ನೊಂದ ಅಸಹಾಯಕ ಕುಟುಂಬಕ್ಕೆ ಲಾಕ್‌ಡೌನ್‌ ಬರೆ!

ಬುದ್ಧಿಮಾಂದ್ಯ ಮಕ್ಕಳು, ತಂದೆ ಮನೆಯಲ್ಲಿ ಬಂಧಿ ಕ್ವಾರಂಟೈನ್‌ ಝೋನ್‌ನಲ್ಲಿರುವ ಮನೆ ಊಟ-ಔಷಧಕ್ಕೆ ಪರದಾಟ

Team Udayavani, Apr 29, 2020, 11:42 AM IST

29-April-05

ಬೀದರ: ವಿಕಲಚೇತನ ಮಕ್ಕಳೊಂದಿಗೆ ಮನೆಯಲ್ಲೇ ಬಂಧಿಯಾಗಿರುವ ತಂದೆ ವಿಜಯಕುಮಾರ ರಂಗದಾಳೆ

ಬೀದರ: ಹಾಸಿಗೆ ಹಿಡಿದಿರುವ ಇಬ್ಬರು ಬುದ್ಧಿಮಾಂದ್ಯ ಹೆಣ್ಮಕ್ಕಳು, ಇವರ ಪೋಷಣೆ ಮಾಡುತ್ತಿದ್ದ ಮಡದಿಯೂ ಸಾವು. ಲಾಕ್‌ಡೌನ್‌ ದಿಂದ ಕೆಲಸಕ್ಕೂ ಹೋಗಲು ಸಾಧ್ಯವಾಗದೇ ಮನೆಯಲ್ಲೇ ಬಂಧಿಯಾದ ಅನಾರೋಗ್ಯ ಪೀಡಿತ ತಂದೆ, ಒಂದು ಹೊತ್ತಿನ ಊಟ ಮತ್ತು ಔಷಧಿಗೂ ತೀವ್ರ ಪರದಾಟ!

ನಗರದ ಓಲ್ಡ್‌ ಸಿಟಿಯ ಚೊಂಡಿ ಗಲ್ಲಿಯ ವಿಜಯಕುಮಾರ ರಂಗದಾಳೆ ಕುಟುಂಬದ ಕಣ್ಣೀರಿನ ಕಥೆ ಇದು. ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಸೋಂಕು ಗಡಿ ಜಿಲ್ಲೆ ಬೀದರಗೂ ವ್ಯಾಪಿಸಿ ಆತಂಕವನ್ನು ತಂದೊಡ್ಡಿದೆ. ಈ ಮಹಾಮಾರಿ ವೈರಸ್‌ ಸಂಕಷ್ಟ ಒಬ್ಬರಿಗೆ ಒಂದೊಂದು ರೀತಿಯಲ್ಲಿ ಬಾಧಿಸುತ್ತಿದ್ದು, ರಂಗದಾಳೆ ಕುಟುಂಬವನ್ನು ಅಕ್ಷರಶಃ ಕಣ್ಣೀರಲ್ಲಿ ದಿನ ಕಳೆಯುವಂತಾಗಿದೆ. ಸದ್ಯ ಆರು ಕೊರೊನಾ ಸೋಂಕಿತರುಳ್ಳ ಬೀದರ ಜಿಲ್ಲೆ ಆರೆಂಜ್‌ ಝೋನ್‌ನಲ್ಲಿದೆ. ಎಲ್ಲ ಸೋಂಕಿತರು ನೆಲೆಸಿರುವ “ಓಲ್ಡ್‌ ಸಿಟಿ’ಯನ್ನು ಜಿಲ್ಲಾಡಳಿತ ಸೀಲ್‌ಡೌನ್‌ ಮಾಡಿ ಕಂಟೈನ್ಮೆಂಟ್‌ ಪ್ರದೇಶ ಎಂದು ಘೋಷಿಸಿದೆ. ಪರವಾನಗಿ ಇಲ್ಲದೇ ಯಾರೊಬ್ಬರು ಆ ಪ್ರದೇಶದಿಂದ ಹೊರಗೆ ಹೋಗುವಂತಿಲ್ಲ, ಒಳಗೆ ಪ್ರವೇಶಿಸುವಂತಿಲ್ಲ. ಈ ಓಲ್ಡ್‌ಸಿಟಿಯ ಚೊಂಡಿ ಗಲ್ಲಿಯ ನಿವಾಸಿಯಾಗಿರುವ ವಿಜಯಕುಮಾರ ತನ್ನಿಬ್ಬರು ವಿಕಲಚೇತನ ಮಕ್ಕಳೊಂದಿಗೆ ಸೀಲ್‌ ಡೌನ್‌ ಆಗಿದ್ದಾರೆ. ಮನೆಯಿಂದ ಹೊರಗೆ ಬರಲಾಗದೇ ತುತ್ತು ಅನ್ನ, ಔಷಧಗಾಗಿ ಪರಿತಪಿಸುತ್ತಿದ್ದಾರೆ.

ವೃತ್ತಿಯಲ್ಲಿ ಲೇಡಿಸ್‌ ಟೇಲರ್‌ ಆಗಿರುವ ವಿಜಯಕುಮಾರ 30 ವರ್ಷದ ಇಬ್ಬರು ದೇವಿಕಾ ಮತ್ತು ಪ್ರಿಯಂಕಾ ಇಬ್ಬರು ಮಕ್ಕಳ ಪಾಲನೆ- ಪೋಷಣೆ ಮಾಡುತ್ತ ಬದುಕು ಸಾಗಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ಸಾವು ರಂಗದಾಳೆಗೆ ಬರಸಿಡಿಲಿನಂತೆ ಅಪ್ಪಳಿಸಿದ್ದರೆ ಈಗ ಕೊರೊನಾ ಮತ್ತಷ್ಟು ಬರೆ ಎಳೆದಿದೆ. ಇಷ್ಟು ವರ್ಷಗಳ ಕಾಲ ಕಾಡದ ನೋವು ಈಗ ಅವರನ್ನು ಜರ್ಜರಿತ ಮಾಡಿದೆ. ಇಬ್ಬರು ಮಕ್ಕಳಿಗೆ ಕಿವಿ ಕೇಳಿಸಲ್ಲ, ಮಾತು ಬರುವುದಿಲ್ಲ. ಜತೆಗೆ ಕೈ ಕಾಲಿನಲ್ಲಿ ಸ್ವಾ ಧೀನ ಇಲ್ಲದೇ ಹಾಸಿಗೆಯಲ್ಲೇ ಇರುತ್ತಾರೆ. ಪತ್ನಿ ಸಾವು ಬಳಿಕ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿಯೂ ಅಪ್ಪನ ಹೆಗಲ ಮೇಲಿದೆ. ಪ್ರತಿ ತಿಂಗಳು ಸಾವಿರಾರು ರೂಪಾಯಿ ಔಷಧೋಪಚಾರದ ಖರ್ಚಿದೆ. ಆದರೆ, ಇತ್ತ ಲಾಕ್‌ಡೌನ್‌ದಿಂದ ಕೈಯಲ್ಲಿ ಕೆಲಸ ಇಲ್ಲದೇ ಹಣಕ್ಕಾಗಿ ಪರದಾಟ ನಿಲ್ಲುತ್ತಿಲ್ಲ. ಇನ್ನೊಂದೆಡೆ ಮಕ್ಕಳಿಗೆ ಬರುತ್ತಿದ್ದ ಮಾಸಾಶನ ನಾಲ್ಕು ತಿಂಗಳಿಂದ ನಿಂತಿದೆ. ಜಿಲ್ಲಾಡಳಿತ, ಸಂಘ ಸಂಸ್ಥೆಗಳು ಕೂಡಲೇ ಲಾಕ್‌ಡೌನ್‌ ವಿಧಿಯಾಟದಿಂದ ಕಷ್ಟಕ್ಕೆ ಒಳಗಾಗಿರುವ ವಿಜಯಕುಮಾರ ರಂಗದಾಳೆ ಕುಟುಂಬದ ನೆರವಿಗೆ ಧಾವಿಸಬೇಕಿದೆ. ವಿಜಯಕುಮಾರ ಮೊಬೈಲ್‌ ನಂ.9141835010 ಸಂಪರ್ಕಿಸಬಹುದು.

ಲಾಕ್‌ಡೌನ್‌ದಿಂದ ಕೆಲಸ, ಆದಾಯ ಇಲ್ಲದೇ ವಿಕಲಚೇತನ ಮಕ್ಕಳ ಪೋಷಣೆ ಮಾಡುವುದು ಕಷ್ಟವಾಗುತ್ತಿದೆ. ಅನ್ನವನ್ನು ಯಾರದಾದರೂ ಕೈಕಾಲು ಹಿಡಿದು ಬೇಡಿಕೊಂಡು ತಿನ್ನಬಹುದು. ಆದರೆ, ಅನಾರೋಗ್ಯ ಪೀಡಿತ ನನಗೆ ಮತ್ತು ಮಕ್ಕಳಿಗೆ ಔಷಧಕ್ಕೆ ಪರದಾಟ ಇದೆ. ಈ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಹೋದರೇ ಮಾತ್ರ ಈ ಔಷಧ ಕೊಡುತ್ತಾರೆ. ಆದರೆ, ಕಂಟೈನ್ಮೆಂಟ್‌ ಝೋನ್‌ನಿಂದ ಹೊರಗೆ ಹೋಗಲು ನನ್ನ ಬಳಿ ಪಾಸ್‌ ಇಲ್ಲ. ಜಿಲ್ಲಾಡಳಿತ ಅಗತ್ಯ ಅವಕಾಶ ಮಾಡಿಕೊಡಬೇಕು.
ವಿಜಯಕುಮಾರ ರಂಗದಾಳೆ, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.