ಸಾಲ ಪಡೆಯಲು ಜನಜಂಗುಳಿ
Team Udayavani, Nov 30, 2021, 11:22 AM IST
ಚಿಂಚೋಳಿ: ಡಿಸಿಸಿ ಬ್ಯಾಂಕ್ನಿಂದ ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡಿದ ಶೂನ್ಯ ಬಡ್ಡಿ ಸಾಲ ಚೆಕ್ ನೀಡಿದ್ದರಿಂದ ರೈತರು ತಮ್ಮ ಸಾಲದ ಹಣವನ್ನು ಪಡೆದುಕೊಳ್ಳಲು ಡಿಸಿಸಿ ಬ್ಯಾಂಕ್ನಲ್ಲಿ ನೂಕು ನುಗ್ಗಲು ಕಂಡು ಬಂತು. ತಾಲೂಕಿನ ಕೆಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ನಿಂದ 2020-21ನೇ ಸಾಲಿನಲ್ಲಿ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆಯನ್ನು ಪ್ರಸಕ್ತ ಸಾಲಿನಲ್ಲಿ ನೀಡಲಾಗಿದೆ.
ಅನೇಕ ಗ್ರಾಮಗಳಿಂದ ಆಗಮಿಸಿದ ರೈತರು ತಮ್ಮ ಪಾಸ್ಬುಕ್ಗಳೊಂದಿಗೆ ಡಿಸಿಸಿ ಬ್ಯಾಂಕ್ಗೆ ಆಗಮಿಸಿದ್ದರು. ಬ್ಯಾಂಕ್ನಲ್ಲಿ ಸ್ಥಳದ ಅಭಾವ ಇರುವುದರಿಂದ ಜನ ಜಂಗುಳಿ ರೈತರು ತಮ್ಮ ಸಾಲದ ಹಣವನ್ನು ವಿತ್ಡ್ರಾ ಓಚರಗಳನ್ನು ಅಲ್ಲಲ್ಲಿ ಕುಳಿತುಕೊಂಡು ಬರೆಯುತ್ತಿದ್ದರು. ಕೆಲವರು ನೆಲದಲ್ಲಿಯೇ ಕುಳಿತುಕೊಂಡು ಬರೆದು ಕೊಡುತ್ತಿದ್ದರು. ಆದರೆ ಬ್ಯಾಂಕ್ನಲ್ಲಿ ಹಣದ ಲಭ್ಯತೆ ಇಲ್ಲದ ಕಾರಣ ರೈತರಿಗೆ ಟೋಕನ್ ಬರೆದುಕೊಡುತ್ತಿದ್ದರು. ದೂರದ ಗ್ರಾಮಗಳಿಂದ ಆಗಮಿಸಿದ ರೈತರು ನಿರಾಶೆಯಿಂದ ಮನೆಗೆ ಮರಳಿದರು.
ಬ್ಯಾಂಕ್ನಿಂದ ಸಾಲದ ಹಣವನ್ನು ಪಡೆದುಕೊಳ್ಳುವುದಕ್ಕಾಗಿ ಡಿಸಿಸಿ ಬ್ಯಾಂಕ್ಗೆ ಬೈಕ್, ಆಟೋ, ಜೀಪುಗಳಲ್ಲಿ ರೈತರು ಆಗಮಿಸಿದ್ದರಿಂದ ಬ್ಯಾಂಕ್ ದಾರಿಯಲ್ಲಿ ವಾಹನಗಳ ನಿಲುಗಡೆ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ
HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ
PM ಮೋದಿ ಸಮನಾದ ನಾಯಕ ಕಾಂಗ್ರೆಸ್ನಲ್ಲಿಲ್ಲ: ಬಿಎಸ್ವೈ
Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ
Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ