ಮೃತ ಕುಟುಂಬಸ್ಥರಿಗೆ ನೆರವು
Team Udayavani, Jan 11, 2022, 12:26 PM IST
ಕಮಲಾಪುರ: ತಾಲೂಕಿನ ಕಿಣಿ ಸಡಕ್ ಗ್ರಾಮದ ರಸ್ತೆಯ ಅಪಘಾತದಲ್ಲಿ ಮೃತಪಟ್ಟ ಹಾಗೂ ನೀರಲ್ಲಿ ಬಿದ್ದು ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬದ ವರ್ಗದವರಿಗೆ ಶಾಸಕ ಬಸವರಾಜ ಮತ್ತಿಮಡು ಸೋಮವಾರ ಸಾಂತ್ವನ ಹೇಳಿದರು.
ಅಪಘಾತದಲ್ಲಿ ಮೃತಪಟ್ಟ ಕಿಣ್ಣಿ ಸಡಕ್ ಗ್ರಾಮದ ಶಿವಶರಣಪ್ಪ ಹನುಮಂತ್ ಅವರ ಮನೆಗೆ ಶಾಸಕರು ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರಲ್ಲದೇ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಲಾಗುವುದು ಎಂದರಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಸಹ ಕಲ್ಪಿಸಿದರು.
ನಂತರ ಶಾಸಕರು, ಕಿಣ್ಣಿಸಡಕ್ದಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಗೊಬ್ಬರವಾಡಿ ಗ್ರಾಮದಲ್ಲಿ ರವಿವಾರ ಬಾವಿಯಲ್ಲಿ ಬಿದ್ದ ಮಕ್ಕಳೆರಡು ಮೃತಪಟ್ಟ ಶಿವಶರಣಪ್ಪ ರಟಕಲ ಮನೆಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದರು. ಮಕ್ಕಳು ಸಾವನ್ನಪ್ಪಿರುವುದು ದೊಡ್ಡ ದುರ್ಘಟನೆಯಾಗಿದೆ. ದು:ಖ ಸಹಿಸುವಂತೆ ಧೈರ್ಯ ತುಂಬಿದರು.
ಎಪಿಎಂಸಿ ಮಾಜಿ ಉಪಾಧ್ಯಕ್ಷ ರಾಜಕುಮಾರ ಕೋಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀಬಾಯಿ ವಿಜಯಕುಮಾರ ಮಾನೆ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ