ಬಿಜೆಪಿ ಅಭ್ಯರ್ಥಿ ಪಾಟೀಲ ಹಣವಂತ-ಗುಣವಂತ: ನೀಲಕಂಠ
Team Udayavani, Dec 8, 2021, 12:25 PM IST
ಶಹಾಬಾದ: ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲರು ಸ್ವಂತ ಬಲದಿಂದ ಹಣವಂತರಾಗಿದ್ದು, ಗುಣವಂತರು ಆಗಿದ್ದಾರೆ. ಆದ್ದರಿಂದ ಅವರಿಗೆ ಮತ ನೀಡಿ ಗೆಲ್ಲಿಸಬೇಕೆಂದು ಬಿಜೆಪಿ ಚಿತ್ತಾಪುರ ಮಂಡಲ ಅಧ್ಯಕ್ಷ ನೀಲಕಂಠ ಪಾಟೀಲ ಹೇಳಿದರು. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಅನುದಾನ ಎತ್ತಿಹಾಕಿ ಬಿ.ಜಿ.ಪಾಟೀಲ ರಾಜಕೀಯಕ್ಕೆ ಬಂದಿಲ್ಲ. ಅವರು ಸ್ವಂತ ತೋಳ್ಬಲದ ಮೂಲಕ ಪರಿಶ್ರಮ ಪಟ್ಟು ಹಣವುಳ್ಳವರಾಗಿದ್ದಾರೆ. ಅಲ್ಲದೇ ಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದಾರೆ ಹೊರತು ಹಣ ಮಾಡಲು ಬಂದಿಲ್ಲ ಎಂಬುದನ್ನು ಮತದಾರರು ಅರಿಯಬೇಕು ಎಂದರು. ಬಿ.ಜಿ. ಪಾಟೀಲ ಯಾವುದೇ ಗ್ರಾಪಂಗೆ ಭೇಟಿ ನೀಡಿಲ್ಲ.ಅನುದಾನ ಒದಗಿಸಿಲ್ಲ ಎನ್ನುವ ಮಾತನ್ನು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ನ ಯಾವ ಸದಸ್ಯರು ಗ್ರಾಪಂಗೆ ಭೇಟಿ ನೀಡಿದ್ದಾರೆ. ಅಲ್ಲದೇ ಬಿ.ಜಿ. ಪಾಟೀಲ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಚಿತ್ತಾಪುರ ತಾಲೂಕಿನ ಭಂಕಲಗಾ ಗ್ರಾಮದ ಸಿಸಿ ರಸ್ತೆ ನಿರ್ಮಾಣಕ್ಕೆ ಆರು ಲಕ್ಷ ರೂ. ದಿಗ್ಗಾಂವ ಸಿಸಿ ರಸ್ತೆಗೆ 3ಲಕ್ಷ ರೂ., ಅಲ್ಲೂರ(ಬಿ) ಸಿಸಿ ರಸ್ತೆಗೆ 3 ಲಕ್ಷ ರೂ., ಸಮುದಾಯ ಭವನಕ್ಕೆ 3ಲಕ್ಷ ರೂ., ಸಾತನೂರ ಸಿಸಿ ರಸ್ತೆಗೆ 3ಲಕ್ಷ ರೂ., ಭಂಕೂರ ಗ್ರಾಮದಲ್ಲಿ ಸಿಸಿ ರಸ್ತೆಗೆ 3ಲಕ್ಷ ರೂ., ಈಶ್ವರ ದೇವಸ್ಥಾನದ ಅಭಿವೃದ್ಧಿಗೆ 6ಲಕ್ಷ ರೂ. ಚರಂಡಿ ನಿರ್ಮಾಣಕ್ಕೆ 6ಲಕ್ಷ ರೂ., ಮುತ್ತಗಾ ಗ್ರಾಮದ ಸಿಸಿ ರಸ್ತೆ ನಿರ್ಮಾಣಕ್ಕೆ 3ಲಕ್ಷ ರೂ., ದಂಡಗುಂಡ ದೇವಸ್ಥಾನ ಅಭಿವೃದ್ಧಿಗೆ 15ಲಕ್ಷ ರೂ., ಪೇಠಸಿರೂರ ಗ್ರಾಮದ ಸಿಸಿ ರಸ್ತೆಗೆ 3ಲಕ್ಷ ರೂ, ತೊನಸನಹಳ್ಳಿ ಗ್ರಾಮದ ಬಸ್ ಸೆಲ್ಟರ್ ನಿರ್ಮಾಣಕ್ಕೆ 3ಲಕ್ಷ ರೂ., ಮುಗುಳನಾಗಾವ ಪಶು ಆಸ್ಪತ್ರೆಯ ಕಾಂಪೌಂಡ್ ವಾಲ್ಗೆ 3ಲಕ್ಷ ರೂ., ಮಾಡಬೂಳ ಗ್ರಾಮಲ್ಲಿ 3ಲಕ್ಷ ರೂ., ಗುಂಡುಗುರ್ತಿ ವಿದ್ಯುತ್ ದೀಪ ಹಾಗೂ ಶಾಲಾ ಕಾಂಪೌಂಡ್ಗೆ 3ಲಕ್ಷ ರೂ. ಅನುದಾನ ಮಂಜೂರು ಮಾಡಿದ್ದಾರೆ. ಅಲ್ಲದೇ ಇನ್ನು ಅನೇಕ ಅಭಿವೃದ್ಧಿಗಳಾಗಿವೆ ಎಂದರು. ಹೀಗೆ ಅನೇಕ ಗ್ರಾಮಗಳಿಗೆ ಅನುದಾನ ಒದಗಿಸುವ ಮೂಲಕ ಹಿಂದೆಂದೂ ವಿಧಾನ ಪರಿಷತ್ ಸದಸ್ಯರೊಬ್ಬರು ಇಷ್ಟೊಂದು ಅನುದಾನ ನೀಡಿದ ಉದಾಹರಣೆ ಗಳಿಲ್ಲ. ಆದರೆ ಗೊತ್ತಿಲ್ಲದೇ ಹಾರಿಕೆ ಹೇಳಿಕೆ ನೀಡುತ್ತಿರುವುದು ಅಸಮಂಜಸ ವಾಗಿದೆ. ರಾಷ್ಟ್ರದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ. ಬಿಜೆಯತ್ತ ಮತದಾರರ ಒಲವು ಇರುವುದರಿಂದ ಬಿ.ಜಿ.ಪಾಟೀಲ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’