, May 16, 2022, 12:47 PM IST
ಚಿತ್ತಾಪುರ: ಮುಂಬರುವ ವಿಧಾನಸಭೆ ಚುನಾವಾಣೆಯಲ್ಲಿ ಸ್ಥಳೀಯ ನಾಯಕರಿಗೆ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ವಾಲ್ಮೀಕಿ ನಾಯಕ ಪುತ್ರ ವಿಠ್ಠಲ್ ನಾಯಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಆಗ್ರಹಿಸಿದ್ದಾರೆ.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ಅನೇಕ ವರ್ಷಗಳಿಂದ ಸ್ಥಳೀಯ ಮಟ್ಟದಲ್ಲಿ ತಳಮಟ್ಟದಿಂದ ದುಡಿದ ಮುಖಂಡರು ಅನೇಕರು ಇದ್ದಾರೆ. ಹೀಗಾಗಿ ಬಿಜೆಪಿಯಲ್ಲಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ ಎಂದು ಹೇಳಿದರು.
ಚಿತ್ತಾಪುರ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ದುಡಿದವರು ಅನೇಕ ನಾಯಕರು ಇದ್ದಾರೆ. ಹೀಗಾಗಿ ಚಿತ್ತಾಪುರ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಬಿಜೆಪಿ ಹೈ ಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಹಿಂದೆ ಆಗಿದ್ದ ತಪ್ಪುಗಳು ಮುಂದೆ ಆಗಬಾರದು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಸರ್ವಾಧಿಕಾರಿ ಮತ್ತು ವಂಶಪಾರಂಪರ್ಯ ರಾಜಕಾರಣವಿದೆ. ಹೀಗಾಗಿ ಅಲ್ಲಿ ಸ್ಥಳೀಯರ ಬಗ್ಗೆ ಚಿಂತನೆಯಿಲ್ಲ. ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂಬ ವಿಚಾರವಿಲ್ಲ ಅದೇನಿದ್ದರೂ ಬಿಜೆಪಿಯಲ್ಲಿ ಮಾತ್ರ. ಹೀಗಾಗಿ ಸ್ಥಳೀಯರಿಗೆ ಪ್ರಥಮಾಧ್ಯತೆ ನೀಡಬೇಕೆಂಬ ಒತ್ತಾಯವಿದೆ ಎಂದರು.
ಚಿತ್ತಾಪುರದಲ್ಲಿ ಬಿಜೆಪಿ ಅಂದರೆ ವಾಲ್ಮೀಕಿ ನಾಯಕ, ವಾಲ್ಮೀಕಿ ನಾಯಕ ಅಂದರೆ ಬಿಜೆಪಿ. ಹೀಗಾಗಿ ಸ್ಥಳೀಯ ಮಟ್ಟದ ಪರಿಶಿಷ್ಟ ಜಾತಿಯ ಯಾವುದೇ ನಾಯಕರಿಗೆ ಬಿಜೆಪಿ ಟಕೆಟ್ ನೀಡಲಿ, ಗೆಲುವಿಗೆ ನಾವು ಒಮ್ಮನಿಸಿನಿಂದ ಹಗಲು ರಾತ್ರಿ ಎನ್ನದೇ ಶ್ರಮಿಸುತ್ತೇವೆ ಎಂದು ಹೇಳಿದರು.
ಹಾಲು ಉತ್ಪಾದಕರ ಪ್ರಕೋಷ್ಠ ಜಿಲ್ಲಾ ಸಂಚಾಲಕ ಅಯ್ಯಪ್ಪ ರಾಮತೀರ್ಥ, ಬಿಜೆಪಿ ಪ್ರಮುಖರಾದ ವಾಲ್ಮೀಕಿ ರಾಠೊಡ, ಗೋಪಾಲ ರಾಠೊಡ, ಪೋಮು ರಾಠೊಡ, ಗಿರೀಶ ಭಜಂತ್ರಿ, ರಾಮದಾಸ ಚವ್ಹಾಣ, ಶಿವರಾಮ ಚವ್ಹಾಣ, ಮಹೇಶ ಬಟಗೇರಿ, ವೀರಣ್ಣ ಯಾರಿ, ಭರತ ಭಂಕೂರ, ಹನುಮಾನ ವ್ಯಾಸ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ