“ಡ್ರಾಮಾ ಸಂಸದ” ಹೇಳಿಕೆಗೆ ಬಿಜೆಪಿ ಆಕ್ರೋಶ
Team Udayavani, Jan 9, 2022, 10:20 AM IST
ವಾಡಿ: ಪಟ್ಟಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭವೊಂದರಲ್ಲಿ ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಮಾತಿನ ಭರಾಟೆಯಲ್ಲಿ ಸಂಸದ ಡಾ| ಉಮೇಶ ಜಾಧವ ಅವರನ್ನು “ಡ್ರಾಮಾ ಸಂಸದ’ ಎಂದು ಅವಹೇಳನಕಾರಿಯಾಗಿ ಟೀಕಿಸಿದ್ದಕ್ಕೆ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ಶಿವರಾಮ ಪವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರ ವಿರುದ್ಧ ಅಗೌರವದ ಟೀಕೆ ನಿಲ್ಲಿಸದಿದ್ದರೆ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪಟ್ಟಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭಕ್ಕೆ ಬಿಜೆಪಿ ಸರ್ಕಾರವೇ ಅನುದಾನ ನೀಡಿದೆ. ಇದಕ್ಕೆ ಸಂಸದರನ್ನು ಆಹ್ವಾನಿಸದೇ ಶಿಷ್ಠಾಚಾರ ಉಲ್ಲಂಘಿಸಿದ್ದಲ್ಲದೇ ಬ್ಯಾನರ್ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭಾವಚಿತ್ರವನ್ನು ಮುದ್ರಿಸಿಲ್ಲ. ಕೇವಲ ಅಪ್ಪ, ಮಗನ ಭಾವಚಿತ್ರ ಹಾಕಿಸಿದ್ದಾರೆ. ಬಂಜಾರಾ ಧರ್ಮಗುರು ದಿ. ರಾಮರಾವ್ ಮಹಾರಾಜರ ಹೆಸರಿನ ಪತ್ರ ಇಟ್ಟುಕೊಂಡು ಸಮಾಜದಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಬಂಜಾರಾ ಸಮಾಜದ ಕಾಂಗ್ರೆಸ್ ನಾಯಕರಾದ ಬಾಬುರಾವ್ ಚವ್ಹಾಣ, ಸುಭಾಷ ರಾಠೊಡ ಮೂಲಕ ಸಂಸದರ ವಿರುದ್ಧ ಹೇಳಿಕೆ ಕೊಡಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜಾಧವ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಕೇಳುವುದರಲ್ಲಿ ಅರ್ಥವೇ ಇಲ್ಲ. ಡಾ| ಜಾಧವ ಅವರು ಸಂಸದರಾದ ದಿನಗಳಿಂದ ಕೊರೊನಾ ಸೋಂಕು ಬೆನ್ನಟ್ಟಿದೆ. ಆದರೂ ಅವರು ಕೈಕಟ್ಟಿ ಕುಳಿತುಕೊಳ್ಳದೇ ತಾವೇ ಬೆಂಗಳೂರಿಗೆ ಹೋಗಿ ಚುಚ್ಚುಮದ್ದು ತಂದು ಜಿಲ್ಲೆಯ ರೋಗಿಗಳ ಜೀವ ಉಳಿಸುವ ಕೆಲಸ ಮಾಡಿದ್ದಾರೆ ಇಂದು ಕಾಂಗ್ರೆಸ್ನವರಿಗೆ ಕಾಣುವುದಿಲ್ಲವೇ ಎಂದು ಪ್ರಶ್ನಿಸಿದರು.
ಸಂಸದರು ಸನ್ನತಿ ಬೌದ್ಧ ತಾಣಕ್ಕೆ ಭೇಟಿ ನೀಡಿದ್ದು ಕಾಂಗ್ರೆಸ್ಸಿಗರಿಗೆ ನುಂಗಲಾರದ ತುತ್ತಾಗಿದೆ. ಅಧಿಕಾರದಲ್ಲಿದ್ದಾಗ ಸನ್ನತಿ ಅಭಿವೃದ್ಧಿಗೆ ಏನೂ ಮಾಡದವರು, ಜಾಧವ ಅವರಿಗೆ ಆರು ತಿಂಗಳ ಗಡುವು ನೀಡಿದ್ದು ಹಾಸ್ಯಾಸ್ಪದವಾಗಿದೆ. ಆದರೆ ಸಂಸದರ ಅವಧಿ ಮುಗಿಯುವುದರ ಒಳಗೆ ಸನ್ನತಿಗೆ ಸಾಕಷ್ಟು ಅನುದಾನ ಹರಿದುಬರಲಿದೆ ಎಂದರಲ್ಲದೇ ಬುದ್ಧನ ಸ್ಥಳ ವೀಕ್ಷಣೆಯೇ “ಡ್ರಾಮಾ’ ಎಂದಿರುವ ಪ್ರಿಯಾಂಕ್ ಖರ್ಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ತಾಲೂಕು ಉಪಾಧ್ಯಕ್ಷ ಗಿರಿಮಲ್ಲಪ್ಪ ಕಟ್ಟಿಮನಿ, ನಗರ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ರಾಹುಲ್ ಸಿಂಧಗಿ, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಪುರಸಭೆ ಮಾಜಿ ಸದಸ್ಯ ಕಿಶನ್ ಜಾಧವ, ಮುಖಂಡ ರಿಚ್ಚರ್ಡ್ ಮರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ