ಮಹಿಳಾ ಪೌರ ಕಾರ್ಮಿಕರಿಗೆ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನ
Team Udayavani, May 12, 2022, 1:30 PM IST
ಕಲಬುರಗಿ: ರಾಜ್ಯದಲ್ಲಿ ಶೀಘ್ರವೇ ಬಿಬಿಎಂಪಿ ಸೇರಿದಂತೆ 10 ಮಹಾನಗರ ಪಾಲಿಕೆಗಳ ಪೌರ ಕಾರ್ಮಿಕ ಮಹಿಳಾ ಸಿಬ್ಬಂದಿಗೆ ಬ್ಯಾಟರಿ ಚಾಲಿತ ದ್ವಿಚಕ್ರ ವಾಹನ ವಿತರಣೆ ಮಾಡಲಾಗುವುದು ಎಂದು ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರವೇ 15 ದಿನದೊಳಗೆ ಎಲ್ಲ ಪಾಲಿಕೆಗಳ ಮಹಿಳಾ ಪೌರ ಕಾರ್ಮಿಕರಿಗೆ ವಿತರಣೆ ಮಾಡಲಾಗುವುದು. ಅಲ್ಲದೇ, ಸಫಾಯಿ ಕರ್ಮಚಾರಿ ಕುಟುಂಬದಲ್ಲಿರುವ 8ನೇ ತರಗತಿಯಿಂದ ಪದವಿ ವರೆಗಿನ ವ್ಯಾಸಂಗ ಮಾಡುವ ವಿದ್ಯಾಥಿಗಳಿಗೆ 11 ಸಾವಿರ ಮುಖಬೆಲೆಯ ಟ್ಯಾಬ್ ನೀಡಲಾಗುವುದು. ಕಳೆದ ಬಾರಿ ಸಹ 2000 ಎರಡು ಸಾವಿರ ಟ್ಯಾಬ್ ವಿತರಿಸಲಾಗಿತ್ತು ಎಂದ ಅವರು, ವಿದ್ಯಾವಂತ ನಿರುದ್ಯೋಗಿಗಳಿಗೂ ಸ್ವಯಂ ಉದ್ಯೋಗ ಕೈಗೊಳ್ಳಲು 30ಲಕ್ಷ ರೂ.ವರೆಗೆ ಸಾಲ-ಸಹಾಯಧನ ಸೌಲಭ್ಯ ಸಿಗಲಿವೆ ಎಂದು ಮಾಹಿತಿ ನೀಡಿದರು.
ಕಾರ್ಮಿಕರ ಮರು ಸರ್ವೇ ಮಾಡಿ
ರಾಜ್ಯದಲ್ಲಿ ಸಫಾಯಿ ಕರ್ಮಚಾರಿ, ಸ್ಕ್ಯಾವೆಂಜರ್ ಗುರುತಿಸಲು ಮತ್ತೂಮ್ಮೆ ಮರು ಸರ್ವೇ ಮಾಡಲಾಗುತ್ತಿದೆ. ಈಗ ರಾಜ್ಯದಲ್ಲಿ 1.43 ಲಕ್ಷ ಜನರಿದ್ದಾರೆ. ಇದು 2011ರ ಸಮೀಕ್ಷೆ ವರದಿ. ನಗರಸಭೆ, ಪಟ್ಟಣ ಪಂಚಾಯಿತಿ, ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆ, ಬಸ್ ನಿಲ್ದಾಣ ಹೀಗೆ ಎಲ್ಲ ಕಡೆ ಗುರಿಯಾಗಿಸಿಕೊಂಡು ಸರ್ವೇ ಕೈಗೆತ್ತಿಕೊಳ್ಳಲಾಗುವುದು. ಮೊದಲ ಹಂತದಲ್ಲಿ ಮೈಸೂರು, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸರ್ವೇ ನಡೆಸಲಾಗುವುದು ಎಂದರು.
ಒಂದು ಅಂದಾಜಿನ ಪ್ರಕಾರ ರಾಜ್ಯದಲ್ಲಿ ಐದು ಲಕ್ಷ ಸಫಾಯಿ ಕರ್ಮಚಾರಿಗಳಿದ್ದರೆ, 10 ಸಾವಿರ ಸ್ಕ್ಯಾವೆಂಜರ್ಗಳಿದ್ದಾರೆ ಎಂಬ ಮಾಹಿತಿ ಇದೆ. ಮೂರು ತಿಂಗಳಯೊಳಗಾಗಿ ಸರ್ವೇ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸವಲತ್ತುಗಳು ದೊರೆಯುವ ನಿಟ್ಟಿನಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು. ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಗೀತಾ ಆರ್. ವಾಡೇಕರ್, ವಿಜಯಕುಮಾರ ಆಡಕಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ