ಸಂಸದ ಜಾಧವಗೆ ಬಂಜಾರ ಸಂಘದ ನೋಟಿಸ್‌


Team Udayavani, Dec 22, 2021, 12:01 PM IST

8notice

ಕಲಬುರಗಿ: ಪರಿಶಿಷ್ಟ ಜಾತಿಯಲ್ಲಿರುವ ಬಂಜಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಸದ ಡಾ|ಉಮೇಶ ಜಾಧವ ಅವರಿಗೆ ಅಖೀಲ ಭಾರತ ಬಂಜಾರ ಸೇವಾ ಸಂಘದ ರಾಜ್ಯ ಘಟಕದಿಂದ ನೋಟಿಸ್‌ ಜಾರಿ ಮಾಡಲಾಗುತ್ತದೆ ಎಂದು ಸಂಘದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಸಚಿವ ಬಾಬುರಾವ್‌ ಚವ್ಹಾಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಸಮುದಾಯವನ್ನು ಹೈಜಾಕ್‌ ಮಾಡುವ ಉದ್ದೇಶದಿಂದ ಡಾ|ಜಾಧವ ಸಮಾಜದ ಧರ್ಮಗುರುಗಳಾಗಿದ್ದ ದಿ| ರಾಮರಾವ್‌ ಮಹಾರಾಜರನ್ನು ಪ್ರಧಾನಿ ನರೇಂದ್ರ ಮೋದಿ ಬಳಿಗೆ ಕರೆದೊಯ್ದು ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತ ಪ್ರಸ್ತಾವವನ್ನು ಮನವಿ ರೂಪದಲ್ಲಿ ಸಲ್ಲಿಸಿದ್ದಾರೆ. ಇದರಿಂದ ಸಮುದಾಯದ ಜನರಲ್ಲಿ ಗೊಂದಲ ಮೂಡಿದೆ. ಈ ಸಂಬಂಧ ಸಮುದಾಯದ ಮಟ್ಟದಲ್ಲಿ ಒಂದು ಸುತ್ತಿನ ಸಭೆ ಮಾಡಿ ಚರ್ಚಿಸಲಾಗಿದ್ದು, ಮತ್ತೊಮ್ಮೆ ಸಭೆ ಸೇರಿ ವಿವರಣೆ ನೀಡುವಂತೆ ಡಾ|ಜಾಧವ ಅವರಿಗೆ ನೋಟಿಸ್‌ ನೀಡಲಾಗುವುದು ಎಂದರು.

ಅವರು ನೋಟಿಸ್‌ಗೆ ವಿವರಣೆ ನೀಡುವ ಆಧಾರದ ಮೇಲೆ ನ್ಯಾಯ ಪಂಚಾಯಿತಿ ಕರೆಯಲಾಗುತ್ತದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜನ ಜಾಗೃತಿ ಸಮಾವೇಶಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಅಧಿಕಾರ ಕೊಟ್ಟಿದ್ಯಾರು?

ಬಂಜಾರ ಸಮುದಾಯ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿದೆ. ಇತರೆ ರಾಜ್ಯಗಳಲ್ಲಿ ಹಿಂದಳಿದ ವರ್ಗ, ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ. ಆದರೆ, ಡಾ|ಉಮೇಶ ಜಾಧವ ಇಡೀ ಬಂಜಾರ ಜನಾಂಗಕ್ಕೆ ಪರಿಶಿಷ್ಟ ಪಂಗಡದಲ್ಲಿನ ಅರಣ್ಯ ಹಕ್ಕು ನಿಯಮಗಳ ವಿನಾಯಿತಿ ಕುರಿತು ಪ್ರಧಾನಿವರೆಗೆ ಮನವಿ ಸಲ್ಲಿಸಿದ್ದಾರೆ. ಇದು ಈಗಾಗಲೇ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯೊಳಗಿರುವ ಸಮುದಾಯಕ್ಕೆ ಯಾವ ಸಂದೇಶ ರವಾನೆ ಮಾಡುತ್ತದೆ? ಸ್ವತಃ ತಂದೆ-ಮಗ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಗೆದ್ದು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೇಳುವುದು ಸಮುದಾಯಕ್ಕೆ ಮಾಡಿದ ದ್ರೋಹವಲ್ಲವೇ ಎಂದು ಪ್ರಶ್ನಿಸಿದರು.

ಜಾತಿ-ಧರ್ಮದ ಮೇಲೆ ಸಂಸದರು ರಾಜ ಕೀಯ ಮಾಡಬಾರದು. ಪ್ರಧಾನಿ ಅವರಿಗೆ ಸಲ್ಲಿಸಿ ರುವ ಮನವಿ ಪತ್ರ ವಾಪಸ್‌ ಪಡೆಯಬೇಕು. ಇಲ್ಲವೇ, ಸಮಾಜದ ಎಲ್ಲ ಗುರುಗಳನ್ನು ಮತ್ತೂಮ್ಮೆ ಪ್ರಧಾನಿ ಬಳಿಗೆ ಕರೆದೊಯ್ದು, ಈ ಗೊಂದಲಕ್ಕೆ ತೆರೆ ಎಳೆಯುವ ಕೆಲಸವನ್ನು ಮಾಡಬೇಕೆಂದು ಒತ್ತಾಯಿಸಿದರು. ಸಂಘದ ಪದಾಧಿಕಾರಿಗಳಾದ ಪ್ರವೀಣ ಜಾಧವ, ಕಿಶನ್‌ ಚವ್ಹಾಣ, ತುಳಸಿರಾಮ ಪವಾರ, ಬಾಳು ರಾಠೊಡ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.