ಡಿಸಿಸಿ ಬ್ಯಾಂಕ್‌ ಹೆಸರಲ್ಲಿ ಬಿಜೆಪಿ ಪ್ರಚಾರ


Team Udayavani, Feb 15, 2022, 11:16 AM IST

7BJP

ಸೇಡಂ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ಹಾಗೂ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ ಡಿಸಿಸಿ ಬ್ಯಾಂಕ್‌ ಹೆಸರಲ್ಲಿ ಬಿಜೆಪಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಹಾಪ್‌ ಕಾಮ್ಸ್‌ ನಿರ್ದೇಶಕ ಹಾಗೂ ಊಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ ಆರೋಪಿಸಿದ್ದಾರೆ.

ಪಟ್ಟಣದ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ ವತಿಯಿಂದ ಬಡ್ಡಿ ರಹಿತ ಸಾಲದ ಚೆಕ್‌ ವಿತರಣೆ ಸಮಾರಂಭ ಆಯೋಜಿಸಲಾಗಿತ್ತು. ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕರು ಹಾಗೂ ನಿರ್ದೇಶಕರ ಸಲಹೆ ಹಾಗೂ ಸೂಚನೆ ಪರಿಗಣಿಸಿಯೇ, ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮದ ಏರ್ಪಡಿಸಲಾಗಿತ್ತು. ಆದರೆ ತಮ್ಮ ಕಾರ್ಯಕರ್ತರಿಗೆ ಸ್ಥಳವಿಲ್ಲ ಎಂದು ತಗಾದೆ ತೆಗೆದ ಶಾಸಕ ರಾಜಕುಮಾರ ಪಾಟೀಲ ರಸ್ತೆಯಲ್ಲೇ ಕುಳಿತು ಹಿಂದಿರುಗಿದ್ದಾರೆ ಎಂದು ಹೇಳಿದರು.

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಸಲ್ಲ. ಆದರೂ ಸಹ ರಾಜಕುಮಾರ ಪಾಟೀಲ ಪ್ರತಿಯೊಂದು ಡಿಸಿಸಿ ಬ್ಯಾಂಕ್‌ ಕಾರ್ಯಕ್ರಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅತಿಥಿ ಸತ್ಕಾರದ ದೃಷ್ಟಿಕೋನದಡಿ ಗ್ರಾಮಕ್ಕೆ ಬಂದ ಅವರನ್ನು ವೇದಿಕೆಗೆ ಆಗಮಿಸುವಂತೆ ಖುದ್ದಾಗಿ ತೆರಳಿ ಮನವಿ ಮಾಡಿದರೂ ಸಹ ಬರಲಿಲ್ಲ. ತಾವಿದ್ದಲ್ಲಿಯೇ, ರಸ್ತೆಯಲ್ಲೇ ಕಾರ್ಯಕ್ರಮ ಮಾಡಲು ಸೂಚಿಸಿದರು.

ರೈತರ ಕಾರ್ಯಕ್ರಮಕ್ಕೆ ಹತ್ತಾರು ವಾಹನಗಳು ಹಾಗೂ ಒಂದು ಡಿ.ಆರ್‌. ವ್ಯಾನ್‌, ಇಬ್ಬರು ಸಿಪಿಐ, ಪಿಎಸ್‌ಐ ಹಾಗೂ ಅನೇಕ ಪೊಲೀಸರ ಜೊತೆ ಬರುವ ಅವಶ್ಯಕತೆ ಏನಿತ್ತು? ಎಂದು ಪ್ರಶ್ನಿಸಿದರು.

ಬಿಜೆಪಿ ಧ್ವಜ ಹಿಡಿದು ರ್ಯಾಲಿ ನಡೆಸಲಾಗಿದೆ. ಅದಕ್ಕೂ ನಾವು ತಕರಾರು ತೆಗೆದಿಲ್ಲ. ಗ್ರಾಮಕ್ಕೆ ಬಂದ ಅತಿಥಿಗಳಿಗೆ ಅವಮಾನಿಸುವು ಗೋಜಿಗೆ ಹೋಗಿಲ್ಲ. ರೆಡ್‌ ಕಾಪೆìಟ್‌ ಹಾಕಿ ಸ್ವಾಗತಿಸಲಾಗಿದೆ. ರಾಜಕೀಯ ದುರುದ್ದೇಶದಿಂದ ರೈತರ ಹೆಸರಲ್ಲಿ ಸಣ್ಣತನ ಪ್ರದರ್ಶಿಸಲಾಗುತ್ತಿದೆ ಎಂದು ದೂರಿದರು.

ಮುಖಂಡ ಜೈಭೀಮ ಊಡಗಿ, ಗುರುಲಿಂಗಪ್ಪ ನಂದಪನೋರ, ಸಂಪತ ಭಾಂಜಿ, ಭೀಮರಾವ್‌ ಅಳ್ಳೊಳ್ಳಿ, ಸೋಮಶೇಖರ ಭಾಂಜಿ, ಲಕ್ಷ್ಮೀಕಾಂತ ತೊಟ್ನಳ್ಳಿ, ರಾಜೇಂದ್ರಪ್ಪ ಸಾಹು ಅಳ್ಳೊಳ್ಳಿ, ನಾಗೇಂದ್ರಪ್ಪ ಸರಡಗಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.