ಸಾಲ ಪಡೆಯಲು ಜನಜಂಗುಳಿ
Team Udayavani, Nov 30, 2021, 11:22 AM IST
ಚಿಂಚೋಳಿ: ಡಿಸಿಸಿ ಬ್ಯಾಂಕ್ನಿಂದ ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡಿದ ಶೂನ್ಯ ಬಡ್ಡಿ ಸಾಲ ಚೆಕ್ ನೀಡಿದ್ದರಿಂದ ರೈತರು ತಮ್ಮ ಸಾಲದ ಹಣವನ್ನು ಪಡೆದುಕೊಳ್ಳಲು ಡಿಸಿಸಿ ಬ್ಯಾಂಕ್ನಲ್ಲಿ ನೂಕು ನುಗ್ಗಲು ಕಂಡು ಬಂತು. ತಾಲೂಕಿನ ಕೆಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ನಿಂದ 2020-21ನೇ ಸಾಲಿನಲ್ಲಿ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆಯನ್ನು ಪ್ರಸಕ್ತ ಸಾಲಿನಲ್ಲಿ ನೀಡಲಾಗಿದೆ.
ಅನೇಕ ಗ್ರಾಮಗಳಿಂದ ಆಗಮಿಸಿದ ರೈತರು ತಮ್ಮ ಪಾಸ್ಬುಕ್ಗಳೊಂದಿಗೆ ಡಿಸಿಸಿ ಬ್ಯಾಂಕ್ಗೆ ಆಗಮಿಸಿದ್ದರು. ಬ್ಯಾಂಕ್ನಲ್ಲಿ ಸ್ಥಳದ ಅಭಾವ ಇರುವುದರಿಂದ ಜನ ಜಂಗುಳಿ ರೈತರು ತಮ್ಮ ಸಾಲದ ಹಣವನ್ನು ವಿತ್ಡ್ರಾ ಓಚರಗಳನ್ನು ಅಲ್ಲಲ್ಲಿ ಕುಳಿತುಕೊಂಡು ಬರೆಯುತ್ತಿದ್ದರು. ಕೆಲವರು ನೆಲದಲ್ಲಿಯೇ ಕುಳಿತುಕೊಂಡು ಬರೆದು ಕೊಡುತ್ತಿದ್ದರು. ಆದರೆ ಬ್ಯಾಂಕ್ನಲ್ಲಿ ಹಣದ ಲಭ್ಯತೆ ಇಲ್ಲದ ಕಾರಣ ರೈತರಿಗೆ ಟೋಕನ್ ಬರೆದುಕೊಡುತ್ತಿದ್ದರು. ದೂರದ ಗ್ರಾಮಗಳಿಂದ ಆಗಮಿಸಿದ ರೈತರು ನಿರಾಶೆಯಿಂದ ಮನೆಗೆ ಮರಳಿದರು.
ಬ್ಯಾಂಕ್ನಿಂದ ಸಾಲದ ಹಣವನ್ನು ಪಡೆದುಕೊಳ್ಳುವುದಕ್ಕಾಗಿ ಡಿಸಿಸಿ ಬ್ಯಾಂಕ್ಗೆ ಬೈಕ್, ಆಟೋ, ಜೀಪುಗಳಲ್ಲಿ ರೈತರು ಆಗಮಿಸಿದ್ದರಿಂದ ಬ್ಯಾಂಕ್ ದಾರಿಯಲ್ಲಿ ವಾಹನಗಳ ನಿಲುಗಡೆ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ