ಮಾಸ್ಕ್ ಧರಿಸದವರಿಗೆ ದಂಡ ಹಾಕಿ
ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಡಿಸಿ ರಾಮಚಂದ್ರನ್ ಸೂಚನೆ ಐಎಲ್ಐ-ಸಾರಿ ಪ್ರಕರಣ ಪತ್ತೆಗೆ ಸಮೀಕ್ಷೆ ಮಾಡಿ
Team Udayavani, Jul 1, 2020, 12:24 PM IST
ಬೀದರ: ಕೋವಿಡ್-19 ಸೋಂಕು ತಗುಲದಂತೆ ಮುಂಜಾಗ್ರತೆಗಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಮಾಸ್ಕ್ ಧರಿಸದವಿರಗೆ ದಂಡ ವಿಧಿಸುವ ಕಾರ್ಯಾಚಾರಣೆ ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ತಡೆಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕಾರ್ಯಾಚರಣೆ ವೇಗಗೊಳಿಸಬೇಕು. ಜಿಲ್ಲೆಯ ಎರಡು ನಗರಸಭೆಗಳು, ನಾಲ್ಕು ಪುರಸಭೆಗಳು ಮತ್ತು ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಾಚಾರಣೆ ತೀವ್ರಗೊಳ್ಳಬೇಕು. ನಿಯಮ ಉಲ್ಲಘಿಸಿದವರಿಗೆ ಯಾವುದೇ ಮುಲಾಜಿಲ್ಲದೇ ದಂಡ ವಿಧಿಸಿ ಚುರುಕು ಮುಟ್ಟಿಸಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳಿಗೆ ಬರುವ ಐಎಲ್ಐ ಮತ್ತು ಸಾರಿ ಪ್ರಕರಣಗಳ ಕುರಿತು ನಿತ್ಯ ವರದಿ ಸಲ್ಲಿಸಬೇಕು. ಈ ಮಾಹಿತಿ ಲಭ್ಯವಾದಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣಗಳಿರುವವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿ ಕೋವಿಡ್ ಹರಡದಂತೆ ನೋಡಿಕೊಳ್ಳಲು ಅನುಕೂಲವಾಗುತ್ತದೆ. ಈ ಬಗ್ಗೆ ಎಲ್ಲ ತಾಲೂಕಿನ ಖಾಸಗಿ ಆಸ್ಪತ್ರೆಗಳ ವೈದ್ಯರು ಗಮನ ಹರಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳು ಉಸ್ತುವಾರಿ ನೋಡಿಕೊಳ್ಳಬೇಕು. ಪ್ರತಿದಿನ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ಜರುಗಿಸಿ ವರದಿ ಸಲ್ಲಿಸಬೇಕು. ಜಿಲ್ಲಾ ಮಟ್ಟದಲ್ಲಿರುವ ಹಿರಿಯ ವೈದ್ಯಾಧಿಕಾರಿಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಮಾತನಾಡಿ, ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿ ಐಎಲ್ಐ, ಸಾರಿ ಪ್ರಕರಣಗಳನ್ನು ಗುರುತಿಸಲು ಮನೆಮನೆ ಸಮೀಕ್ಷೆ ಕಾರ್ಯ ತೀವ್ರಗೊಳಿಸಬೇಕು. ಆ ಪ್ರದೇಶದಲ್ಲಿನ ಐಎಲ್ಐ, ಸಾರಿ ಪ್ರಕರಣಗಳು ಮತ್ತು ಗರ್ಭೀಣಿಯರು, ಹತ್ತು ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳು, 60 ವರ್ಷ ಮೇಲ್ಪಟ್ಟವರನ್ನು ಮತ್ತೆ ಹಚ್ಚಿ ಮುಂದಿನ ಕ್ರಮ ಜರುಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಎಸ್ಪಿ ಡಿ.ಎಲ್.ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ, ಭಂವರಸಿಂಗ್ ಮೀನಾ, ಡಿಎಚ್ಒ ಡಾ| ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶಕ ಡಾ| ಶಿವಕುಮಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ